<p><strong>ಯಲಬುರ್ಗಾ:</strong> ಜನಸಂಖ್ಯೆಯ ಹೆಚ್ಚಳದಿಂದ ಆರ್ಥಿಕ ಮತ್ತು ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮದ ಜೊತೆಗೆ ದೇಶದ ಸಮಗ್ರ ಅಭಿವೃದ್ಧಿ ಕುಂಠಿತಕ್ಕೆ ಕಾರಣವಾಗಬಲ್ಲದು ಎಂದು ಹಿರೇವಂಕಲಕುಂಟಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತುಳಜಾರಾಮ್ ಘಾಟ್ಗೆ ಹೇಳಿದರು.</p>.<p>ತಾಲ್ಲೂಕಿನ ಚೌಡಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ನಿಯಂತ್ರಣ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾನಾಡಿದ ಅವರು, ವಿವಿಧ ಕಾರಣಗಳಿಂದ ದೇಶದ ಜನಸಂಖ್ಯೆಯ ಹೆಚ್ಚುತ್ತಿದೆ. ನಿಯಂತ್ರಣಕ್ಕೆ ತರದೇ ಹೋದರೆ ಮುಂದಿನ ದಿನಗಳಲ್ಲಿ ಕನಿಷ್ಠ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಕಷ್ಟವಾಗಬಹುದು. ಈಗಾಗಲೇ ಹೆಚ್ಚಿದ ಜನಸಂಖ್ಯೆಯಿಂದ ಹಲವು ತೊಂದರೆಗಳನ್ನು ಎದುರಿಸಲಾಗುತ್ತಿದೆ. ಅನೇಕ ಕುಟುಂಬಗಳು ಜನಸಂಖ್ಯೆಯ ಹೆಚ್ಚಳದಿಂದ ಸಮಸ್ಯೆಯನ್ನು ಎದುರಿಸುತ್ತಿರುವುದು ಸಾಮಾನ್ಯವಾಗಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರಮೇಶ ಕುಂಟೋಜಿ, ಚನ್ನಮ್ಮ ಛತ್ರಗುಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಿಂಗಪ್ಪ ಮ್ಯಾಗೇರಿ, ಮಾಜಿ ಸದಸ್ಯ ಬಸಣ್ಣ ಮ್ಯಾಗೇರಿ ಹನಮಗೌಡ ಹುಣಶಿಹಾಳ, ಮುಖ್ಯ ಶಿಕ್ಷಕ ಯುವರಾಜ ಕಲಾಲ, ಅತಿಥಿ ಶಿಕ್ಷಕ ಗುರುರಾಜ ಮರಕಟ್, ಮುಖಂಡರುಗಳಾದ ಕಾಡಪ್ಪ ಮ್ಯಾಗೇರಿ, ಆಶಾ ಕಾರ್ಯಕರ್ತೆಯರು ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ಜನಸಂಖ್ಯೆಯ ಹೆಚ್ಚಳದಿಂದ ಆರ್ಥಿಕ ಮತ್ತು ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮದ ಜೊತೆಗೆ ದೇಶದ ಸಮಗ್ರ ಅಭಿವೃದ್ಧಿ ಕುಂಠಿತಕ್ಕೆ ಕಾರಣವಾಗಬಲ್ಲದು ಎಂದು ಹಿರೇವಂಕಲಕುಂಟಾ ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತುಳಜಾರಾಮ್ ಘಾಟ್ಗೆ ಹೇಳಿದರು.</p>.<p>ತಾಲ್ಲೂಕಿನ ಚೌಡಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜನಸಂಖ್ಯೆ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ನಿಯಂತ್ರಣ ಕುರಿತ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾನಾಡಿದ ಅವರು, ವಿವಿಧ ಕಾರಣಗಳಿಂದ ದೇಶದ ಜನಸಂಖ್ಯೆಯ ಹೆಚ್ಚುತ್ತಿದೆ. ನಿಯಂತ್ರಣಕ್ಕೆ ತರದೇ ಹೋದರೆ ಮುಂದಿನ ದಿನಗಳಲ್ಲಿ ಕನಿಷ್ಠ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡುವುದು ಕಷ್ಟವಾಗಬಹುದು. ಈಗಾಗಲೇ ಹೆಚ್ಚಿದ ಜನಸಂಖ್ಯೆಯಿಂದ ಹಲವು ತೊಂದರೆಗಳನ್ನು ಎದುರಿಸಲಾಗುತ್ತಿದೆ. ಅನೇಕ ಕುಟುಂಬಗಳು ಜನಸಂಖ್ಯೆಯ ಹೆಚ್ಚಳದಿಂದ ಸಮಸ್ಯೆಯನ್ನು ಎದುರಿಸುತ್ತಿರುವುದು ಸಾಮಾನ್ಯವಾಗಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ರಮೇಶ ಕುಂಟೋಜಿ, ಚನ್ನಮ್ಮ ಛತ್ರಗುಡಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಿಂಗಪ್ಪ ಮ್ಯಾಗೇರಿ, ಮಾಜಿ ಸದಸ್ಯ ಬಸಣ್ಣ ಮ್ಯಾಗೇರಿ ಹನಮಗೌಡ ಹುಣಶಿಹಾಳ, ಮುಖ್ಯ ಶಿಕ್ಷಕ ಯುವರಾಜ ಕಲಾಲ, ಅತಿಥಿ ಶಿಕ್ಷಕ ಗುರುರಾಜ ಮರಕಟ್, ಮುಖಂಡರುಗಳಾದ ಕಾಡಪ್ಪ ಮ್ಯಾಗೇರಿ, ಆಶಾ ಕಾರ್ಯಕರ್ತೆಯರು ವಿದ್ಯಾರ್ಥಿಗಳು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>