<p><strong>ಕುಷ್ಟಗಿ:</strong> ಸಾರಿಗೆ ಬಸ್ ಅನಾನುಕೂಲಕ್ಕೆ ಬೇಸತ್ತ ವಿದ್ಯಾರ್ಥಿಗಳು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಶಾಖಾಪುರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆಯಿತು.</p>.<p>ಪಟ್ಟಣ ಸೇರಿದಂತೆ ಸುತ್ತಲಿನ ಶಾಲಾ, ಕಾಲೇಜುಗಳಿಗೆ ತೆರಳಲು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಗ್ರಾಮದಿಂದ ನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಬಸ್ಸಿನಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಮೊದಲೇ ತುಂಬಿದ್ದರಿಂದ ಶಾಖಾಪುರ ವಿದ್ಯಾರ್ಥಿಗಳಿಗೆ ಬಸ್ ಏರಲು ಸಾಧ್ಯವಾಗಲಿಲ್ಲ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸಾರಿಗೆ ಅವ್ಯವಸ್ಥೆಗೆ ಅಸಮಾಧಾನ ಹೊರಹಾಕಿದರು.</p><p>ಕುಷ್ಟಗಿ ಘಟಕಕ್ಕೆ ಸೇರಿದ ಬಸ್ ಹಿರೇಬನ್ನಿಗೋಳ, ಯಲಬುರ್ತಿ ಮಾರ್ಗವಾಗಿ ಶಾಖಾಪುರ ಗ್ರಾಮದ ಮೂಲಕ ಪುನ: ಕುಷ್ಟಗಿಗೆ ಸಂಚರಿಸುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿಯೇ ಈ ಬಸ್ ಓಡಿಸಲಾಗುತ್ತಿದೆ. ಮೊದಲ ಎರಡೂ ಗ್ರಾಮಗಳ ಬಹಳಷ್ಟು ವಿದ್ಯಾರ್ಥಿಗಳು ಬಸ್ನಲ್ಲಿ ಪ್ರಯಾಣಿಸುವುದರಿಂದ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಇರುವ ಶಾಖಾಪುರ ವಿದ್ಯಾರ್ಥಿಗಳಿಗೆ ನಿಲ್ಲಲು ಸಾಧ್ಯವಾಗದೆ ಪರದಾಡುವಂತಾಗುತ್ತದೆ. ಈ ಸಮಸ್ಯೆಯಿಂದಾಗಿ ಶಾಲೆಗೆ ಗೈರು ಹಾಜರಾಗುವುದು ಸಾಮಾನ್ಯವಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ಬಸ್ ಓಡಿಸಬೇಕು ಎಂದು ಗ್ರಾಮಸ್ಥರು, ವಿದ್ಯಾರ್ಥಿಗಳು ಒತ್ತಾಯಿಸಿದರು.</p><p>ಧಿಡೀರ್ ಪ್ರತಿಭಟನೆಯಿಂದಾಗಿ ಕೆಲವು ಹೊತ್ತು ಬಸ್ ಗ್ರಾಮದಲ್ಲೇ ನಿಲ್ಲುವಂತಾಗಿತ್ತು ನಂತರ ಸಾರಿಗೆ ಇಲಾಖೆ ಸಿಬ್ಬಂದಿ ಮನವೊಲಿಸಿದ ನಂತರ ಗ್ರಾಮಸ್ಥರು ಬಸ್ ಸಂಚರಿಸಲು ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ:</strong> ಸಾರಿಗೆ ಬಸ್ ಅನಾನುಕೂಲಕ್ಕೆ ಬೇಸತ್ತ ವಿದ್ಯಾರ್ಥಿಗಳು ಬಸ್ ತಡೆದು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ತಾಲ್ಲೂಕಿನ ಶಾಖಾಪುರ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆಯಿತು.</p>.<p>ಪಟ್ಟಣ ಸೇರಿದಂತೆ ಸುತ್ತಲಿನ ಶಾಲಾ, ಕಾಲೇಜುಗಳಿಗೆ ತೆರಳಲು ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಈ ಗ್ರಾಮದಿಂದ ನಿತ್ಯ ಸಂಚರಿಸುತ್ತಿದ್ದಾರೆ. ಆದರೆ ಬಸ್ಸಿನಲ್ಲಿ ಸಾಕಷ್ಟು ವಿದ್ಯಾರ್ಥಿಗಳು ಮೊದಲೇ ತುಂಬಿದ್ದರಿಂದ ಶಾಖಾಪುರ ವಿದ್ಯಾರ್ಥಿಗಳಿಗೆ ಬಸ್ ಏರಲು ಸಾಧ್ಯವಾಗಲಿಲ್ಲ. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಸಾರಿಗೆ ಅವ್ಯವಸ್ಥೆಗೆ ಅಸಮಾಧಾನ ಹೊರಹಾಕಿದರು.</p><p>ಕುಷ್ಟಗಿ ಘಟಕಕ್ಕೆ ಸೇರಿದ ಬಸ್ ಹಿರೇಬನ್ನಿಗೋಳ, ಯಲಬುರ್ತಿ ಮಾರ್ಗವಾಗಿ ಶಾಖಾಪುರ ಗ್ರಾಮದ ಮೂಲಕ ಪುನ: ಕುಷ್ಟಗಿಗೆ ಸಂಚರಿಸುತ್ತದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿಯೇ ಈ ಬಸ್ ಓಡಿಸಲಾಗುತ್ತಿದೆ. ಮೊದಲ ಎರಡೂ ಗ್ರಾಮಗಳ ಬಹಳಷ್ಟು ವಿದ್ಯಾರ್ಥಿಗಳು ಬಸ್ನಲ್ಲಿ ಪ್ರಯಾಣಿಸುವುದರಿಂದ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಇರುವ ಶಾಖಾಪುರ ವಿದ್ಯಾರ್ಥಿಗಳಿಗೆ ನಿಲ್ಲಲು ಸಾಧ್ಯವಾಗದೆ ಪರದಾಡುವಂತಾಗುತ್ತದೆ. ಈ ಸಮಸ್ಯೆಯಿಂದಾಗಿ ಶಾಲೆಗೆ ಗೈರು ಹಾಜರಾಗುವುದು ಸಾಮಾನ್ಯವಾಗುತ್ತಿದೆ. ಇದಕ್ಕಾಗಿ ಪ್ರತ್ಯೇಕ ಬಸ್ ಓಡಿಸಬೇಕು ಎಂದು ಗ್ರಾಮಸ್ಥರು, ವಿದ್ಯಾರ್ಥಿಗಳು ಒತ್ತಾಯಿಸಿದರು.</p><p>ಧಿಡೀರ್ ಪ್ರತಿಭಟನೆಯಿಂದಾಗಿ ಕೆಲವು ಹೊತ್ತು ಬಸ್ ಗ್ರಾಮದಲ್ಲೇ ನಿಲ್ಲುವಂತಾಗಿತ್ತು ನಂತರ ಸಾರಿಗೆ ಇಲಾಖೆ ಸಿಬ್ಬಂದಿ ಮನವೊಲಿಸಿದ ನಂತರ ಗ್ರಾಮಸ್ಥರು ಬಸ್ ಸಂಚರಿಸಲು ಅನುವು ಮಾಡಿಕೊಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>