<p><strong>ಕುಷ್ಟಗಿ (ಕೊಪ್ಪಳ ಜಿಲ್ಲೆ): </strong>ತಾಲ್ಲೂಕಿನ ಕಲಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>ಅವಘಡದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.</p><p>ಸೊಲ್ಲಾಪುರದ ಜಯಶ್ರೀ ಕಾಂಬಳೆ (25), ಚಾಲಕ ರಾಘವೇಂದ್ರ ಕಾಂಬಳೆ (28), ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ನಂದ್ರಾಳ ಗ್ರಾಮದ ಖಾಜಪ್ಪ ಬನಸೋಡೆ (36), ಶಿರನಾಳದ ಅಕ್ಷಯ ಶಿವಶರಣ (22), ರಾಕಿ (4) ಮತ್ತು ರಶ್ಮಿಕಾ (2) ಮೃತಪಟ್ಟವರು.</p><p>ಜಯಶ್ರೀ ಗೃಹಿಣಿಯಾಗಿದ್ದರು. ರಾಘವೇಂದ್ರ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ಖಾಜಪ್ಪ ಮತ್ತು ಅಕ್ಷಯ ಕೂಲಿ ಕೆಲಸ ಮಾಡುತ್ತಿದ್ದರು. ತಮಿಳುನಾಡಿನ ಲಾರಿ ಗುಜರಾತ್ ಕಡೆಗೆ ತೆರಳುತ್ತಿತ್ತು. ಕಾರು ವಿಜಯಪುರದಿಂದ ಬೆಂಗಳೂರು ಕಡೆಗೆ ತೆರಳುವಾಗ ಅಪಘಾತ ನಡೆದಿದೆ. </p><p>‘ವೇಗವಾಗಿ ಬರುತ್ತಿದ್ದ ಕಾರಿನ ಟಯರ್ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಷ್ಟಗಿ (ಕೊಪ್ಪಳ ಜಿಲ್ಲೆ): </strong>ತಾಲ್ಲೂಕಿನ ಕಲಕೇರಿ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಲಾರಿ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ ಆರು ಜನ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.</p><p>ಅವಘಡದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮೃತರ ಕುಟುಂಬಕ್ಕೆ ತಲಾ ₹ 2 ಲಕ್ಷ ಪರಿಹಾರ ಘೋಷಿಸಿದ್ದಾರೆ.</p><p>ಸೊಲ್ಲಾಪುರದ ಜಯಶ್ರೀ ಕಾಂಬಳೆ (25), ಚಾಲಕ ರಾಘವೇಂದ್ರ ಕಾಂಬಳೆ (28), ವಿಜಯಪುರ ಜಿಲ್ಲೆ ಇಂಡಿ ತಾಲ್ಲೂಕಿನ ನಂದ್ರಾಳ ಗ್ರಾಮದ ಖಾಜಪ್ಪ ಬನಸೋಡೆ (36), ಶಿರನಾಳದ ಅಕ್ಷಯ ಶಿವಶರಣ (22), ರಾಕಿ (4) ಮತ್ತು ರಶ್ಮಿಕಾ (2) ಮೃತಪಟ್ಟವರು.</p><p>ಜಯಶ್ರೀ ಗೃಹಿಣಿಯಾಗಿದ್ದರು. ರಾಘವೇಂದ್ರ ಖಾಸಗಿ ಕಂಪನಿಯೊಂದರ ಉದ್ಯೋಗಿಯಾಗಿದ್ದರು. ಖಾಜಪ್ಪ ಮತ್ತು ಅಕ್ಷಯ ಕೂಲಿ ಕೆಲಸ ಮಾಡುತ್ತಿದ್ದರು. ತಮಿಳುನಾಡಿನ ಲಾರಿ ಗುಜರಾತ್ ಕಡೆಗೆ ತೆರಳುತ್ತಿತ್ತು. ಕಾರು ವಿಜಯಪುರದಿಂದ ಬೆಂಗಳೂರು ಕಡೆಗೆ ತೆರಳುವಾಗ ಅಪಘಾತ ನಡೆದಿದೆ. </p><p>‘ವೇಗವಾಗಿ ಬರುತ್ತಿದ್ದ ಕಾರಿನ ಟಯರ್ ಸಿಡಿದು ರಸ್ತೆ ವಿಭಜಕ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದಿರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ’ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>