<p><strong>ಅಳವಂಡಿ:</strong> ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಅಡುಗೆ ಮಾಡಲು ಬಳಕೆ ಮಾಡುತ್ತಿದ್ದ ಕೊಠಡಿಯ ಚಾವಣಿ ಗುರುವಾರ ರಾತ್ರಿ ಕುಸಿದು ಬಿದ್ದಿದೆ.</p>.<p>ಇಲ್ಲಿನ ಪ್ರೌಢಶಾಲೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಆದರೆ ಮಕ್ಕಳಿಗೆ ಗುಣಮಟ್ಟದ ಅಡುಗೆ ತಯಾರಿಸಲು ಸುಸಜ್ಜಿತವಾದ ಬಿಸಿಯೂಟ ಕೊಠಡಿ ಇಲ್ಲದಂತಾಗಿದೆ.</p>.<p>ಮೊದಲಿನಿಂದಲೂ ಶಾಲೆಯಲ್ಲಿ ಬಿಸಿಯೂಟದ ಕೊಠಡಿ ಇರಲಿಲ್ಲ. ಶಾಲೆಯ ಒಂದು ಹಳೆ ಕೊಠಡಿಯನ್ನು ತಾತ್ಕಾಲಿಕವಾಗಿ ಬಿಸಿಯೂಟ ತಯಾರಿಸಲು ಉಪಯೋಗ ಮಾಡಲಾಗುತ್ತಿತ್ತು. ಗುರುವಾರ ರಾತ್ರಿ ಬಿಸಿಯೂಟ ತಯಾರಿಸುವ ಕೊಠಡಿ ಚಾವಣಿ ಬಿದ್ದು ಮಕ್ಕಳಿಗೆ ಬಿಸಿಯೂಟ ತಯಾರಿಸಲು ಮತ್ತಷ್ಟು ತೊಂದರೆಯಾಗಿದೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಅಕ್ಷರ ದಾಸೋಹ ಜಿಲ್ಲೆಯ ಅಧಿಕಾರಿ ಅನಿತಾ ಮಾತನಾಡಿ, ಬಿಸಿಯೂಟ ತಯಾರಿಸಲು ತೊಂದರೆಯಾಗುತ್ತಿರುವುದು ಗಮನಕ್ಕೆ ಇದ್ದು, ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಬಿಸಿಯೂಟ ಕೊಠಡಿ ಕಾಮಗಾರಿ ಅಪೂರ್ಣವಾಗಿದೆ. ಬಿಸಿಯೂಟ ಕೊಠಡಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಗುಡಿ, ಮುಖ್ಯ ಶಿಕ್ಷಕ ಪರಶುರಾಮ ಸಾಲ್ಮನಿ ಹಾಗೂ ಇತರರು ಇದ್ದರು.</p>.<p>ಬಿಸಿಯೂಟ ಕೊಠಡಿ ನನೆಗುದಿಗೆ: ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯ ಬಿಸಿಯೂಟ ಕೊಠಡಿಯು ಕಳೆದ ಹಲವು ವರ್ಷದ ಹಿಂದೆ ನಿರ್ಮಾಣ ಮಾಡಲು ಆರಂಭಿಸಲಾಗಿತ್ತು. ಆದರೆ ಕಳೆದ ಎರಡ್ಮೂರು ವರ್ಷಗಳಿಂದ ಬಿಸಿಯೂಟ ಕೊಠಡಿ ಕಾಮಗಾರಿ ನನೆಗುದಿ ಬಿದ್ದಿವೆ.</p>.<p>ಕಾಮಗಾರಿ ಕೈಗೊಂಡಿದ್ದ ಕೊಠಡಿಯ ಗೋಡೆಗಳು ಸಹ ಶಿಥಿಲಗೊಳುತ್ತಿವೆ. ಸುಸಜ್ಜಿತವಾದ ಬಿಸಿಯೂಟ ಕೊಠಡಿ ನಿರ್ಮಾಣ ಮಾಡಬೇಕು ಎಂಬುದು ಇಲ್ಲಿನ ವಿದ್ಯಾರ್ಥಿಗಳ ಹಾಗೂ ಪೋಷಕರ ಒತ್ತಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅಳವಂಡಿ:</strong> ಸಮೀಪದ ಬೆಟಗೇರಿ ಗ್ರಾಮದ ಸರ್ಕಾರಿ ಹಿರಿಯ ಪ್ರೌಢಶಾಲೆಯಲ್ಲಿ ಅಡುಗೆ ಮಾಡಲು ಬಳಕೆ ಮಾಡುತ್ತಿದ್ದ ಕೊಠಡಿಯ ಚಾವಣಿ ಗುರುವಾರ ರಾತ್ರಿ ಕುಸಿದು ಬಿದ್ದಿದೆ.</p>.<p>ಇಲ್ಲಿನ ಪ್ರೌಢಶಾಲೆಯಲ್ಲಿ ಸುಮಾರು 300ಕ್ಕೂ ಹೆಚ್ಚು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದು, ಆದರೆ ಮಕ್ಕಳಿಗೆ ಗುಣಮಟ್ಟದ ಅಡುಗೆ ತಯಾರಿಸಲು ಸುಸಜ್ಜಿತವಾದ ಬಿಸಿಯೂಟ ಕೊಠಡಿ ಇಲ್ಲದಂತಾಗಿದೆ.</p>.<p>ಮೊದಲಿನಿಂದಲೂ ಶಾಲೆಯಲ್ಲಿ ಬಿಸಿಯೂಟದ ಕೊಠಡಿ ಇರಲಿಲ್ಲ. ಶಾಲೆಯ ಒಂದು ಹಳೆ ಕೊಠಡಿಯನ್ನು ತಾತ್ಕಾಲಿಕವಾಗಿ ಬಿಸಿಯೂಟ ತಯಾರಿಸಲು ಉಪಯೋಗ ಮಾಡಲಾಗುತ್ತಿತ್ತು. ಗುರುವಾರ ರಾತ್ರಿ ಬಿಸಿಯೂಟ ತಯಾರಿಸುವ ಕೊಠಡಿ ಚಾವಣಿ ಬಿದ್ದು ಮಕ್ಕಳಿಗೆ ಬಿಸಿಯೂಟ ತಯಾರಿಸಲು ಮತ್ತಷ್ಟು ತೊಂದರೆಯಾಗಿದೆ.</p>.<p>ಸ್ಥಳಕ್ಕೆ ಭೇಟಿ ನೀಡಿದ ಅಕ್ಷರ ದಾಸೋಹ ಜಿಲ್ಲೆಯ ಅಧಿಕಾರಿ ಅನಿತಾ ಮಾತನಾಡಿ, ಬಿಸಿಯೂಟ ತಯಾರಿಸಲು ತೊಂದರೆಯಾಗುತ್ತಿರುವುದು ಗಮನಕ್ಕೆ ಇದ್ದು, ಮೇಲಧಿಕಾರಿಗಳ ಗಮನಕ್ಕೆ ತರಲಾಗುವುದು. ಬಿಸಿಯೂಟ ಕೊಠಡಿ ಕಾಮಗಾರಿ ಅಪೂರ್ಣವಾಗಿದೆ. ಬಿಸಿಯೂಟ ಕೊಠಡಿ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದರು.</p>.<p>ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ ಗುಡಿ, ಮುಖ್ಯ ಶಿಕ್ಷಕ ಪರಶುರಾಮ ಸಾಲ್ಮನಿ ಹಾಗೂ ಇತರರು ಇದ್ದರು.</p>.<p>ಬಿಸಿಯೂಟ ಕೊಠಡಿ ನನೆಗುದಿಗೆ: ಬೆಟಗೇರಿ ಸರ್ಕಾರಿ ಪ್ರೌಢ ಶಾಲೆಯ ಬಿಸಿಯೂಟ ಕೊಠಡಿಯು ಕಳೆದ ಹಲವು ವರ್ಷದ ಹಿಂದೆ ನಿರ್ಮಾಣ ಮಾಡಲು ಆರಂಭಿಸಲಾಗಿತ್ತು. ಆದರೆ ಕಳೆದ ಎರಡ್ಮೂರು ವರ್ಷಗಳಿಂದ ಬಿಸಿಯೂಟ ಕೊಠಡಿ ಕಾಮಗಾರಿ ನನೆಗುದಿ ಬಿದ್ದಿವೆ.</p>.<p>ಕಾಮಗಾರಿ ಕೈಗೊಂಡಿದ್ದ ಕೊಠಡಿಯ ಗೋಡೆಗಳು ಸಹ ಶಿಥಿಲಗೊಳುತ್ತಿವೆ. ಸುಸಜ್ಜಿತವಾದ ಬಿಸಿಯೂಟ ಕೊಠಡಿ ನಿರ್ಮಾಣ ಮಾಡಬೇಕು ಎಂಬುದು ಇಲ್ಲಿನ ವಿದ್ಯಾರ್ಥಿಗಳ ಹಾಗೂ ಪೋಷಕರ ಒತ್ತಾಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>