<p><strong>ಕೊಪ್ಪಳ:</strong> ಇಲ್ಲಿನ ಪ್ರಾದೇಶಿಕ ರಸ್ತೆ ಸಾರಿಗೆ ಕಚೇರಿ (ಆರ್ಟಿಒ) ಅಧಿಕಾರಿಯಾಗಿರುವ ಲಕ್ಷ್ಮಿಕಾಂತ್ ನಾಲವಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆ ಕಾರ್ಯಕರ್ತರು ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು. ಇಲ್ಲವಾದರೆ ಜು. 22ರಿಂದ ಆರ್ಟಿಒ ಕಚೇರಿ ಎದುರು ಅಮರಣಾಂತ ಉಪವಾಸ ಮಾಡುವುದಾಗಿ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನಸೇನೆ ಸಂಘಟನೆ ಜಿಲ್ಲಾಧ್ಯಕ್ಷ ಬಸವರಡ್ಡಿ ಶಿವನಗೌಡ್ರ ‘ಆರ್ಟಿಒ ಅಧಿಕಾರಿ ವಿರುದ್ಧ ಸಾಕಷ್ಟು ದೂರುಗಳು ಕೇಳಿಬಂದಿವೆ. ಇತ್ತೀಚೆಗೆ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರನ್ನು ಅಮಾನತು ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿಯೇ ಶಿಫಾರಸು ಮಾಡಲು ನಿರ್ಧರಿಸಿದ್ದಾರೆ. ಆದರೂ ಏನೂ ಕ್ರಮವಾಗಿಲ್ಲ’ ಎಂದರು.</p>.<p>‘ಆರ್ಟಿಒ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಮಧ್ಯವರ್ತಿಗಳು ಮತ್ತು ಅನಧಿಕೃತವಾಗಿ ಸಿಬ್ಬಂದಿಯ ಹಾವಳಿ ವ್ಯಾಪಕವಾಗಿದೆ. ಪ್ರತಿ ಕೆಲಸಕ್ಕೆ ಸಾಕಷ್ಟು ಸಮಯ ಕಾಯಬೇಕಾಗುತ್ತಿದೆ. ಹಣವನ್ನೂ ನೀಡಬೇಕಾಗುತ್ತಿದೆ. ಆದ್ದರಿಂದ ಅವರನ್ನು ಸೇವೆಯಿಂದ ವಜಾ ಮಾಡಬೇಕು, ವರ್ಗಾವಣೆಯನ್ನೂ ಮಾಡಬೇಕು ಎಂದು ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಪ್ರಮುಖರಾದ ನಿಸಾರ್ ಅಹ್ಮದ್ ಅಡ್ಡೆವಾಲೆ, ಶಿವಣ್ಣ ಈಳಿಗೇರ, ವಸಂತಕುಮಾರ ಹಾಗೂ ಸಿದ್ದು ಅಂಗಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಪ್ಪಳ:</strong> ಇಲ್ಲಿನ ಪ್ರಾದೇಶಿಕ ರಸ್ತೆ ಸಾರಿಗೆ ಕಚೇರಿ (ಆರ್ಟಿಒ) ಅಧಿಕಾರಿಯಾಗಿರುವ ಲಕ್ಷ್ಮಿಕಾಂತ್ ನಾಲವಾರ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ಜನಸೇನೆ ಕಾರ್ಯಕರ್ತರು ಅವರನ್ನು ತಕ್ಷಣವೇ ವರ್ಗಾವಣೆ ಮಾಡಬೇಕು. ಇಲ್ಲವಾದರೆ ಜು. 22ರಿಂದ ಆರ್ಟಿಒ ಕಚೇರಿ ಎದುರು ಅಮರಣಾಂತ ಉಪವಾಸ ಮಾಡುವುದಾಗಿ ಎಚ್ಚರಿಕೆ ನೀಡಿದರು.</p>.<p>ಇಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜನಸೇನೆ ಸಂಘಟನೆ ಜಿಲ್ಲಾಧ್ಯಕ್ಷ ಬಸವರಡ್ಡಿ ಶಿವನಗೌಡ್ರ ‘ಆರ್ಟಿಒ ಅಧಿಕಾರಿ ವಿರುದ್ಧ ಸಾಕಷ್ಟು ದೂರುಗಳು ಕೇಳಿಬಂದಿವೆ. ಇತ್ತೀಚೆಗೆ ನಡೆದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರನ್ನು ಅಮಾನತು ಮಾಡಲು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸೇರಿಯೇ ಶಿಫಾರಸು ಮಾಡಲು ನಿರ್ಧರಿಸಿದ್ದಾರೆ. ಆದರೂ ಏನೂ ಕ್ರಮವಾಗಿಲ್ಲ’ ಎಂದರು.</p>.<p>‘ಆರ್ಟಿಒ ಕಚೇರಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ಮಧ್ಯವರ್ತಿಗಳು ಮತ್ತು ಅನಧಿಕೃತವಾಗಿ ಸಿಬ್ಬಂದಿಯ ಹಾವಳಿ ವ್ಯಾಪಕವಾಗಿದೆ. ಪ್ರತಿ ಕೆಲಸಕ್ಕೆ ಸಾಕಷ್ಟು ಸಮಯ ಕಾಯಬೇಕಾಗುತ್ತಿದೆ. ಹಣವನ್ನೂ ನೀಡಬೇಕಾಗುತ್ತಿದೆ. ಆದ್ದರಿಂದ ಅವರನ್ನು ಸೇವೆಯಿಂದ ವಜಾ ಮಾಡಬೇಕು, ವರ್ಗಾವಣೆಯನ್ನೂ ಮಾಡಬೇಕು ಎಂದು ಹೋರಾಟ ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು.</p>.<p>ಪ್ರಮುಖರಾದ ನಿಸಾರ್ ಅಹ್ಮದ್ ಅಡ್ಡೆವಾಲೆ, ಶಿವಣ್ಣ ಈಳಿಗೇರ, ವಸಂತಕುಮಾರ ಹಾಗೂ ಸಿದ್ದು ಅಂಗಡಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>