<p><strong>ಯಲಬುರ್ಗಾ:</strong> ‘ಶಾಲಾ ಹಂತದಲ್ಲಿಯೇ ಮಕ್ಕಳಿಗೆ ವೃತ್ತಿ ಶಿಕ್ಷಣದ ಕುರಿತು ಮಾಹಿತಿ ನೀಡುವುದರಿಂದ ಭವಿಷ್ಯದಲ್ಲಿ ಆರ್ಥಿಕ ಸ್ವಾವಲಂಬಿಗಳಾಗಿ ರೂಪುಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ’ ಎಂದು ಕೊಪ್ಪಳ ಜಿಲ್ಲಾ ವಸತಿ ಶಾಲೆಗಳ ನೌಕರರ ಸಂಘದ ಅಧ್ಯಕ್ಷ ಗುರುಬಸಪ್ಪ ಮುಡಪಲದಿನ್ನಿ ಹೇಳಿದರು.</p>.<p>ತಾಲ್ಲೂಕಿನ ಹೊಸಳ್ಳಿ ಗ್ರಾಮದ ಹತ್ತಿರದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕ್ರೈಸ್ ಬೆಂಗಳೂರು ಹಾಗೂ ಇನ್ನಿತರ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಮಟ್ಟದ ವಸತಿ ಶಾಲಾ ಶಿಕ್ಷಕರಿಗೆ ಹಮ್ಮಿಕೊಂಡಿರುವ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮಕ್ಕಳ ಭೌದ್ಧಿಕ ಜ್ಞಾನವೃದ್ಧಿಯ ಜತೆಗೆ ಭವಿಷ್ಯತ್ತಿನಲ್ಲಿ ಕೈಗೊಳ್ಳಬಹುದಾದ ಅಥವಾ ಗುರಿ ಸಾಧನೆಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಸರ್ಕಾರೇತರ ಸಂಘ ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಯ ಮೂಲಕ ಉತ್ತಮ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಸಮನ್ವಯಾಧಿಕಾರಿ ನಾಗರಾಜ ಸಂಗನಾಳ ಮಾತನಾಡಿ, ‘ಮಕ್ಕಳ ಆಸಕ್ತಿ ಮತ್ತು ಅಭಿರುಚಿಯನ್ನು ಗುರುತಿಸಿ, ಆ ನಿಟ್ಟಿನಲ್ಲಿ ಅವರನ್ನು ಪ್ರೋತ್ಸಾಹಿಸಿ ಉತ್ತಮ ಸಾಧನೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ದಾರಿ ತೋರುವ ಕೆಲಸ ಆಗಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸುವಲ್ಲಿ ಹೆಚ್ಚಿನ ಪರಿಶ್ರಮ ಅಗತ್ಯ ಇರುವುದರಿಂದ ಈ ಹಂತದಲ್ಲಿಯೇ ಸ್ಪಷ್ಟ ಗುರಿ ಇಟ್ಟುಕೊಂಡು ಸಾಧನೆಗೆ ಈಗಿನಿಂದಲೇ ಪ್ರಯತ್ನಕ್ಕೆ ಮುಂದಾಗಬೇಕು. ಹೀಗಾಗಿ ಮಕ್ಕಳು ಕ್ರಿಯಾಶೀಲರಾಗಿರುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಪ್ರಾಚಾರ್ಯ ವಿರೂಪಾಕ್ಷ ಹನಮಶೆಟ್ಟಿ ಮಾತನಾಡಿದರು. ಅನೀಲ ಸಂಗಮ, ನಿಂಗಪ್ಪ, ನಾಗರಾಜ ಯಾದವ ಪಾಲ್ಗೊಂಡಿದ್ದರು. ಅಶ್ವಿನಿ, ಸಿಂಚನಾ, ವಾಣಿ ಬಿರಾದಾರ, ನಂದಾ ಬೆನಕನಾಳ, ಶಂಕರ ಇಂಗಳದಾಳ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಬುರ್ಗಾ:</strong> ‘ಶಾಲಾ ಹಂತದಲ್ಲಿಯೇ ಮಕ್ಕಳಿಗೆ ವೃತ್ತಿ ಶಿಕ್ಷಣದ ಕುರಿತು ಮಾಹಿತಿ ನೀಡುವುದರಿಂದ ಭವಿಷ್ಯದಲ್ಲಿ ಆರ್ಥಿಕ ಸ್ವಾವಲಂಬಿಗಳಾಗಿ ರೂಪುಗೊಳ್ಳುವ ಸಾಧ್ಯತೆಗಳು ಹೆಚ್ಚಿವೆ’ ಎಂದು ಕೊಪ್ಪಳ ಜಿಲ್ಲಾ ವಸತಿ ಶಾಲೆಗಳ ನೌಕರರ ಸಂಘದ ಅಧ್ಯಕ್ಷ ಗುರುಬಸಪ್ಪ ಮುಡಪಲದಿನ್ನಿ ಹೇಳಿದರು.</p>.<p>ತಾಲ್ಲೂಕಿನ ಹೊಸಳ್ಳಿ ಗ್ರಾಮದ ಹತ್ತಿರದ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಕ್ರೈಸ್ ಬೆಂಗಳೂರು ಹಾಗೂ ಇನ್ನಿತರ ಸಂಸ್ಥೆಗಳ ಸಹಯೋಗದಲ್ಲಿ ಜಿಲ್ಲಾಮಟ್ಟದ ವಸತಿ ಶಾಲಾ ಶಿಕ್ಷಕರಿಗೆ ಹಮ್ಮಿಕೊಂಡಿರುವ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಮಕ್ಕಳ ಭೌದ್ಧಿಕ ಜ್ಞಾನವೃದ್ಧಿಯ ಜತೆಗೆ ಭವಿಷ್ಯತ್ತಿನಲ್ಲಿ ಕೈಗೊಳ್ಳಬಹುದಾದ ಅಥವಾ ಗುರಿ ಸಾಧನೆಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸರ್ಕಾರ ಸರ್ಕಾರೇತರ ಸಂಘ ಸಂಸ್ಥೆಗಳ ಸಂಪನ್ಮೂಲ ವ್ಯಕ್ತಿಯ ಮೂಲಕ ಉತ್ತಮ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಸಮನ್ವಯಾಧಿಕಾರಿ ನಾಗರಾಜ ಸಂಗನಾಳ ಮಾತನಾಡಿ, ‘ಮಕ್ಕಳ ಆಸಕ್ತಿ ಮತ್ತು ಅಭಿರುಚಿಯನ್ನು ಗುರುತಿಸಿ, ಆ ನಿಟ್ಟಿನಲ್ಲಿ ಅವರನ್ನು ಪ್ರೋತ್ಸಾಹಿಸಿ ಉತ್ತಮ ಸಾಧನೆಗೆ ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ದಾರಿ ತೋರುವ ಕೆಲಸ ಆಗಬೇಕು. ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ಸು ಸಾಧಿಸುವಲ್ಲಿ ಹೆಚ್ಚಿನ ಪರಿಶ್ರಮ ಅಗತ್ಯ ಇರುವುದರಿಂದ ಈ ಹಂತದಲ್ಲಿಯೇ ಸ್ಪಷ್ಟ ಗುರಿ ಇಟ್ಟುಕೊಂಡು ಸಾಧನೆಗೆ ಈಗಿನಿಂದಲೇ ಪ್ರಯತ್ನಕ್ಕೆ ಮುಂದಾಗಬೇಕು. ಹೀಗಾಗಿ ಮಕ್ಕಳು ಕ್ರಿಯಾಶೀಲರಾಗಿರುವಂತೆ ನೋಡಿಕೊಳ್ಳಬೇಕು’ ಎಂದು ಹೇಳಿದರು.</p>.<p>ಪ್ರಾಚಾರ್ಯ ವಿರೂಪಾಕ್ಷ ಹನಮಶೆಟ್ಟಿ ಮಾತನಾಡಿದರು. ಅನೀಲ ಸಂಗಮ, ನಿಂಗಪ್ಪ, ನಾಗರಾಜ ಯಾದವ ಪಾಲ್ಗೊಂಡಿದ್ದರು. ಅಶ್ವಿನಿ, ಸಿಂಚನಾ, ವಾಣಿ ಬಿರಾದಾರ, ನಂದಾ ಬೆನಕನಾಳ, ಶಂಕರ ಇಂಗಳದಾಳ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>