ಕೊಪ್ಪಳ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ಎಸ್. ವಂಟಗೋಡಿ ಅವರನ್ನು ಕರ್ನಾಟಕ ಲೋಕಾಯುಕ್ತ ಎಸ್.ಪಿ. ಸ್ಥಾನಕ್ಕೆ ವರ್ಗಾವಣೆ ಮಾಡಿ ಗುರುವಾರ ಸರ್ಕಾರ ಆದೇಶ ಹೊರಡಿಸಿದೆ. ಆದರೆ, ಸದ್ಯಕ್ಕೆ ಅಧಿಕಾರ ಹಸ್ತಾಂತರಿಸಬೇಡಿ ಎಂದು ಇಲಾಖೆಯ ಹಿರಿಯ ಅಧಿಕಾರಿಗಳು ಎಸ್.ಪಿ. ಅವರಿಗೆ ಮೌಖಿಕ ಸೂಚನೆ ನೀಡಿದ್ದಾರೆ ಎಂದು ಗೊತ್ತಾಗಿದೆ.