<p><strong>ಗಂಗಾವತಿ:</strong> ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಾಗಿದ್ದು, ನಿಯಂತ್ರಿಸಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ಕೈಕಟ್ಟಿ ಕುಳಿತಿದ್ದಾರೆ. ಕೂಡಲೇ ಮೇಲಧಿಕಾರಿಗಳು ಗಂಗಾವತಿ ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ, ಕರ್ನಾಟಕ ದಸಂಸ ಸದಸ್ಯರು ಸೋಮವಾರ ನಗರದ ಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆ ಜಿಲ್ಲಾಧ್ಯಕ್ಷ ಸಿ.ಕೆ ಮರಿಸ್ವಾಮಿ ಮಾತನಾಡಿ, ‘ಗಂಗಾವತಿ, ಕಾರಟಗಿ, ಕನಕಗಿರಿ ತಾಲ್ಲೂಕಿನ ಬಾರ್ಗಳು ಅಬಕಾರಿ ಇಲಾಖೆ ನಿಯಮಗಳು ಉಲ್ಲಂಘಿಸಿ, ಕಾರ್ಯನಿರ್ವಹಿಸುತ್ತಿವೆ. ಸರಿಪಡಿಸಬೇಕಾದ ಅಧಿಕಾರಿಗಳು ಸುಮ್ಮನಿರುತ್ತಿದ್ದಾರೆ. ಇನ್ನೂ ಸಿಎಲ್- 2 ಪರವಾನಗಿ ಪಡೆದ ಮದ್ಯ ಮಾರಾಟಗಾರರು ಅಂಗಡಿಯಲ್ಲಿ ಕುಳಿತು ಮದ್ಯ ಸೇವನೆಗೆ ಅವಕಾಶ ನೀಡುತ್ತಿದ್ದಾರೆ. ಅಬಕಾರಿ ಇಲಾಖೆ ನಿಯಮದ ಪ್ರಕಾರ ಸಿಎಲ್-2 ಪರವಾನಗಿ ಪಡೆದವರು ಎಂಆರ್ಪಿ ದರಕ್ಕೆ ಮದ್ಯ ಮಾರಾಟ ಮಾಡಬೇಕು. ಆದರೆ ಮಾಲೀಕರು ಅಧಿಕ ಬೆಲೆಗೆ ಮದ್ಯ ಮಾರಾಟ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. </p>.<p>‘ಗ್ರಾಮೀಣ ಭಾಗದ ಅಂಗಡಿ, ಗುಡಿಸಲು, ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಅಕ್ರಮ ಮಾರಾಟ ಜರುಗುತ್ತಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ಕಿಂಚತ್ತು ತಲೆಕೆಡಿಸಿಕೊಳ್ಳುತ್ತಿಲ್ಲ. ಮದ್ಯ ಸೇವನೆಯಿಂದ ಬಹುತೇಕ ಕುಟುಂಬಗಳ ಬೀದಿಗೆ ಬಿಳುತ್ತಿವೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆ ಮರಿಯಪ್ಪ, ಹರಿಕೃಷ್ಣ, ನಾಗರಾಜ, ಸಮೀರ್, ಕುಮಾರ, ವೀರೇಶ, ದುರುಗೇಶ, ವಿಜಯ್, ತಿಪ್ಪಣ್ಣ, ಅನ್ವರ್, ದುರುಗೇಶ, ಸುಭಾನ್ಸಾಬ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ:</strong> ತಾಲ್ಲೂಕಿನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚಾಗಿದ್ದು, ನಿಯಂತ್ರಿಸಬೇಕಾದ ಅಬಕಾರಿ ಇಲಾಖೆ ಅಧಿಕಾರಿಗಳು ಕೈಕಟ್ಟಿ ಕುಳಿತಿದ್ದಾರೆ. ಕೂಡಲೇ ಮೇಲಧಿಕಾರಿಗಳು ಗಂಗಾವತಿ ಅಬಕಾರಿ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ, ಕರ್ನಾಟಕ ದಸಂಸ ಸದಸ್ಯರು ಸೋಮವಾರ ನಗರದ ಕೃಷ್ಣದೇವರಾಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆ ಜಿಲ್ಲಾಧ್ಯಕ್ಷ ಸಿ.ಕೆ ಮರಿಸ್ವಾಮಿ ಮಾತನಾಡಿ, ‘ಗಂಗಾವತಿ, ಕಾರಟಗಿ, ಕನಕಗಿರಿ ತಾಲ್ಲೂಕಿನ ಬಾರ್ಗಳು ಅಬಕಾರಿ ಇಲಾಖೆ ನಿಯಮಗಳು ಉಲ್ಲಂಘಿಸಿ, ಕಾರ್ಯನಿರ್ವಹಿಸುತ್ತಿವೆ. ಸರಿಪಡಿಸಬೇಕಾದ ಅಧಿಕಾರಿಗಳು ಸುಮ್ಮನಿರುತ್ತಿದ್ದಾರೆ. ಇನ್ನೂ ಸಿಎಲ್- 2 ಪರವಾನಗಿ ಪಡೆದ ಮದ್ಯ ಮಾರಾಟಗಾರರು ಅಂಗಡಿಯಲ್ಲಿ ಕುಳಿತು ಮದ್ಯ ಸೇವನೆಗೆ ಅವಕಾಶ ನೀಡುತ್ತಿದ್ದಾರೆ. ಅಬಕಾರಿ ಇಲಾಖೆ ನಿಯಮದ ಪ್ರಕಾರ ಸಿಎಲ್-2 ಪರವಾನಗಿ ಪಡೆದವರು ಎಂಆರ್ಪಿ ದರಕ್ಕೆ ಮದ್ಯ ಮಾರಾಟ ಮಾಡಬೇಕು. ಆದರೆ ಮಾಲೀಕರು ಅಧಿಕ ಬೆಲೆಗೆ ಮದ್ಯ ಮಾರಾಟ ನಡೆಸುತ್ತಿದ್ದಾರೆ’ ಎಂದು ಆರೋಪಿಸಿದರು. </p>.<p>‘ಗ್ರಾಮೀಣ ಭಾಗದ ಅಂಗಡಿ, ಗುಡಿಸಲು, ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಅಕ್ರಮ ಮಾರಾಟ ಜರುಗುತ್ತಿದ್ದು, ಅಧಿಕಾರಿಗಳು, ಜನಪ್ರತಿನಿಧಿಗಳು ಕಿಂಚತ್ತು ತಲೆಕೆಡಿಸಿಕೊಳ್ಳುತ್ತಿಲ್ಲ. ಮದ್ಯ ಸೇವನೆಯಿಂದ ಬಹುತೇಕ ಕುಟುಂಬಗಳ ಬೀದಿಗೆ ಬಿಳುತ್ತಿವೆ. ಕೂಡಲೇ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.</p>.<p>ಸಂಘಟನೆ ಮರಿಯಪ್ಪ, ಹರಿಕೃಷ್ಣ, ನಾಗರಾಜ, ಸಮೀರ್, ಕುಮಾರ, ವೀರೇಶ, ದುರುಗೇಶ, ವಿಜಯ್, ತಿಪ್ಪಣ್ಣ, ಅನ್ವರ್, ದುರುಗೇಶ, ಸುಭಾನ್ಸಾಬ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>