<p><strong>ಕುಷ್ಟಗಿ</strong>: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿವೆ. ಈ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಚುನಾವಣಾ ನಿರ್ವಹಣೆ ಮತ್ತು ಸಮನ್ವಯ ಸಮಿತಿ ಸಭೆಯಲ್ಲಿ ಪಕ್ಷದ ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಿದರು.</p>.<p>ಸಭೆಯಲ್ಲಿ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಜಿಲ್ಲೆಗಳ ಅನೇಕ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿದ್ದ ಮುಖಂಡರಲ್ಲಿ ಹುರುಪು ಇರಲಿಲ್ಲ, ಬದಲಾಗಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಆತಂಕದ ಛಾಯೆ ಎದ್ದು ಕಂಡಿತು. ಕ್ಷೇತ್ರದ ಅಭ್ಯರ್ಥಿ ಗೆಲುವು ಮೋದಿಯವರ ಗೆಲುವು ಆಗಲಿದೆ ಎಂಬುದು ಅನೇಕ ಪ್ರಮುಖರ ಮಾತಿನ ಅಭಿಪ್ರಾಯವಾಗಿತ್ತು. ಆದರೆ ಟಿಕೆಟ್ ವಿಚಾರದಲ್ಲಿ ಸಂಸದ ಸಂಗಣ್ಣ ಕರಡಿ ಅವರಲ್ಲಿನ ಅಸಮಾಧಾನ ವಿಚಾರವನ್ನು ಪ್ರಸ್ತಾಪಿಸದೆ ಮುಖಂಡರು ಅಂತರ ಕಾಯ್ದುಕೊಂಡರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್, ‘ಪಕ್ಷದಲ್ಲಿ ನಾನು ಸಾಮಾನ್ಯ ಕಾರ್ಯಕರ್ತ. ಹೆಸರಿಗೆ ಮಾತ್ರ ನಾನು ಅಭ್ಯರ್ಥಿಯಾದರೆ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ ಎಂಬುದು ಸ್ಪಷ್ಟ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಲಪ್ಪ ಆಚಾರ್, ಮಾಜಿ ಶಾಸಕ ಪರಣ್ಣ ಮುನವಳ್ಳಿ ಇತರರು ಮಾತನಾಡಿ, ‘ನರೇಂದ್ರ ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂಬುದು ಎಲ್ಲರ ಆಶಯವಾಗಿದೆ. ಅದಕ್ಕೆ ತಕ್ಕಂತೆ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಅಷ್ಟೇ ಮುಖ್ಯ. ಪಕ್ಷದ ನಿರ್ಣಯವನ್ನು ಒಪ್ಪಿಕೊಳ್ಳುವ ಮೂಲಕ ಸಂಘಟನಾತ್ಮಕ ರೀತಿಯಲ್ಲಿ ಕೆಲಸ ನಿರ್ವಹಿಸಿದರೆ ಮತ್ತೊಮ್ಮೆ ಬಿಜೆಪಿ ಗೆಲುವು ಸ್ಪಷ್ಟ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ರಾಯಚೂರು ಶಾಸಕ ಶಿವರಾಜಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಪ್ರಮುಖರಾದ ಸೋಮಲಿಂಗಪ್ಪ, ಪ್ರತಾಪಗೌಡ ಮಸ್ಕಿ, ಕೆ.ಕರಿಯಪ್ಪ, ಬಿಜೆಪಿ ಕೊಪ್ಪಳ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ, ಚನ್ನಬಸನಗೌಡ, ಚಂದ್ರಶೇಖರ ಹಲಗೇರಿ, ರಾಜ್ಯ ಘಟಕದ ಕಾರ್ಯದರ್ಶಿ ಶರಣು ತಳ್ಳಿಕೇರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ, ಮಂಡಲ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><strong>ನಾಳೆಯಿಂದ ಚುನಾವಣಾ ಪ್ರಚಾರ;</strong> ‘ಪಕ್ಷದಲ್ಲಿನ ಸಣ್ಣಪುಟ್ಟ ಸಮಸ್ಯೆಗಳು ಇರುವುದು ಸಹಜವಾದರೂ ಎಲ್ಲವನ್ನೂ ನಿವಾರಿಸಿ ಮಾ.22ರಿಂದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮುಖಂಡರು ಪ್ರವಾಸ ಆರಂಭಿಸಲಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯಸಚೇತಕರೂ ಆದ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ‘ಬಸವರಾಜ ಅವರಿಗೆ ಟಿಕೆಟ್ ಕೊಡಿಸುವಲ್ಲಿ ದೊಡ್ಡನಗೌಡ ಹಾಲಪ್ಪ ಆಚಾರ ಇತರರು ಮುತುವರ್ಜಿ ವಹಿಸಿದ್ದಾರೆ ಎಂದೆ ಬಸವರಾಜ ಅವರ ಅಣ್ಣ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಮಹೇಶ ನೀಡಿರುವ ಹೇಳಿಕೆಯಿಂದ ಸಂಗಣ್ಣ ಕರಡಿ ಅವರ ಅಸಮಾಧಾನ ಹೆಚ್ಚಿಸಿದೆ’ ಎಂಬುದಕ್ಕೆ ಪ್ರತಿಕ್ರಿಯಿಸಿದ ಪಾಟೀಲ ‘ಆಯಾ ಕ್ಷೇತ್ರಗಳಿಗೆ ಹೋದಾಗ ಅಲ್ಲಿಯವರ ಹೆಸರು ಹೇಳುವುದು ಸಹಜ ಅವರ ಹೇಳಿಕೆಯಲ್ಲಿ ಯಾರನ್ನಾದರೂ ಓಲೈಸುವಂಥದ್ದು ಇರಲಿಲ್ಲ. ಹಾಗಾಗಿ ಅವರು ಹೇಳಿದ್ದು ಅಂಥ ತಪ್ಪೇನೂ ಆಗಿಲ್ಲ’ ಎಂದು ಸಮರ್ಥಿಸಿಕೊಂಡರು.</p>.<p> <strong>‘ಸಂಗಣ್ಣ ಪಕ್ಷೇತರ ಸ್ಪರ್ಧೆ;</strong> ಕಾಂಗ್ರೆಸ್ ಅಪಪ್ರಚಾರ’ ‘ನಾನು ಹೇಳಿದವರಿಗೆಲ್ಲ ಟಿಕೆಟ್ ಸಿಗುವಂತಿದ್ದರೆ ಇಲ್ಲೇಕೆ ಇರುತ್ತಿದ್ದೆ? ನಾನೂ ದೆಹಲಿಯಲ್ಲೊ ಬೆಂಗಳೂರಿನಲ್ಲೋ ಇರುತ್ತಿದ್ದೆ. ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಯಾವ ಮಾನದಂಡ ಅನುಸರಿಸಿದ್ದಾರೊ ಅವರಿಗೇ ಗೊತ್ತು’ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು. ಡಾ.ಬಸವರಾಜ ಕ್ಯಾವಟರ್ ಅವರಿಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸುವಲ್ಲಿ ಹಾಲಪ್ಪ ಮುತುವರ್ಜಿ ವಹಿಸಿದ್ದಾರೆ ಎನ್ನುವ ಸಂಸದ ಸಂಗಣ್ಣ ಕರಡಿ ಅವರ ಆರೋಪದ ಬಗ್ಗೆ ಅವರು ಈ ರೀತಿಯ ಪ್ರತಿಕ್ರಿಯೆ ನೀಡಿದರು. ಪಟ್ಟಣದಲ್ಲಿ ಪಕ್ಷದ ಸಭೆಗೆ ಬಂದಿದ್ದ ಅವರು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ ‘ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದರೂ ಒಬ್ಬರಿಗೆ ಮಾತ್ರ ಟಿಕೆಟ್ ಸಿಗುತ್ತದೆ. ಬಿಜೆಪಿ ಆಲದ ಮರ ಇದ್ದ ಹಾಗೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ 80 ಸಾವಿರಕ್ಕೂ ಅಧಿಕ ಮತಗಳಿವೆ. ಸಂಗಣ್ಣ ಅವರು ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎಂಬುದು ಗೊತ್ತಿಲ್ಲ. ಊಹಾಪೋಹಗಳ ಮೂಲಕ ಕಾಂಗ್ರೆಸ್ ಪಕ್ಷದವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಸಂಗಣ್ಣ ನಮ್ಮ ಜೊತೆಯಲ್ಲೇ ಇರುತ್ತಾರೆ. ಎಲ್ಲರೂ ಸೇರಿಯೇ ಚುನಾವಣೆ ಎದುರಿಸುತ್ತೇವೆ. ಅಲ್ಲದೆ ಸಂಗಣ್ಣ ಅವರು ಊರಲ್ಲಿ ಇಲ್ಲದ ಕಾರಣ ಎಲ್ಲ ಮುಖಂಡರೂ ಅವರ ಬಳಿ ಹೋಗಲು ಸಾಧ್ಯವಾಗಿಲ್ಲ. ಸಂಗಣ್ಣ ಗುರುವಾರ ಅಭಿಮಾನಿಗಳ ಸಭೆ ಕರೆದಿರುವುದರಲ್ಲಿ ಯಾವುದೇ ತಪ್ಪು ಹುಡುಕುವುದು ಸರಿಯಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ</strong>: ಲೋಕಸಭೆ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಆರಂಭಗೊಂಡಿವೆ. ಈ ಹಿನ್ನೆಲೆಯಲ್ಲಿ ಬುಧವಾರ ಇಲ್ಲಿಯ ಬಿಜೆಪಿ ಕಚೇರಿಯಲ್ಲಿ ನಡೆದ ಚುನಾವಣಾ ನಿರ್ವಹಣೆ ಮತ್ತು ಸಮನ್ವಯ ಸಮಿತಿ ಸಭೆಯಲ್ಲಿ ಪಕ್ಷದ ಮುಖಂಡರು ಒಗ್ಗಟ್ಟಿನ ಮಂತ್ರ ಜಪಿಸಿದರು.</p>.<p>ಸಭೆಯಲ್ಲಿ ಲೋಕಸಭಾ ಕ್ಷೇತ್ರಕ್ಕೆ ಒಳಪಡುವ ಜಿಲ್ಲೆಗಳ ಅನೇಕ ಮುಖಂಡರು ಭಾಗವಹಿಸಿದ್ದರು. ಸಭೆಯಲ್ಲಿದ್ದ ಮುಖಂಡರಲ್ಲಿ ಹುರುಪು ಇರಲಿಲ್ಲ, ಬದಲಾಗಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಉಂಟಾಗಿರುವ ಆತಂಕದ ಛಾಯೆ ಎದ್ದು ಕಂಡಿತು. ಕ್ಷೇತ್ರದ ಅಭ್ಯರ್ಥಿ ಗೆಲುವು ಮೋದಿಯವರ ಗೆಲುವು ಆಗಲಿದೆ ಎಂಬುದು ಅನೇಕ ಪ್ರಮುಖರ ಮಾತಿನ ಅಭಿಪ್ರಾಯವಾಗಿತ್ತು. ಆದರೆ ಟಿಕೆಟ್ ವಿಚಾರದಲ್ಲಿ ಸಂಸದ ಸಂಗಣ್ಣ ಕರಡಿ ಅವರಲ್ಲಿನ ಅಸಮಾಧಾನ ವಿಚಾರವನ್ನು ಪ್ರಸ್ತಾಪಿಸದೆ ಮುಖಂಡರು ಅಂತರ ಕಾಯ್ದುಕೊಂಡರು.</p>.<p>ಈ ಸಂದರ್ಭದಲ್ಲಿ ಮಾತನಾಡಿದ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟರ್, ‘ಪಕ್ಷದಲ್ಲಿ ನಾನು ಸಾಮಾನ್ಯ ಕಾರ್ಯಕರ್ತ. ಹೆಸರಿಗೆ ಮಾತ್ರ ನಾನು ಅಭ್ಯರ್ಥಿಯಾದರೆ ಪರೋಕ್ಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ ಎಂಬುದು ಸ್ಪಷ್ಟ’ ಎಂದರು.</p>.<p>ವಿಧಾನ ಪರಿಷತ್ ಸದಸ್ಯ ರಘುನಾಥ ಮಲ್ಕಾಪುರೆ, ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ, ಶಾಸಕ ದೊಡ್ಡನಗೌಡ ಪಾಟೀಲ, ಮಾಜಿ ಸಚಿವ ಹಾಲಪ್ಪ ಆಚಾರ್, ಮಾಜಿ ಶಾಸಕ ಪರಣ್ಣ ಮುನವಳ್ಳಿ ಇತರರು ಮಾತನಾಡಿ, ‘ನರೇಂದ್ರ ಮೋದಿ ಅವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂಬುದು ಎಲ್ಲರ ಆಶಯವಾಗಿದೆ. ಅದಕ್ಕೆ ತಕ್ಕಂತೆ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದು ಅಷ್ಟೇ ಮುಖ್ಯ. ಪಕ್ಷದ ನಿರ್ಣಯವನ್ನು ಒಪ್ಪಿಕೊಳ್ಳುವ ಮೂಲಕ ಸಂಘಟನಾತ್ಮಕ ರೀತಿಯಲ್ಲಿ ಕೆಲಸ ನಿರ್ವಹಿಸಿದರೆ ಮತ್ತೊಮ್ಮೆ ಬಿಜೆಪಿ ಗೆಲುವು ಸ್ಪಷ್ಟ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ರಾಯಚೂರು ಶಾಸಕ ಶಿವರಾಜಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಮಾಜಿ ಶಾಸಕ ಬಸವರಾಜ ದಢೇಸೂಗೂರು, ಪ್ರಮುಖರಾದ ಸೋಮಲಿಂಗಪ್ಪ, ಪ್ರತಾಪಗೌಡ ಮಸ್ಕಿ, ಕೆ.ಕರಿಯಪ್ಪ, ಬಿಜೆಪಿ ಕೊಪ್ಪಳ ಜಿಲ್ಲಾಧ್ಯಕ್ಷ ನವೀನ ಗುಳಗಣ್ಣನವರ, ಚನ್ನಬಸನಗೌಡ, ಚಂದ್ರಶೇಖರ ಹಲಗೇರಿ, ರಾಜ್ಯ ಘಟಕದ ಕಾರ್ಯದರ್ಶಿ ಶರಣು ತಳ್ಳಿಕೇರಿ ಹಾಗೂ ಕೊಪ್ಪಳ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ವಿಧಾನಸಭಾ ಕ್ಷೇತ್ರಗಳ, ಮಂಡಲ ಅಧ್ಯಕ್ಷರು ಸಭೆಯಲ್ಲಿ ಪಾಲ್ಗೊಂಡಿದ್ದರು.</p>.<p><strong>ನಾಳೆಯಿಂದ ಚುನಾವಣಾ ಪ್ರಚಾರ;</strong> ‘ಪಕ್ಷದಲ್ಲಿನ ಸಣ್ಣಪುಟ್ಟ ಸಮಸ್ಯೆಗಳು ಇರುವುದು ಸಹಜವಾದರೂ ಎಲ್ಲವನ್ನೂ ನಿವಾರಿಸಿ ಮಾ.22ರಿಂದ ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮುಖಂಡರು ಪ್ರವಾಸ ಆರಂಭಿಸಲಿದ್ದಾರೆ’ ಎಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯಸಚೇತಕರೂ ಆದ ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು. ‘ಬಸವರಾಜ ಅವರಿಗೆ ಟಿಕೆಟ್ ಕೊಡಿಸುವಲ್ಲಿ ದೊಡ್ಡನಗೌಡ ಹಾಲಪ್ಪ ಆಚಾರ ಇತರರು ಮುತುವರ್ಜಿ ವಹಿಸಿದ್ದಾರೆ ಎಂದೆ ಬಸವರಾಜ ಅವರ ಅಣ್ಣ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಮಹೇಶ ನೀಡಿರುವ ಹೇಳಿಕೆಯಿಂದ ಸಂಗಣ್ಣ ಕರಡಿ ಅವರ ಅಸಮಾಧಾನ ಹೆಚ್ಚಿಸಿದೆ’ ಎಂಬುದಕ್ಕೆ ಪ್ರತಿಕ್ರಿಯಿಸಿದ ಪಾಟೀಲ ‘ಆಯಾ ಕ್ಷೇತ್ರಗಳಿಗೆ ಹೋದಾಗ ಅಲ್ಲಿಯವರ ಹೆಸರು ಹೇಳುವುದು ಸಹಜ ಅವರ ಹೇಳಿಕೆಯಲ್ಲಿ ಯಾರನ್ನಾದರೂ ಓಲೈಸುವಂಥದ್ದು ಇರಲಿಲ್ಲ. ಹಾಗಾಗಿ ಅವರು ಹೇಳಿದ್ದು ಅಂಥ ತಪ್ಪೇನೂ ಆಗಿಲ್ಲ’ ಎಂದು ಸಮರ್ಥಿಸಿಕೊಂಡರು.</p>.<p> <strong>‘ಸಂಗಣ್ಣ ಪಕ್ಷೇತರ ಸ್ಪರ್ಧೆ;</strong> ಕಾಂಗ್ರೆಸ್ ಅಪಪ್ರಚಾರ’ ‘ನಾನು ಹೇಳಿದವರಿಗೆಲ್ಲ ಟಿಕೆಟ್ ಸಿಗುವಂತಿದ್ದರೆ ಇಲ್ಲೇಕೆ ಇರುತ್ತಿದ್ದೆ? ನಾನೂ ದೆಹಲಿಯಲ್ಲೊ ಬೆಂಗಳೂರಿನಲ್ಲೋ ಇರುತ್ತಿದ್ದೆ. ರಾಷ್ಟ್ರೀಯ ನಾಯಕರು ರಾಜ್ಯ ನಾಯಕರು ಯಾವ ಮಾನದಂಡ ಅನುಸರಿಸಿದ್ದಾರೊ ಅವರಿಗೇ ಗೊತ್ತು’ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಹೇಳಿದರು. ಡಾ.ಬಸವರಾಜ ಕ್ಯಾವಟರ್ ಅವರಿಗೆ ಕೊಪ್ಪಳ ಲೋಕಸಭಾ ಕ್ಷೇತ್ರದ ಟಿಕೆಟ್ ಕೊಡಿಸುವಲ್ಲಿ ಹಾಲಪ್ಪ ಮುತುವರ್ಜಿ ವಹಿಸಿದ್ದಾರೆ ಎನ್ನುವ ಸಂಸದ ಸಂಗಣ್ಣ ಕರಡಿ ಅವರ ಆರೋಪದ ಬಗ್ಗೆ ಅವರು ಈ ರೀತಿಯ ಪ್ರತಿಕ್ರಿಯೆ ನೀಡಿದರು. ಪಟ್ಟಣದಲ್ಲಿ ಪಕ್ಷದ ಸಭೆಗೆ ಬಂದಿದ್ದ ಅವರು ‘ಪ್ರಜಾವಾಣಿ’ಯೊಂದಿಗೆ ಮಾತನಾಡಿ ‘ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದರೂ ಒಬ್ಬರಿಗೆ ಮಾತ್ರ ಟಿಕೆಟ್ ಸಿಗುತ್ತದೆ. ಬಿಜೆಪಿ ಆಲದ ಮರ ಇದ್ದ ಹಾಗೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲೂ 80 ಸಾವಿರಕ್ಕೂ ಅಧಿಕ ಮತಗಳಿವೆ. ಸಂಗಣ್ಣ ಅವರು ಪಕ್ಷೇತರರಾಗಿ ಸ್ಪರ್ಧಿಸುತ್ತಾರೆ ಎಂಬುದು ಗೊತ್ತಿಲ್ಲ. ಊಹಾಪೋಹಗಳ ಮೂಲಕ ಕಾಂಗ್ರೆಸ್ ಪಕ್ಷದವರು ಅಪಪ್ರಚಾರದಲ್ಲಿ ತೊಡಗಿದ್ದಾರೆ. ಸಂಗಣ್ಣ ನಮ್ಮ ಜೊತೆಯಲ್ಲೇ ಇರುತ್ತಾರೆ. ಎಲ್ಲರೂ ಸೇರಿಯೇ ಚುನಾವಣೆ ಎದುರಿಸುತ್ತೇವೆ. ಅಲ್ಲದೆ ಸಂಗಣ್ಣ ಅವರು ಊರಲ್ಲಿ ಇಲ್ಲದ ಕಾರಣ ಎಲ್ಲ ಮುಖಂಡರೂ ಅವರ ಬಳಿ ಹೋಗಲು ಸಾಧ್ಯವಾಗಿಲ್ಲ. ಸಂಗಣ್ಣ ಗುರುವಾರ ಅಭಿಮಾನಿಗಳ ಸಭೆ ಕರೆದಿರುವುದರಲ್ಲಿ ಯಾವುದೇ ತಪ್ಪು ಹುಡುಕುವುದು ಸರಿಯಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>