ಕೊಪ್ಪಳ: ಹಿಂದಿನ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು ಹಳ್ಳಕೊಳ್ಳಗಳು, ಕೆರೆಗಳು ತುಂಬಿವೆ. ಕೊಪ್ಪಳ ತಾಲ್ಲೂಕಿನ ಕಿನ್ನಾಳ ಬಳಿಯಿರುವ ಹಿರೇಹಳ್ಳ ಡ್ಯಾಂ ಭರ್ತಿಯಾಗಿದ್ದು ನೀರು ಹೊರಬಿಡಲಾಗಿದೆ.
ಡ್ಯಾಂ ಒಟ್ಟು 1.67 ಟಿಎಂಸಿ ಅಡಿ ನೀರು ಸಂಗ್ರಹಣಾ ಸಾಮರ್ಥ್ಯ ಹೊಂದಿದ್ದು ಈಗ 18,886 ಕ್ಯುಸೆಕ್ ನೀರು ಹೊರಬಿಡಲಾಗಿದೆ. ಸುತ್ತಲಿನ ಭತ್ತದ ಗದ್ದೆಗೆ ನೀರು ನುಗ್ಗಿದ್ದು ಬೆಳೆ ಹಾನಿಯಾಗಿದೆ. ಇರಕಲ್ಲಗಡ ಭಾಗದ ಕೆರೆಗಳು ಭರ್ತಿಯಾಗಿವೆ.