<p>ಕೊಪ್ಪಳ: ‘ನಮ್ಮ ಆಡಳಿತದ ಕಾಲದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವ ಸುಳ್ಳನ್ನೇ ನೂರು ಬಾರಿ ಹೇಳಿ ಅದನ್ನೇ ಸತ್ಯವೆಂದು ಬಿಂಬಿಸಿದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಈ ಅವಧಿಯಲ್ಲಿ ನಿತ್ಯ ಹಗರಣಗಳನ್ನೇ ಮಾಡುತ್ತಿದೆ’ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು.</p>.<p>ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ವಿಶೇಷ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು ‘ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ ಎರಡು ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ಆದರೂ ನಾವು ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಹಳೆಯ ಸೋಲು ಬರೆದು ಹೊಸದಾಗಿ ಸಂಘಟನೆಗೆ ಆದ್ಯತೆ ಕೊಡಬೇಕು’ ಎಂದರು.</p>.<p>‘ಸಂಘಟನೆ ನಿರಂತರವಾಗಿ ಇದ್ದರಷ್ಟೇ ಚುನಾವಣೆಗಳಲ್ಲಿ ಗೆಲ್ಲಲು ಸಾಧ್ಯವಾಗುತ್ತದೆ. ಹಿಂದಿನ ಚುನಾವಣೆಯಲ್ಲಿನ ಸೋಲು ನಮಗೆ ಎಚ್ಚರಿಕೆಯ ಘಂಟೆಯಾಗಿದ್ದು, ಜನರ ಮನಸ್ಸಿಗೆ ಅನುಗುಣವಾಗಿ ಕೆಲಸ ಮಾಡಬೇಕು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸುಳ್ಳನ್ನೇ ನಿಜವೆಂದು ಬಿಂಬಿಸಿ ಜನರ ಮನಸ್ಸು ಕೆಡಿಸಿ ಅಧಿಕಾರ ಬಂದ ಕಾಂಗ್ರೆಸ್ ಈಗ ಕೆಟ್ಟ ಆಡಳಿತ ನೀಡುತ್ತಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನುವುದನ್ನು ಅವರ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಅನುದಾನಕ್ಕೆ ಹಣವಿಲ್ಲ ಎಂದು ಬಸವರಾಜ ರಾಯರಡ್ಡಿಯೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು’ ಎಂದು ಪ್ರಶ್ನಿಸಿದರು.</p>.<p>‘ಕೇಂದ್ರ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮತ್ತು ಕಾಂಗ್ರೆಸ್ನ ದುರಾಡಳಿತವನ್ನು ಜನರ ಮುಂದೆ ಇಡುವ ಕೆಲಸ ಮಾಡಬೇಕು. ಈಗಿನ ಸರ್ಕಾರದಷ್ಟು ದುರಾಡಳಿತ ಹಿಂದಿನ ಯಾವ ಸರ್ಕಾರವೂ ಮಾಡಿರಲಿಲ್ಲ. ಇದನ್ನು ಜನರ ಮುಂದಿಟ್ಟು ಹೋರಾಟ ಮಾಡಲಾಗುವುದು’ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ಮಾತನಾಡಿ ‘ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ಎಲ್ಲ ಪ್ರಮುಖರ ಮುಂದೆ ದೊಡ್ಡ ಸವಾಲಿದೆ. ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಗಟ್ಟಿಗೊಳಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದರು.</p>.<p>ಪಕ್ಷದ ರಾಜ್ಯ ಕಾರ್ಯದರ್ಶಿ ಲಲಿತಾ ಅನಾಪೂರ, ಶಾಸಕ ದೊಡ್ಡನಗೌಡ ಪಾಟೀಲ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಹೆಸರೂರು, ಶಿವು ಅರಿಕೇರಿ, ಜಿಲ್ಲಾ ಖಜಾಂಚಿ ನರಸಿಂಗರಾವ್ ಕುಲಕರ್ಣಿ, ಮಾಜಿ ಸಂಸದ ಕೆ. ಶಿವರಾಮಗೌಡ, ಮಾಜಿ ಶಾಸಕರಾದ ಜಿ.ವೀರಪ್ಪ, ಬಸವರಾಜ ದಢೇಸೂಗೂರು, ಪರಣ್ಣ ಮುನವಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನಾಡಿಗೇರ್, ಗಣೇಶ ಹೊರತಟ್ನಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p><strong>ಸ್ಥಳೀಯ ಚುನಾವಣೆಯತ್ತ ಬಿಜೆಪಿ ಚಿತ್ತ </strong></p><p>ಪಕ್ಷ ಸಂಘಟನೆ ಜೊತೆಗೆ ಮುಂಬರುವ ಸ್ಥಳೀಯ ಚುನಾವಣೆಗಳ ಬಗ್ಗೆಯೂ ಸಭೆಯಲ್ಲಿ ಬಿರುಸಿನ ಚರ್ಚೆಯಾಯಿತು. ಒಂದೇ ಸಮುದಾಯ ಮಾತ್ರವಲ್ಲ ಎಲ್ಲರಿಗೂ ಸಮಾನ ಅವಕಾಶ ಕೊಡಬೇಕು. ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು. ಯಾವುದೇ ಚುನಾವಣೆಯಲ್ಲಿ ಪಕ್ಷ ಗೆಲ್ಲಲೇಬೇಕು ಎಂದಾಗ ಪಕ್ಷ ಸಂಘಟನೆ ಹಾಗೂ ಜಾತಿವಾರು ಆದ್ಯತೆ ನೀಡುವತ್ತ ಗಮನ ಹರಿಸಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹಾಗೂ ಹಿಂದೂ ಸಮಾಜದ ಕುರಿತು ರಾಹುಲ್ ಗಾಂಧಿ ಹೇಳಿಕೆ ಕುರಿತು ಖಂಡನಾ ನಿರ್ಣಯ ಮಂಡಿಸಲಾಯಿತು. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಬಿಜೆಪಿ ಪದಾಧಿಕಾರಿಗಳು ಕಾಂಗ್ರೆಸ್ ಆಮಿಷಕ್ಕೆ ಬಲಿಯಾಗುತ್ತಿರುವುದು ಜಿಲ್ಲೆಯ ಜನಪ್ರತಿನಿಧಿಗಳು ಭ್ರಷ್ಟಾಚಾರ ವಿಷಯಗಳು ರಾಜ್ಯ ನಾಯಕರು ಗಮನ ಸೆಳೆಯುವಂತೆ ಮಾಡಬೇಕು ಎನ್ನುವ ವಿಷಯದ ಬಗ್ಗೆ ನಡೆಯಿತು ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಪ್ಪಳ: ‘ನಮ್ಮ ಆಡಳಿತದ ಕಾಲದಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎನ್ನುವ ಸುಳ್ಳನ್ನೇ ನೂರು ಬಾರಿ ಹೇಳಿ ಅದನ್ನೇ ಸತ್ಯವೆಂದು ಬಿಂಬಿಸಿದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಒಂದು ವರ್ಷವಾಗಿದೆ. ಈ ಅವಧಿಯಲ್ಲಿ ನಿತ್ಯ ಹಗರಣಗಳನ್ನೇ ಮಾಡುತ್ತಿದೆ’ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು.</p>.<p>ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ವಿಶೇಷ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಅವರು ‘ಪ್ರಧಾನಿ ನರೇಂದ್ರ ಮೋದಿ ಅವರು ಹಿಂದಿನ ಎರಡು ಅವಧಿಯಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದರು. ಆದರೂ ನಾವು ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಕೊಪ್ಪಳ ಕ್ಷೇತ್ರದಲ್ಲಿ ನಮ್ಮ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಸಾಧ್ಯವಾಗಲಿಲ್ಲ. ಹಳೆಯ ಸೋಲು ಬರೆದು ಹೊಸದಾಗಿ ಸಂಘಟನೆಗೆ ಆದ್ಯತೆ ಕೊಡಬೇಕು’ ಎಂದರು.</p>.<p>‘ಸಂಘಟನೆ ನಿರಂತರವಾಗಿ ಇದ್ದರಷ್ಟೇ ಚುನಾವಣೆಗಳಲ್ಲಿ ಗೆಲ್ಲಲು ಸಾಧ್ಯವಾಗುತ್ತದೆ. ಹಿಂದಿನ ಚುನಾವಣೆಯಲ್ಲಿನ ಸೋಲು ನಮಗೆ ಎಚ್ಚರಿಕೆಯ ಘಂಟೆಯಾಗಿದ್ದು, ಜನರ ಮನಸ್ಸಿಗೆ ಅನುಗುಣವಾಗಿ ಕೆಲಸ ಮಾಡಬೇಕು. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಸುಳ್ಳನ್ನೇ ನಿಜವೆಂದು ಬಿಂಬಿಸಿ ಜನರ ಮನಸ್ಸು ಕೆಡಿಸಿ ಅಧಿಕಾರ ಬಂದ ಕಾಂಗ್ರೆಸ್ ಈಗ ಕೆಟ್ಟ ಆಡಳಿತ ನೀಡುತ್ತಿದೆ. ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ ಎನ್ನುವುದನ್ನು ಅವರ ಪಕ್ಷದ ಶಾಸಕರೇ ಹೇಳುತ್ತಿದ್ದಾರೆ. ಅನುದಾನಕ್ಕೆ ಹಣವಿಲ್ಲ ಎಂದು ಬಸವರಾಜ ರಾಯರಡ್ಡಿಯೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು’ ಎಂದು ಪ್ರಶ್ನಿಸಿದರು.</p>.<p>‘ಕೇಂದ್ರ ಬಿಜೆಪಿ ಸರ್ಕಾರ ಮಾಡಿರುವ ಅಭಿವೃದ್ಧಿ ಕೆಲಸಗಳನ್ನು ಮತ್ತು ಕಾಂಗ್ರೆಸ್ನ ದುರಾಡಳಿತವನ್ನು ಜನರ ಮುಂದೆ ಇಡುವ ಕೆಲಸ ಮಾಡಬೇಕು. ಈಗಿನ ಸರ್ಕಾರದಷ್ಟು ದುರಾಡಳಿತ ಹಿಂದಿನ ಯಾವ ಸರ್ಕಾರವೂ ಮಾಡಿರಲಿಲ್ಲ. ಇದನ್ನು ಜನರ ಮುಂದಿಟ್ಟು ಹೋರಾಟ ಮಾಡಲಾಗುವುದು’ ಎಂದು ಹೇಳಿದರು.</p>.<p>ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಗುಳಗಣ್ಣನವರ್ ಮಾತನಾಡಿ ‘ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ಎಲ್ಲ ಪ್ರಮುಖರ ಮುಂದೆ ದೊಡ್ಡ ಸವಾಲಿದೆ. ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟನಾತ್ಮಕವಾಗಿ ಗಟ್ಟಿಗೊಳಿಸಲಾಗುವುದು. ಇದಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದರು.</p>.<p>ಪಕ್ಷದ ರಾಜ್ಯ ಕಾರ್ಯದರ್ಶಿ ಲಲಿತಾ ಅನಾಪೂರ, ಶಾಸಕ ದೊಡ್ಡನಗೌಡ ಪಾಟೀಲ, ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ ಕ್ಯಾವಟರ್, ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಹೆಸರೂರು, ಶಿವು ಅರಿಕೇರಿ, ಜಿಲ್ಲಾ ಖಜಾಂಚಿ ನರಸಿಂಗರಾವ್ ಕುಲಕರ್ಣಿ, ಮಾಜಿ ಸಂಸದ ಕೆ. ಶಿವರಾಮಗೌಡ, ಮಾಜಿ ಶಾಸಕರಾದ ಜಿ.ವೀರಪ್ಪ, ಬಸವರಾಜ ದಢೇಸೂಗೂರು, ಪರಣ್ಣ ಮುನವಳ್ಳಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ನಾಡಿಗೇರ್, ಗಣೇಶ ಹೊರತಟ್ನಾಳ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<p><strong>ಸ್ಥಳೀಯ ಚುನಾವಣೆಯತ್ತ ಬಿಜೆಪಿ ಚಿತ್ತ </strong></p><p>ಪಕ್ಷ ಸಂಘಟನೆ ಜೊತೆಗೆ ಮುಂಬರುವ ಸ್ಥಳೀಯ ಚುನಾವಣೆಗಳ ಬಗ್ಗೆಯೂ ಸಭೆಯಲ್ಲಿ ಬಿರುಸಿನ ಚರ್ಚೆಯಾಯಿತು. ಒಂದೇ ಸಮುದಾಯ ಮಾತ್ರವಲ್ಲ ಎಲ್ಲರಿಗೂ ಸಮಾನ ಅವಕಾಶ ಕೊಡಬೇಕು. ಈಗಿನಿಂದಲೇ ತಯಾರಿ ಮಾಡಿಕೊಳ್ಳಬೇಕು. ಯಾವುದೇ ಚುನಾವಣೆಯಲ್ಲಿ ಪಕ್ಷ ಗೆಲ್ಲಲೇಬೇಕು ಎಂದಾಗ ಪಕ್ಷ ಸಂಘಟನೆ ಹಾಗೂ ಜಾತಿವಾರು ಆದ್ಯತೆ ನೀಡುವತ್ತ ಗಮನ ಹರಿಸಬೇಕು ಎನ್ನುವ ಅಭಿಪ್ರಾಯ ವ್ಯಕ್ತವಾಯಿತು ಎಂದು ಮೂಲಗಳು ತಿಳಿಸಿವೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ ಹಾಗೂ ಹಿಂದೂ ಸಮಾಜದ ಕುರಿತು ರಾಹುಲ್ ಗಾಂಧಿ ಹೇಳಿಕೆ ಕುರಿತು ಖಂಡನಾ ನಿರ್ಣಯ ಮಂಡಿಸಲಾಯಿತು. ಜಿಲ್ಲೆಯಲ್ಲಿ ಪಕ್ಷ ಸಂಘಟನೆ ಬಿಜೆಪಿ ಪದಾಧಿಕಾರಿಗಳು ಕಾಂಗ್ರೆಸ್ ಆಮಿಷಕ್ಕೆ ಬಲಿಯಾಗುತ್ತಿರುವುದು ಜಿಲ್ಲೆಯ ಜನಪ್ರತಿನಿಧಿಗಳು ಭ್ರಷ್ಟಾಚಾರ ವಿಷಯಗಳು ರಾಜ್ಯ ನಾಯಕರು ಗಮನ ಸೆಳೆಯುವಂತೆ ಮಾಡಬೇಕು ಎನ್ನುವ ವಿಷಯದ ಬಗ್ಗೆ ನಡೆಯಿತು ಎಂದು ಮೂಲಗಳು ತಿಳಿಸಿವೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>