<p><strong>ಕೊಪ್ಪಳ</strong>: ‘ಜಿಲ್ಲೆಯ ಎಲ್ಲ ವಿದ್ಯಾರ್ಥಿ ವಸತಿ ನಿಲಯಗಳು, ಬಾಲಮಂದಿರಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಅನ್ನು ಕಡ್ಡಾಯವಾಗಿ ಅಳವಡಿಸಿಕೊಂಡು, ನಿಯಮಾನುಸಾರ ಅನುಷ್ಠಾನಗೊಳಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ.ರಾಮತ್ನಾಳ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ಭಾಗೀದಾರರೊಂದಿಗೆ ಸಮಾಲೋಚನೆ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ಮಕ್ಕಳ ರಕ್ಷಣಾ ನೀತಿ-2016ರಲ್ಲಿ ಮಕ್ಕಳಿಗೆ ಒದಗಿಸಬೇಕಾದ ಮೂಲ ಸೌಕರ್ಯಗಳು, ಭದ್ರತೆ, ಮಕ್ಕಳ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಮುಂತಾದ ವಿಷಯಗಳ ಕುರಿತು ವಿಶೇಷ ಹಾಗೂ ವಿವರವಾದ ನಿಯಮಗಳಿವೆ. ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಎಲ್ಲ ವಸತಿ ನಿಲಯಗಳಲ್ಲಿ ಸಲಹಾ ಪೆಟ್ಟಿಗೆ ಇಡಬೇಕು. ಊಟದ ಕೋಣೆ, ಓದುವ ಕೊಠಡಿಗೆ ಹೋಗುವ ಮಾರ್ಗ, ಶೌಚಾಲಯ, ಸ್ನಾನಗೃಹಕ್ಕೆ ಹೋಗುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಡಿವೈಎಸ್ಪಿ ಮುತ್ತಣ್ಣ ಸವರಗೋಳ ಮಾತನಾಡಿ,‘ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿವಿಧ ಇಲಾಖೆಗಳ ಸಹಕಾರ ಮುಖ್ಯವಾಗುತ್ತದೆ. ಪ್ರಸ್ತುತ ಸಾಮಾಜಿಕ ಜಾಲತಾಣಗಳು, ಟಿ.ವಿ., ಸಿನಿಮಾ, ಮೊಬೈಲ್ ಬಳಕೆಯಿಂದ ಮಕ್ಕಳು ವಯಸ್ಸಿಗಿಂತ ಹೆಚ್ಚಿನ ತಿಳಿವಳಿಕೆ ಪಡೆಯುತ್ತಿದ್ದು, ಅದನ್ನು ನಕಾರಾತ್ಮಕ ವಿಷಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಒಂದು ಹಂತದಲ್ಲಿ ಮನಸ್ಸು ವಿಕೃತಗೊಂಡು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಸೇರಿ ಅನೇಕರು ಪಾಲ್ಗೊಂಡಿದ್ದರು.</p>.<p><strong>ಸೂಚನೆ ದಿನವೇ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ</strong></p><p>ಆರೋಗ್ಯ ಇಲಾಖೆಯಲ್ಲಿ ದಾಖಲಾಗುವ ಬಾಲ ಗರ್ಭಿಣಿಯರ ಪ್ರಕರಣಗಳ ಬಗ್ಗೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಪೋಕ್ಸೊ ಕಾಯ್ದೆಯಡಿಯಲ್ಲಿ ಮೊದಲು ಮಾಹಿತಿ ಬಂದವರು ಪ್ರಕರಣ ದಾಖಲಿಸಲು ಅವಕಾಶವಿದ್ದು ಅದನ್ನು ಪಾಲಿಸಬೇಕು ಎಂದು ಶೇಖರಗೌಡ ಜಿ.ರಾಮತ್ನಾಳ ಅಧಿಕಾರಿಗಳಿಗೆ ಸೂಚಿಸಿದರು. ಇದರ ಬೆನ್ನಲ್ಲೇ ಶುಕ್ರವಾರ ಆದೇಶ ಹೊರಡಿಸಿರುವ ಜಿಲ್ಲಾ ಆರೋಗ್ಯ ಕುಟುಂಬ ಹಾಗೂ ಕಲ್ಯಾಣ ಇಲಾಖೆ ’ಬಾಲ ಗರ್ಭಿಣಿ ಪ್ರಕರಣಗಳ ಮಾಹಿತಿಯನ್ನು ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ಕೊಡಬೇಕು. ಒಪಿಡಿ ಚೀಟಿ ಮೇಲೆ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ’ ಎಂದು ಮುದ್ರಿಸಬೇಕು’ ಎಂದು ಸುತ್ತೋಲೆ ಹೊರಡಿಸಿದೆ. ‘ಜು. 12 (ಶುಕ್ರವಾರ) ನಡೆದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ನಡೆದ ಭಾಗಿದಾರರ ಸಮಾಲೋಚನೆ ಸಭೆಯಲ್ಲಿ ಚರ್ಚಿಸಿದಂತೆ ಆದೇಶ ಹೊರಡಿಸಲಾಗಿದೆ’ ಎಂದು ಡಿಎಚ್ಒ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ‘ಜಿಲ್ಲೆಯ ಎಲ್ಲ ವಿದ್ಯಾರ್ಥಿ ವಸತಿ ನಿಲಯಗಳು, ಬಾಲಮಂದಿರಗಳು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಮಕ್ಕಳ ರಕ್ಷಣಾ ನೀತಿ-2016 ಅನ್ನು ಕಡ್ಡಾಯವಾಗಿ ಅಳವಡಿಸಿಕೊಂಡು, ನಿಯಮಾನುಸಾರ ಅನುಷ್ಠಾನಗೊಳಿಸಬೇಕು’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶೇಖರಗೌಡ ಜಿ.ರಾಮತ್ನಾಳ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಶುಕ್ರವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಮಕ್ಕಳ ರಕ್ಷಣಾ ವ್ಯವಸ್ಥೆಗಳ ಕುರಿತು ಭಾಗೀದಾರರೊಂದಿಗೆ ಸಮಾಲೋಚನೆ ಮತ್ತು ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.</p>.<p>‘ಮಕ್ಕಳ ರಕ್ಷಣಾ ನೀತಿ-2016ರಲ್ಲಿ ಮಕ್ಕಳಿಗೆ ಒದಗಿಸಬೇಕಾದ ಮೂಲ ಸೌಕರ್ಯಗಳು, ಭದ್ರತೆ, ಮಕ್ಕಳ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಮುಂತಾದ ವಿಷಯಗಳ ಕುರಿತು ವಿಶೇಷ ಹಾಗೂ ವಿವರವಾದ ನಿಯಮಗಳಿವೆ. ಅದನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು. ಎಲ್ಲ ವಸತಿ ನಿಲಯಗಳಲ್ಲಿ ಸಲಹಾ ಪೆಟ್ಟಿಗೆ ಇಡಬೇಕು. ಊಟದ ಕೋಣೆ, ಓದುವ ಕೊಠಡಿಗೆ ಹೋಗುವ ಮಾರ್ಗ, ಶೌಚಾಲಯ, ಸ್ನಾನಗೃಹಕ್ಕೆ ಹೋಗುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಬೇಕು’ ಎಂದು ನಿರ್ದೇಶನ ನೀಡಿದರು.</p>.<p>ಡಿವೈಎಸ್ಪಿ ಮುತ್ತಣ್ಣ ಸವರಗೋಳ ಮಾತನಾಡಿ,‘ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ವಿವಿಧ ಇಲಾಖೆಗಳ ಸಹಕಾರ ಮುಖ್ಯವಾಗುತ್ತದೆ. ಪ್ರಸ್ತುತ ಸಾಮಾಜಿಕ ಜಾಲತಾಣಗಳು, ಟಿ.ವಿ., ಸಿನಿಮಾ, ಮೊಬೈಲ್ ಬಳಕೆಯಿಂದ ಮಕ್ಕಳು ವಯಸ್ಸಿಗಿಂತ ಹೆಚ್ಚಿನ ತಿಳಿವಳಿಕೆ ಪಡೆಯುತ್ತಿದ್ದು, ಅದನ್ನು ನಕಾರಾತ್ಮಕ ವಿಷಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ಒಂದು ಹಂತದಲ್ಲಿ ಮನಸ್ಸು ವಿಕೃತಗೊಂಡು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಾರೆ’ ಎಂದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಜಿ.ಪಂ. ಮುಖ್ಯ ಯೋಜನಾಧಿಕಾರಿ ಡಿ.ಮಂಜುನಾಥ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಹಾಂತಸ್ವಾಮಿ ಪೂಜಾರ ಸೇರಿ ಅನೇಕರು ಪಾಲ್ಗೊಂಡಿದ್ದರು.</p>.<p><strong>ಸೂಚನೆ ದಿನವೇ ಆದೇಶ ಹೊರಡಿಸಿದ ಆರೋಗ್ಯ ಇಲಾಖೆ</strong></p><p>ಆರೋಗ್ಯ ಇಲಾಖೆಯಲ್ಲಿ ದಾಖಲಾಗುವ ಬಾಲ ಗರ್ಭಿಣಿಯರ ಪ್ರಕರಣಗಳ ಬಗ್ಗೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು. ಪೋಕ್ಸೊ ಕಾಯ್ದೆಯಡಿಯಲ್ಲಿ ಮೊದಲು ಮಾಹಿತಿ ಬಂದವರು ಪ್ರಕರಣ ದಾಖಲಿಸಲು ಅವಕಾಶವಿದ್ದು ಅದನ್ನು ಪಾಲಿಸಬೇಕು ಎಂದು ಶೇಖರಗೌಡ ಜಿ.ರಾಮತ್ನಾಳ ಅಧಿಕಾರಿಗಳಿಗೆ ಸೂಚಿಸಿದರು. ಇದರ ಬೆನ್ನಲ್ಲೇ ಶುಕ್ರವಾರ ಆದೇಶ ಹೊರಡಿಸಿರುವ ಜಿಲ್ಲಾ ಆರೋಗ್ಯ ಕುಟುಂಬ ಹಾಗೂ ಕಲ್ಯಾಣ ಇಲಾಖೆ ’ಬಾಲ ಗರ್ಭಿಣಿ ಪ್ರಕರಣಗಳ ಮಾಹಿತಿಯನ್ನು ತಕ್ಷಣವೇ ಪೊಲೀಸ್ ಇಲಾಖೆಗೆ ಮಾಹಿತಿ ಕೊಡಬೇಕು. ಒಪಿಡಿ ಚೀಟಿ ಮೇಲೆ ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ’ ಎಂದು ಮುದ್ರಿಸಬೇಕು’ ಎಂದು ಸುತ್ತೋಲೆ ಹೊರಡಿಸಿದೆ. ‘ಜು. 12 (ಶುಕ್ರವಾರ) ನಡೆದ ರಾಜ್ಯ ಮಕ್ಕಳ ಹಕ್ಕುಗಳ ಆಯೋಗದಿಂದ ನಡೆದ ಭಾಗಿದಾರರ ಸಮಾಲೋಚನೆ ಸಭೆಯಲ್ಲಿ ಚರ್ಚಿಸಿದಂತೆ ಆದೇಶ ಹೊರಡಿಸಲಾಗಿದೆ’ ಎಂದು ಡಿಎಚ್ಒ ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>