ಕರಡಿ ಹಾವಳಿ ಕಡಿವಾಣಕ್ಕೆ ಆಗ್ರಹ
ಕೊಪ್ಪಳ: ಇರಕಲ್ಲಗಡ ಹೋಬಳಿ ಭಾಗದಲ್ಲಿ ಕರಡಿ ಹಾವಳಿ ಹೆಚ್ಚಾಗುತ್ತಿದ್ದು ಜನ ಗಂಭೀರ ಸಮಸ್ಯೆ ಎದುರಿಸುತ್ತಿದ್ದಾರೆ. ಕರಡಿ ಹಾವಳಿಗೆ ಕಡಿವಾಣ ಹಾಕಬೇಕು. ಇಲ್ಲವಾದರೆ ಜಿಲ್ಲಾಡಳಿತ ಭವನದ ಎದುರು ಹೋರಾಟ ಮಾಡಲಾಗುವುದು ಎಂದು ಜನಾರ್ದನ ರೆಡ್ಡಿ ಹೇಳಿದರು. ಆ ಭಾಗದಲ್ಲಿ ಕರಡಿ ಧಾಮ ನಿರ್ಮಿಸಬೇಕು ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಚರ್ಚೆ ಮಾಡುವೆ. ಕರಡಿ ಹಾಳುಮಾಡಿದ ಬೆಳೆ ಮತ್ತು ಗಾಯಗೊಂಡ ವ್ಯಕ್ತಿ ಎರಡಕ್ಕೂ ಸರ್ಕಾರದಿಂದ ಪರಿಹಾರ ಸಿಗುತ್ತಿಲ್ಲ. ಈ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದರು.