<p><strong>ಕುಕನೂರು</strong>: ತಾಲ್ಲೂಕಿನ ಗುದ್ಲೆಪ್ಪನಮಠ ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸಂಬಂಧಿಸಿದ 30 ಎಕರೆ ಭೂಮಿಯಲ್ಲಿ ತಹಶೀಲ್ದಾರ್ ಕಾರ್ಯಾಲಯ ಹಾಗೂ ತಾಲ್ಲೂಕು ನ್ಯಾಯಾಲಯ ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು, ಆದರೆ ಅದನ್ನು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ.</p>.<p>ಗ್ರಾಮದಲ್ಲಿ ಶನಿವಾರ ತಹಶೀಲ್ದಾರ್ ಕಾರ್ಯಾಲಯಕ್ಕಾಗಿ ಶಾಸಕ ಬಸವರಾಜ ರಾಯರಡ್ಡಿ ಹಾಗೂ ಜಿಲ್ಲಾಧಿಕಾರಿ ನಲಿನ್ ಅತುಲ್ ಸ್ಥಳ ಪರಿಶೀಲಿಸಿದರು.</p>.<p>‘ಬಹಳ ಜನಗಳ ಹಿಂದಿಯಿಂದಲೂ ನಮ್ಮ ಗ್ರಾಮದ ಜಾಗವನ್ನು ವಿವಿಧ ಸರ್ಕಾರಿ ಕಟ್ಟಡಗಳಿಗಾಗಿ ಬಳಸುತ್ತಿದ್ದು, ನಮ್ಮ ಮನೆ ನಿರ್ಮಾಣಕ್ಕೆ ಜಾಗವಿಲ್ಲ. ಉಳಿದ ಈ ಜಾಗವನ್ನು ನೀವು ಸರ್ಕಾರಿ ಕಟ್ಟಡಗಳಿಗೆ ಬಳಸಿದರೆ ನಮಗೆ ಸ್ಮಶಾನ ಜಾಗಕ್ಕಾಗಿ ಹಾಗೂ ನಿರಾಶ್ರಿತರಿಗಾಗಿ ಮನೆ ನಿರ್ಮಿಸಲು ಜಾಗವಿರುವುದಿಲ್ಲ. ಆದ್ದರಿಂದ ದಯವಿಟ್ಟು ಈ ಜಾಗದ ವೀಕ್ಷಣೆ ನಿಲ್ಲಿಸಬೇಕು’ ಎಂದು ಸ್ಥಳೀಯರು ಮನವಿ ಸಲ್ಲಿಸಿದರು.</p>.<p>ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ‘ಗ್ರಾಮಸ್ಥರು ನೀಡಿದ ಮನವಿಯನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಸರ್ಕಾರದ ಮಟ್ಟದಲ್ಲಿ ತೆಗೆದುಕೊಳ್ಳಲಾಗುವುದು’ ಎಂದರು.</p>.<p>ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ‘ಸರ್ಕಾರದ ಮಟ್ಟದಲ್ಲಿ ಈ ವಿಷಯವನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವರು’ ಎಂದರು.</p>.<p>ಇದೇ ಸಂದರ್ಭದಲ್ಲಿ ಸ್ಥಳೀಯ ಜವಾಹರ್ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿದ ಶಾಸಕ ಬಸವರಾಜ ರಾಯರಡ್ಡಿ ಹಾಗೂ ಜಿಲ್ಲಾಧಿಕಾರಿ ನಲಿನ್ ಅತುಲ್ ವಿದ್ಯಾಲಯದ ಮೂಲಸೌಕರ್ಯ ಹಾಗೂ ಹಳೆಯ ಕಟ್ಟಡದ ಕುರಿತು ಪ್ರಾಚಾರ್ಯರೊಂದಿಗೆ ಚರ್ಚಿಸಿದರು.</p>.<p>ಕಾವ್ಯರಾಣಿ, ಪಿಡಬ್ಲ್ಯೂಡಿ ಇಲಾಖೆಯ ಜಿಲ್ಲಾ ನಿರ್ದೇಶಕ ಹೇಮಂತ್ ರಾಜ್, ತಹಶೀಲ್ದಾರ್ ಪ್ರಾಣೇಶ್ ಎಚ್. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಕನೂರು</strong>: ತಾಲ್ಲೂಕಿನ ಗುದ್ಲೆಪ್ಪನಮಠ ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸಂಬಂಧಿಸಿದ 30 ಎಕರೆ ಭೂಮಿಯಲ್ಲಿ ತಹಶೀಲ್ದಾರ್ ಕಾರ್ಯಾಲಯ ಹಾಗೂ ತಾಲ್ಲೂಕು ನ್ಯಾಯಾಲಯ ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು, ಆದರೆ ಅದನ್ನು ಗ್ರಾಮಸ್ಥರು ವಿರೋಧಿಸುತ್ತಿದ್ದಾರೆ.</p>.<p>ಗ್ರಾಮದಲ್ಲಿ ಶನಿವಾರ ತಹಶೀಲ್ದಾರ್ ಕಾರ್ಯಾಲಯಕ್ಕಾಗಿ ಶಾಸಕ ಬಸವರಾಜ ರಾಯರಡ್ಡಿ ಹಾಗೂ ಜಿಲ್ಲಾಧಿಕಾರಿ ನಲಿನ್ ಅತುಲ್ ಸ್ಥಳ ಪರಿಶೀಲಿಸಿದರು.</p>.<p>‘ಬಹಳ ಜನಗಳ ಹಿಂದಿಯಿಂದಲೂ ನಮ್ಮ ಗ್ರಾಮದ ಜಾಗವನ್ನು ವಿವಿಧ ಸರ್ಕಾರಿ ಕಟ್ಟಡಗಳಿಗಾಗಿ ಬಳಸುತ್ತಿದ್ದು, ನಮ್ಮ ಮನೆ ನಿರ್ಮಾಣಕ್ಕೆ ಜಾಗವಿಲ್ಲ. ಉಳಿದ ಈ ಜಾಗವನ್ನು ನೀವು ಸರ್ಕಾರಿ ಕಟ್ಟಡಗಳಿಗೆ ಬಳಸಿದರೆ ನಮಗೆ ಸ್ಮಶಾನ ಜಾಗಕ್ಕಾಗಿ ಹಾಗೂ ನಿರಾಶ್ರಿತರಿಗಾಗಿ ಮನೆ ನಿರ್ಮಿಸಲು ಜಾಗವಿರುವುದಿಲ್ಲ. ಆದ್ದರಿಂದ ದಯವಿಟ್ಟು ಈ ಜಾಗದ ವೀಕ್ಷಣೆ ನಿಲ್ಲಿಸಬೇಕು’ ಎಂದು ಸ್ಥಳೀಯರು ಮನವಿ ಸಲ್ಲಿಸಿದರು.</p>.<p>ಜಿಲ್ಲಾಧಿಕಾರಿ ನಲಿನ್ ಅತುಲ್ ಮಾತನಾಡಿ, ‘ಗ್ರಾಮಸ್ಥರು ನೀಡಿದ ಮನವಿಯನ್ನು ಪರಿಶೀಲಿಸಿ ಮುಂದಿನ ತೀರ್ಮಾನ ಸರ್ಕಾರದ ಮಟ್ಟದಲ್ಲಿ ತೆಗೆದುಕೊಳ್ಳಲಾಗುವುದು’ ಎಂದರು.</p>.<p>ಶಾಸಕ ಬಸವರಾಜ ರಾಯರಡ್ಡಿ ಮಾತನಾಡಿ, ‘ಸರ್ಕಾರದ ಮಟ್ಟದಲ್ಲಿ ಈ ವಿಷಯವನ್ನು ಪರಿಶೀಲಿಸಿ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವರು’ ಎಂದರು.</p>.<p>ಇದೇ ಸಂದರ್ಭದಲ್ಲಿ ಸ್ಥಳೀಯ ಜವಾಹರ್ ನವೋದಯ ವಿದ್ಯಾಲಯಕ್ಕೆ ಭೇಟಿ ನೀಡಿದ ಶಾಸಕ ಬಸವರಾಜ ರಾಯರಡ್ಡಿ ಹಾಗೂ ಜಿಲ್ಲಾಧಿಕಾರಿ ನಲಿನ್ ಅತುಲ್ ವಿದ್ಯಾಲಯದ ಮೂಲಸೌಕರ್ಯ ಹಾಗೂ ಹಳೆಯ ಕಟ್ಟಡದ ಕುರಿತು ಪ್ರಾಚಾರ್ಯರೊಂದಿಗೆ ಚರ್ಚಿಸಿದರು.</p>.<p>ಕಾವ್ಯರಾಣಿ, ಪಿಡಬ್ಲ್ಯೂಡಿ ಇಲಾಖೆಯ ಜಿಲ್ಲಾ ನಿರ್ದೇಶಕ ಹೇಮಂತ್ ರಾಜ್, ತಹಶೀಲ್ದಾರ್ ಪ್ರಾಣೇಶ್ ಎಚ್. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>