<p><strong>ಕೊಪ್ಪಳ</strong>: ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ. ಸುಂದರೇಶ ಬಾಬು ತಿಳಿಸಿದರು. </p>.<p>‘ಮತ ಎಣಿಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎರಡು ಪ್ರತ್ಯೇಕ ಎರಡು ಕೊಠಡಿಗಳ ವ್ಯವಸ್ಥೆ ಮಾಡಲಾಗಿದ್ದು, ಒಂದರಲ್ಲಿ ವಿದ್ಯುನ್ಮಾನ ಮತಯಂತ್ರಗಳು ಮತ್ತು ಇನ್ನೊಂದರಲ್ಲಿ ಅಂಚೆ ಮತಪತ್ರಗಳ ಎಣಿಕೆ ನಡೆಯಲಿದೆ. ಪ್ರತಿ ಕ್ಷೇತ್ರಕ್ಕೆ ಇವಿಎಂಗಳ ಮತ ಎಣಿಕೆಗೆ 15 ಟೇಬಲ್ ಮತ್ತು ಅಂಚೆ ಎಣಿಕೆಗೆ 3 ಟೇಬಲ್ ಸೇರಿ 18 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ಸಿಸಿಟಿವಿ ಕ್ಯಾಮೆರಾ, ಟಿ.ವಿ.ಪರದೆ, ಆಯಾಕ್ಷೇತ್ರದ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಮತಎಣಿಕೆ ಸಿಬ್ಬಂದಿ, ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರುಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ವ್ಯವಸ್ಥೆ, ಕುಡಿಯುವ ನೀರು, ಮಾಧ್ಯಮ ಕೇಂದ್ರ, ಚುನಾವಣಾ ವೀಕ್ಷಕರ ಆಸನಗಳು ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಹಂಚಿಕೆ: ಮತ ಎಣಿಕೆ ಸಿಬ್ಬಂದಿ ನಿಯೋಜನೆಯ ರ್ಯಾಂಡಮೈಸೇಶೆನ್ ಪ್ರಕ್ರಿಯೆ ಶುಕ್ರವಾರ ನಡೆಯಿತು.</p>.<p>ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಸಮ್ಮುಖದಲ್ಲಿ ನಡೆದ ಪ್ರಕ್ರಿಯೆಯಲ್ಲಿ 110 ಎಣಿಕೆ ಮೇಲ್ವಿಚಾರಕರು, 125 ಎಣಿಕೆ ಸಹಾಯಕರು, 110 ಸ್ಟಾಟಿಕ್ ಅಬ್ಸರ್ಸ್ ಸೇರಿ ಒಟ್ಟು 345 ಜನ ಸಿಬ್ಬಂದಿಯನ್ನು ನಿಯೋಜಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ</strong>: ವಿಧಾನಸಭಾ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ ಸಂಪೂರ್ಣ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಎಂ. ಸುಂದರೇಶ ಬಾಬು ತಿಳಿಸಿದರು. </p>.<p>‘ಮತ ಎಣಿಕೆಗಾಗಿ ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಎರಡು ಪ್ರತ್ಯೇಕ ಎರಡು ಕೊಠಡಿಗಳ ವ್ಯವಸ್ಥೆ ಮಾಡಲಾಗಿದ್ದು, ಒಂದರಲ್ಲಿ ವಿದ್ಯುನ್ಮಾನ ಮತಯಂತ್ರಗಳು ಮತ್ತು ಇನ್ನೊಂದರಲ್ಲಿ ಅಂಚೆ ಮತಪತ್ರಗಳ ಎಣಿಕೆ ನಡೆಯಲಿದೆ. ಪ್ರತಿ ಕ್ಷೇತ್ರಕ್ಕೆ ಇವಿಎಂಗಳ ಮತ ಎಣಿಕೆಗೆ 15 ಟೇಬಲ್ ಮತ್ತು ಅಂಚೆ ಎಣಿಕೆಗೆ 3 ಟೇಬಲ್ ಸೇರಿ 18 ಟೇಬಲ್ಗಳ ವ್ಯವಸ್ಥೆ ಮಾಡಲಾಗಿದೆ’ ಎಂದು ಹೇಳಿದರು.</p>.<p>‘ಸಿಸಿಟಿವಿ ಕ್ಯಾಮೆರಾ, ಟಿ.ವಿ.ಪರದೆ, ಆಯಾಕ್ಷೇತ್ರದ ಚುನಾವಣಾಧಿಕಾರಿಗಳು, ಸಹಾಯಕ ಚುನಾವಣಾಧಿಕಾರಿಗಳು, ಮತಎಣಿಕೆ ಸಿಬ್ಬಂದಿ, ಅಭ್ಯರ್ಥಿಗಳು ಹಾಗೂ ಚುನಾವಣಾ ಏಜೆಂಟರುಗಳ ವ್ಯವಸ್ಥೆ ಮಾಡಲಾಗಿದೆ. ಭದ್ರತಾ ವ್ಯವಸ್ಥೆ, ಕುಡಿಯುವ ನೀರು, ಮಾಧ್ಯಮ ಕೇಂದ್ರ, ಚುನಾವಣಾ ವೀಕ್ಷಕರ ಆಸನಗಳು ಸೌಲಭ್ಯ ಕಲ್ಪಿಸಲಾಗಿದೆ’ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>ಹಂಚಿಕೆ: ಮತ ಎಣಿಕೆ ಸಿಬ್ಬಂದಿ ನಿಯೋಜನೆಯ ರ್ಯಾಂಡಮೈಸೇಶೆನ್ ಪ್ರಕ್ರಿಯೆ ಶುಕ್ರವಾರ ನಡೆಯಿತು.</p>.<p>ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ ಸಮ್ಮುಖದಲ್ಲಿ ನಡೆದ ಪ್ರಕ್ರಿಯೆಯಲ್ಲಿ 110 ಎಣಿಕೆ ಮೇಲ್ವಿಚಾರಕರು, 125 ಎಣಿಕೆ ಸಹಾಯಕರು, 110 ಸ್ಟಾಟಿಕ್ ಅಬ್ಸರ್ಸ್ ಸೇರಿ ಒಟ್ಟು 345 ಜನ ಸಿಬ್ಬಂದಿಯನ್ನು ನಿಯೋಜಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>