<p><strong>ಕೊಪ್ಪಳ:</strong> ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ರಾಜ್ಯದ ಎಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ.</p>.<p>‘ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಬೀದರ್, ಬಾಗಲಕೋಟೆ, ಚಿಕ್ಕಬಳ್ಳಾಪುರ ಹಾಗೂ ವಿಜಯಪುರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಫೆಬ್ರುವರಿ 4ರಂದು ಕೊಪ್ಪಳದಲ್ಲಿ ಪಕ್ಷದ ಎಲ್ಲ ತಾಲ್ಲೂಕು ಘಟಕಗಳ ಪ್ರಮುಖರ ಸಮಾವೇಶ ನಡೆಯಲಿದ್ದು, ಅಂದು ಅಭ್ಯರ್ಥಿಗಳನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ ಆದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಘೋಷಿಸಲಿದ್ದಾರೆ’ ಎಂದು ಹೇಳಿದರು.</p>.<p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಆರ್ಪಿಪಿಯಿಂದ 41 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಒಂದು ಕ್ಷೇತ್ರದಲ್ಲಿ ಪಕ್ಷ ಗೆಲುವು ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ (ಕೆಆರ್ಪಿಪಿ) ರಾಜ್ಯದ ಎಂಟು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ.</p>.<p>‘ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ರಾಯಚೂರು, ಬೀದರ್, ಬಾಗಲಕೋಟೆ, ಚಿಕ್ಕಬಳ್ಳಾಪುರ ಹಾಗೂ ವಿಜಯಪುರ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು’ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಮನೋಹರಗೌಡ ಹೇರೂರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಫೆಬ್ರುವರಿ 4ರಂದು ಕೊಪ್ಪಳದಲ್ಲಿ ಪಕ್ಷದ ಎಲ್ಲ ತಾಲ್ಲೂಕು ಘಟಕಗಳ ಪ್ರಮುಖರ ಸಮಾವೇಶ ನಡೆಯಲಿದ್ದು, ಅಂದು ಅಭ್ಯರ್ಥಿಗಳನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರೂ ಆದ ಗಂಗಾವತಿ ಕ್ಷೇತ್ರದ ಶಾಸಕ ಜನಾರ್ದನ ರೆಡ್ಡಿ ಘೋಷಿಸಲಿದ್ದಾರೆ’ ಎಂದು ಹೇಳಿದರು.</p>.<p>ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೆಆರ್ಪಿಪಿಯಿಂದ 41 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಒಂದು ಕ್ಷೇತ್ರದಲ್ಲಿ ಪಕ್ಷ ಗೆಲುವು ಸಾಧಿಸಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>