<p>ಗಂಗಾವತಿ: ಸರ್ಕಾರಿ ನೌಕರರಿಗೆ ಮಾರಕವಾದ ಎನ್ಪಿಎಸ್ ಯೋಜನೆ ರದ್ದುಪಡಿಸಿ, ಒಪಿಎಸ್ ಯೋಜನೆ ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಗಂಗಾವತಿ ಜುಲೈನಗರದಲ್ಲಿ ಶಾಸಕ ಜಿ.ಜನಾರ್ದನ ರೆಡ್ಡಿ ಅವರಿಗೆ ಶುಕ್ರವಾರ ಮನವಿ ಸಲ್ಲಿ ಸಿದರು.</p>.<p>ಸಂಘಟನೆ ತಾಲ್ಲೂಕು ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಮಾತನಾಡಿ, 2006ರ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ವ್ಯವಸ್ಥೆ ಜಾರಿ ಮಾಡಿದ್ದು, ಈ ವ್ಯವಸ್ಥೆಯಿಂದ ಸರ್ಕಾರಿ ನೌಕರರು ನಿವೃತ್ತಿ ಸಂದರ್ಭದಲ್ಲಿ ಯಾವುದೇ ಸೌಲಭ್ಯವಿಲ್ಲದೇ ಬರಿಗೈಯಲ್ಲಿ ಮನೆಗೆ ಹೋಗಬೇಕಾದ ಪರಿಸ್ಥಿತಿ ಇದೆ. ಹಾಗಿ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು ಎಂದರು.</p>.<p>ಸರ್ಕಾರಿ ನೌಕರರು ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತಿದ್ದು, ಬರುವ ವೇತನದಲ್ಲೇ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಹೆಚ್ಚಿನ ವೇತನ ನಿರೀಕ್ಷೆಯಲ್ಲಿದ್ದಾಗ ರಾಜ್ಯ 7ನೇ ವೇತನ ಆಯೋಗ ಅನುಷ್ಠಾನ ತಡೆಹಿಡಿದಿದ್ದು, ಸರ್ಕಾರ ಶೀಘ್ರದಲ್ಲೇ 7 ವೇತನ ಜಾರಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.</p>.<p>ಸರ್ಕಾರಿ ನೌಕರರಿಗೆ ಮತ್ತು ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಬೇಕು ಎಂದು ಶಾಸಕರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಶಾಸಕರು ಸರ್ಕಾರದ ಗಮನಕ್ಕೆ ತರವುದಾಗಿ ಭರವಸೆ ನೀಡಿದರು.</p>.<p>ಸಂಘಟನೆ ಕಾರ್ಯದರ್ಶಿ ಉಮೇಶ್.ಎಸ್ ಹಾಗೂ ಸರ್ಕಾರಿ ನೌಕರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗಂಗಾವತಿ: ಸರ್ಕಾರಿ ನೌಕರರಿಗೆ ಮಾರಕವಾದ ಎನ್ಪಿಎಸ್ ಯೋಜನೆ ರದ್ದುಪಡಿಸಿ, ಒಪಿಎಸ್ ಯೋಜನೆ ಜಾರಿಗೆ ಮಾಡಬೇಕು ಎಂದು ಒತ್ತಾಯಿಸಿ, ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಗಂಗಾವತಿ ಜುಲೈನಗರದಲ್ಲಿ ಶಾಸಕ ಜಿ.ಜನಾರ್ದನ ರೆಡ್ಡಿ ಅವರಿಗೆ ಶುಕ್ರವಾರ ಮನವಿ ಸಲ್ಲಿ ಸಿದರು.</p>.<p>ಸಂಘಟನೆ ತಾಲ್ಲೂಕು ಅಧ್ಯಕ್ಷ ಶರಣೇಗೌಡ ಪೊಲೀಸ್ ಪಾಟೀಲ ಮಾತನಾಡಿ, 2006ರ ನಂತರ ನೇಮಕವಾದ ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ವ್ಯವಸ್ಥೆ ಜಾರಿ ಮಾಡಿದ್ದು, ಈ ವ್ಯವಸ್ಥೆಯಿಂದ ಸರ್ಕಾರಿ ನೌಕರರು ನಿವೃತ್ತಿ ಸಂದರ್ಭದಲ್ಲಿ ಯಾವುದೇ ಸೌಲಭ್ಯವಿಲ್ಲದೇ ಬರಿಗೈಯಲ್ಲಿ ಮನೆಗೆ ಹೋಗಬೇಕಾದ ಪರಿಸ್ಥಿತಿ ಇದೆ. ಹಾಗಿ ಹಳೆ ಪಿಂಚಣಿ ವ್ಯವಸ್ಥೆ ಜಾರಿ ಮಾಡಬೇಕು ಎಂದರು.</p>.<p>ಸರ್ಕಾರಿ ನೌಕರರು ಸರ್ಕಾರದ ಯೋಜನೆಗಳು ಜನರಿಗೆ ತಲುಪಿಸುವಲ್ಲಿ ಪ್ರಾಮಾಣಿಕ ಕೆಲಸ ಮಾಡುತ್ತಿದ್ದು, ಬರುವ ವೇತನದಲ್ಲೇ ಕುಟುಂಬ ನಿರ್ವಹಣೆ ಮಾಡುತ್ತಿದ್ದಾರೆ. ಹೆಚ್ಚಿನ ವೇತನ ನಿರೀಕ್ಷೆಯಲ್ಲಿದ್ದಾಗ ರಾಜ್ಯ 7ನೇ ವೇತನ ಆಯೋಗ ಅನುಷ್ಠಾನ ತಡೆಹಿಡಿದಿದ್ದು, ಸರ್ಕಾರ ಶೀಘ್ರದಲ್ಲೇ 7 ವೇತನ ಜಾರಿಗೆ ಮುಂದಾಗಬೇಕು ಎಂದು ಒತ್ತಾಯಿಸಿದರು.</p>.<p>ಸರ್ಕಾರಿ ನೌಕರರಿಗೆ ಮತ್ತು ಕುಟುಂಬದ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಜಾರಿ ಮಾಡಬೇಕು ಎಂದು ಶಾಸಕರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಶಾಸಕರು ಸರ್ಕಾರದ ಗಮನಕ್ಕೆ ತರವುದಾಗಿ ಭರವಸೆ ನೀಡಿದರು.</p>.<p>ಸಂಘಟನೆ ಕಾರ್ಯದರ್ಶಿ ಉಮೇಶ್.ಎಸ್ ಹಾಗೂ ಸರ್ಕಾರಿ ನೌಕರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>