<p><strong>ಕೊಪ್ಪಳ:</strong> ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಗಂಧಾಕ್ಷತೆ ವೇಳೆ ಸೀಮಿತ ಜಾತಿ ಹೆಸರು ಬಳಸಿ ಕೆಲ ಜಾತಿಯ ಹೆಸರು ಕೈ ಬಿಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಕಾರಣಕ್ಕಾಗಿ ವಾಗ್ವಾದ ನಡೆದಿದೆ. </p>.<p>ಗಂಧಾಕ್ಷತೆ ವಿಚಾರದಲ್ಲಿ ದೇವಸ್ಥಾನದ ಅರ್ಚಕರು ತಾರತಮ್ಯ ಮಾಡುತ್ತಿದ್ದಾರೆ ಎಂದು ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ವೀರೇಶ ಎಂಬುವವರು ಈ ಹಿಂದೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿವರ ನೀಡುವಂತೆ ಕೇಳಿ ಜಿಲ್ಲಾಡಳಿತ ದೇವಸ್ಥಾನದ ಇಒ ಅವರಿಗೆ ಪತ್ರ ಬರೆದಿತ್ತು. </p>.<p>ಗಂಧಾಕ್ಷತೆ ಎಂಬುದು ಪೂಜಾ ಕೈಂಕರ್ಯದ ಕಾರ್ಯವಿಧಾನವಾಗಿದ್ದು ವೈದಿಕ ಬ್ರಾಹ್ಮಣರು, ದೇಸಾಯಿ, ಸರ್ಕಾರದವರು, ಅಯ್ಯನವರು ಹೀಗೆ ಉಪನಾಮ ಹೇಳಿ ಪೂಜೆ ಸಲ್ಲಿಸಲಾಗುತ್ತದೆ. ಬೇರೆ ಜಾತಿಯವರ ಹೆಸರು ಬಳಸದೆ ತಾರತಮ್ಯ ಮಾಡಲಾಗುತ್ತಿದೆ ಎನ್ನುವುದು ಒಂದು ಗುಂಪಿನವರ ಆಕ್ಷೇಪವಾಗಿತ್ತು. ಅರ್ಚಕರು ಈ ವಿಷಯದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದ್ದು ಇದೇ ಕಾರಣಕ್ಕಾಗಿ ಮಾತಿನ ಚಕಮಕಿ ನಡೆದಿದೆ.</p>.<p>ಆಗ ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ, ಗ್ರಾಮೀಣ ಠಾಣೆಯ ಸಿಪಿಐ ಸುರೇಶ ಡಿ. ಎಲ್ಲರನ್ನೂ ಸಮಾಧಾನಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.</p>.<p>ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಹುಲಿಗೆಮ್ಮ ದೇವಾಲಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತಗೊಂಡಿ ‘ದೇವಸ್ಥಾನ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿದ್ದು, ಅದರ ನಿಯಮದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಯಾರಿಗೂ ತಾರತಮ್ಯ ಮಾಡಿಲ್ಲ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ತಾಲ್ಲೂಕಿನ ಹುಲಿಗಿಯ ಹುಲಿಗೆಮ್ಮ ದೇವಿ ದೇವಸ್ಥಾನದಲ್ಲಿ ಗಂಧಾಕ್ಷತೆ ವೇಳೆ ಸೀಮಿತ ಜಾತಿ ಹೆಸರು ಬಳಸಿ ಕೆಲ ಜಾತಿಯ ಹೆಸರು ಕೈ ಬಿಡಲಾಗುತ್ತಿದೆ ಎನ್ನುವ ಆರೋಪ ಕೇಳಿಬಂದಿದ್ದು, ಈ ಕಾರಣಕ್ಕಾಗಿ ವಾಗ್ವಾದ ನಡೆದಿದೆ. </p>.<p>ಗಂಧಾಕ್ಷತೆ ವಿಚಾರದಲ್ಲಿ ದೇವಸ್ಥಾನದ ಅರ್ಚಕರು ತಾರತಮ್ಯ ಮಾಡುತ್ತಿದ್ದಾರೆ ಎಂದು ದೇವಾಲಯ ಆಡಳಿತ ಮಂಡಳಿ ಅಧ್ಯಕ್ಷ ವೀರೇಶ ಎಂಬುವವರು ಈ ಹಿಂದೆ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿವರ ನೀಡುವಂತೆ ಕೇಳಿ ಜಿಲ್ಲಾಡಳಿತ ದೇವಸ್ಥಾನದ ಇಒ ಅವರಿಗೆ ಪತ್ರ ಬರೆದಿತ್ತು. </p>.<p>ಗಂಧಾಕ್ಷತೆ ಎಂಬುದು ಪೂಜಾ ಕೈಂಕರ್ಯದ ಕಾರ್ಯವಿಧಾನವಾಗಿದ್ದು ವೈದಿಕ ಬ್ರಾಹ್ಮಣರು, ದೇಸಾಯಿ, ಸರ್ಕಾರದವರು, ಅಯ್ಯನವರು ಹೀಗೆ ಉಪನಾಮ ಹೇಳಿ ಪೂಜೆ ಸಲ್ಲಿಸಲಾಗುತ್ತದೆ. ಬೇರೆ ಜಾತಿಯವರ ಹೆಸರು ಬಳಸದೆ ತಾರತಮ್ಯ ಮಾಡಲಾಗುತ್ತಿದೆ ಎನ್ನುವುದು ಒಂದು ಗುಂಪಿನವರ ಆಕ್ಷೇಪವಾಗಿತ್ತು. ಅರ್ಚಕರು ಈ ವಿಷಯದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದ್ದು ಇದೇ ಕಾರಣಕ್ಕಾಗಿ ಮಾತಿನ ಚಕಮಕಿ ನಡೆದಿದೆ.</p>.<p>ಆಗ ಕೊಪ್ಪಳ ತಹಶೀಲ್ದಾರ್ ವಿಠ್ಠಲ ಚೌಗುಲಾ, ಗ್ರಾಮೀಣ ಠಾಣೆಯ ಸಿಪಿಐ ಸುರೇಶ ಡಿ. ಎಲ್ಲರನ್ನೂ ಸಮಾಧಾನಪಡಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.</p>.<p>ಈ ಘಟನೆ ಕುರಿತು ಪ್ರತಿಕ್ರಿಯಿಸಿದ ಹುಲಿಗೆಮ್ಮ ದೇವಾಲಯ ಕಾರ್ಯನಿರ್ವಹಣಾಧಿಕಾರಿ ಅರವಿಂದ ಸುತಗೊಂಡಿ ‘ದೇವಸ್ಥಾನ ರಾಜ್ಯ ಸರ್ಕಾರದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯಲ್ಲಿದ್ದು, ಅದರ ನಿಯಮದಂತೆ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರಲಾಗುತ್ತಿದೆ. ಯಾರಿಗೂ ತಾರತಮ್ಯ ಮಾಡಿಲ್ಲ’ ಎಂದು ಹೇಳಿದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>