<p><strong>ಯಲಬುರ್ಗಾ:</strong> ‘ಎನ್ಆರ್ಎಲ್ಎಂ ಸಂಜೀವಿನಿ ಒಕ್ಕೂಟದ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢತೆ ಸಾಧಿಸಿದ್ದಾರೆ. ಅನೇಕ ಕುಟುಂಬಗಳು ಉತ್ತಮ ಜೀವನ ನಿರ್ವಹಣೆ ಮಾಡುತ್ತಿವೆ. ವಿವಿಧ ರೀತಿಯ ಪ್ರೋತ್ಸಾಹ ನೀಡುವ ಸಂಜೀವಿನಿ ಒಕ್ಕೂಟ ಮಹಿಳೆಯರ ಪಾಲಿಗೆ ಒಂದು ವರದಾನವಾಗಿದೆ’ ಎಂದು ವಲಯ ಮೇಲ್ವಿಚಾರಕ ಶರಣಪ್ಪ ಮಾದಿನೂರ ಹೇಳಿದರು.</p>.<p>ತಾಲ್ಲೂಕಿನ ಮಾಟಲದಿನ್ನಿ ಗ್ರಾ.ಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಲಕ್ಷ್ಮಿ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ‘ಇದರಿಂದ ಹೆಚ್ಚಿನ ಸಂಖ್ಯೆಯ ಮಹಿಳೆಯರು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸಿಕೊಳ್ಳಬಹುದು’ ಎಂದು ಹೇಳಿದರು.</p>.<p>ಸಿಬ್ಬಂದಿ ಜ್ಯೋತಿ ಪ್ರಕಾಶ ಕೋರಿ ಮಾತನಾಡಿ, ‘ಪಂಚಾಯಿತಿ ಮಟ್ಟದಲ್ಲಿ 30 ಸಂಘಗಳಿದ್ದು, ಅವುಗಳಲ್ಲಿ 29 ಸ್ವ ಸಹಾಯ ಸಂಘಗಳಿಗೆ ಒಟ್ಟಿ ₹49.05 ಲಕ್ಷ ಸಾಲ ನೀಡಲಾಗಿದೆ. ಒಟ್ಟು 350 ಜನರ ಸದಸ್ಯರಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಕೆಎಚ್ಪಿಟಿ ವಲಯ ಮೇಲ್ವೀಚಾರಕಿ ಶಾರದಾ ಹಿರೇಮಠ ಮಾತನಾಡಿ, ‘ಒಕ್ಕೂಟದಲ್ಲಿ ಶಿಸ್ತುಬದ್ಧ ನಿರ್ವಹಣೆ, ಸಾಲ ವಸೂಲಾತಿಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಹಾಗೂ ಪ್ರಮಾಣಿಕತೆಯಿಂದ ಒಕ್ಕೂಟಗಳು ನಿರ್ವಹಣೆಗೆ ಒಳಪಡುತ್ತಿರುವುದರಿಂದ ಬಹುತೇಕ ಸಂಘಗಳು ಉತ್ತಮ ಸ್ಥಿತಿಯಲ್ಲಿವೆ’ ಎಂದು ಹೇಳಿದರು.</p>.<p>ಗೀತಾ ಮಾಲಿಪಾಟೀಲ, ಮಂಜುಳಾ ಹಡಪದ, ಕವಿತಾ ಹಂಚಿನಾಳ, ಶಿವಮ್ಮ ಮದ್ಲಗಟ್ಟಿ, ಅಧ್ಯಕ್ಷೆ ಚನ್ನಮ್ಮ ಪೊಲೀಸ್ ಪಾಟೀಲ, ಕಾರ್ಯದರ್ಶಿ ಕಸ್ತೂರಿ ಕೋಳೂರು, ಕೆಎಚ್ಪಿಟಿ ಸುಮಿತ್ರಾ ಲೇಬಗೇರಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಗುಂಪಿನ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ‘ಎನ್ಆರ್ಎಲ್ಎಂ ಸಂಜೀವಿನಿ ಒಕ್ಕೂಟದ ಮೂಲಕ ಮಹಿಳೆಯರು ಆರ್ಥಿಕವಾಗಿ ಸದೃಢತೆ ಸಾಧಿಸಿದ್ದಾರೆ. ಅನೇಕ ಕುಟುಂಬಗಳು ಉತ್ತಮ ಜೀವನ ನಿರ್ವಹಣೆ ಮಾಡುತ್ತಿವೆ. ವಿವಿಧ ರೀತಿಯ ಪ್ರೋತ್ಸಾಹ ನೀಡುವ ಸಂಜೀವಿನಿ ಒಕ್ಕೂಟ ಮಹಿಳೆಯರ ಪಾಲಿಗೆ ಒಂದು ವರದಾನವಾಗಿದೆ’ ಎಂದು ವಲಯ ಮೇಲ್ವಿಚಾರಕ ಶರಣಪ್ಪ ಮಾದಿನೂರ ಹೇಳಿದರು.</p>.<p>ತಾಲ್ಲೂಕಿನ ಮಾಟಲದಿನ್ನಿ ಗ್ರಾ.ಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಲಕ್ಷ್ಮಿ ಸಂಜೀವಿನಿ ಗ್ರಾ.ಪಂ ಮಟ್ಟದ ಒಕ್ಕೂಟದ ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ‘ಇದರಿಂದ ಹೆಚ್ಚಿನ ಸಂಖ್ಯೆಯ ಮಹಿಳೆಯರು ಆರ್ಥಿಕ ಹಾಗೂ ಸಾಮಾಜಿಕವಾಗಿ ಅಭಿವೃದ್ಧಿ ಸಾಧಿಸಿಕೊಳ್ಳಬಹುದು’ ಎಂದು ಹೇಳಿದರು.</p>.<p>ಸಿಬ್ಬಂದಿ ಜ್ಯೋತಿ ಪ್ರಕಾಶ ಕೋರಿ ಮಾತನಾಡಿ, ‘ಪಂಚಾಯಿತಿ ಮಟ್ಟದಲ್ಲಿ 30 ಸಂಘಗಳಿದ್ದು, ಅವುಗಳಲ್ಲಿ 29 ಸ್ವ ಸಹಾಯ ಸಂಘಗಳಿಗೆ ಒಟ್ಟಿ ₹49.05 ಲಕ್ಷ ಸಾಲ ನೀಡಲಾಗಿದೆ. ಒಟ್ಟು 350 ಜನರ ಸದಸ್ಯರಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>ಕೆಎಚ್ಪಿಟಿ ವಲಯ ಮೇಲ್ವೀಚಾರಕಿ ಶಾರದಾ ಹಿರೇಮಠ ಮಾತನಾಡಿ, ‘ಒಕ್ಕೂಟದಲ್ಲಿ ಶಿಸ್ತುಬದ್ಧ ನಿರ್ವಹಣೆ, ಸಾಲ ವಸೂಲಾತಿಯಲ್ಲಿ ಗಣನೀಯ ಪ್ರಮಾಣದಲ್ಲಿ ಹೆಚ್ಚಳ ಹಾಗೂ ಪ್ರಮಾಣಿಕತೆಯಿಂದ ಒಕ್ಕೂಟಗಳು ನಿರ್ವಹಣೆಗೆ ಒಳಪಡುತ್ತಿರುವುದರಿಂದ ಬಹುತೇಕ ಸಂಘಗಳು ಉತ್ತಮ ಸ್ಥಿತಿಯಲ್ಲಿವೆ’ ಎಂದು ಹೇಳಿದರು.</p>.<p>ಗೀತಾ ಮಾಲಿಪಾಟೀಲ, ಮಂಜುಳಾ ಹಡಪದ, ಕವಿತಾ ಹಂಚಿನಾಳ, ಶಿವಮ್ಮ ಮದ್ಲಗಟ್ಟಿ, ಅಧ್ಯಕ್ಷೆ ಚನ್ನಮ್ಮ ಪೊಲೀಸ್ ಪಾಟೀಲ, ಕಾರ್ಯದರ್ಶಿ ಕಸ್ತೂರಿ ಕೋಳೂರು, ಕೆಎಚ್ಪಿಟಿ ಸುಮಿತ್ರಾ ಲೇಬಗೇರಿ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಗುಂಪಿನ ಸದಸ್ಯರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>