<p><strong>ತಾವರಗೇರಾ</strong>: ಸಮೀಪದ ಜೆ ರಾಂಪೂರ ಗ್ರಾಮದಲ್ಲಿ ಗುರುವಾರ ಸಂಜೆ ಸುರಿದ ಮಳೆಯಲ್ಲಿ ಸಿಡಿಲು ಬಡಿದು ಗ್ರಾಮದ ರತ್ನಮ್ಮ ದೊಡ್ಡಪ್ಪ ಓತಗೇರಿ (44) ಎಂಬುವವರು ಮೃತಪಟ್ಟಿದ್ದಾರೆ. </p>.<p>ಜಮೀನಿನಲ್ಲಿ ಕೃಷಿ ಚಟುವಟಿಕೆಗೆ ಹೋಗಿದ್ದ ಸಂದರ್ಭದಲ್ಲಿ ಮಳೆ ಆರಂಭವಾಗಿದ್ದು, ಈ ವೇಳೆ ಸಿಡಿಲು ಬಡಿದಿದೆ. ವಿಷಯ ತಿಳಿದು ಸ್ಥಳಕ್ಕೆ ಕುಷ್ಟಗಿ ತಹಶೀಲ್ದಾರ್ ರವಿ ಎಸ್ ಅಂಗಡಿ ಭೇಟಿ ನೀಡಿ ಪರಿಶೀಲಿಸಿ, ಮೃತ ಕುಟುಂಬಕ್ಕೆ ₹ 5 ಲಕ್ಷ ಚೆಕ್ ವಿತರಿಸಿದರು. ಕಂದಾಯ ನಿರೀಕ್ಷಕ ಶರಣಯ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<p>ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ತೀರ್ಥಹಳ್ಳಿ ತಾಲ್ಲೂಕಿನ ಗುಜುಗೊಳ್ಳಿಯಲ್ಲಿ ಸಿಡಿಲು ಬಡಿದು ಕೃಷಿ ಕಾರ್ಮಿಕ ನಾಗೇಂದ್ರ ಎಮ್.ಎಸ್. (45) ಮೃತಪಟ್ಟರು.</p><p>ಗದಗ ಜಿಲ್ಲೆ ನರಗುಂದದ ಗುಡ್ಡದಕೇರಿ ಓಣಿಯ ಕುರಿಗಾಹಿ ಯಲ್ಲಪ್ಪ ಹನುಮಂತ ಕಿಲಿಕೈ (17) ಬೈರನಹಟ್ಟಿ ಗ್ರಾಮದ ಬಳಿ ಕುರಿ ಕಾಯುವಾಗ, ಸಿಡಿಲು ಬಡಿದು ಮೃತಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಾವರಗೇರಾ</strong>: ಸಮೀಪದ ಜೆ ರಾಂಪೂರ ಗ್ರಾಮದಲ್ಲಿ ಗುರುವಾರ ಸಂಜೆ ಸುರಿದ ಮಳೆಯಲ್ಲಿ ಸಿಡಿಲು ಬಡಿದು ಗ್ರಾಮದ ರತ್ನಮ್ಮ ದೊಡ್ಡಪ್ಪ ಓತಗೇರಿ (44) ಎಂಬುವವರು ಮೃತಪಟ್ಟಿದ್ದಾರೆ. </p>.<p>ಜಮೀನಿನಲ್ಲಿ ಕೃಷಿ ಚಟುವಟಿಕೆಗೆ ಹೋಗಿದ್ದ ಸಂದರ್ಭದಲ್ಲಿ ಮಳೆ ಆರಂಭವಾಗಿದ್ದು, ಈ ವೇಳೆ ಸಿಡಿಲು ಬಡಿದಿದೆ. ವಿಷಯ ತಿಳಿದು ಸ್ಥಳಕ್ಕೆ ಕುಷ್ಟಗಿ ತಹಶೀಲ್ದಾರ್ ರವಿ ಎಸ್ ಅಂಗಡಿ ಭೇಟಿ ನೀಡಿ ಪರಿಶೀಲಿಸಿ, ಮೃತ ಕುಟುಂಬಕ್ಕೆ ₹ 5 ಲಕ್ಷ ಚೆಕ್ ವಿತರಿಸಿದರು. ಕಂದಾಯ ನಿರೀಕ್ಷಕ ಶರಣಯ್ಯ, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.</p>.<p>ಮತ್ತೊಂದು ಪ್ರಕರಣದಲ್ಲಿ ಶಿವಮೊಗ್ಗ ತೀರ್ಥಹಳ್ಳಿ ತಾಲ್ಲೂಕಿನ ಗುಜುಗೊಳ್ಳಿಯಲ್ಲಿ ಸಿಡಿಲು ಬಡಿದು ಕೃಷಿ ಕಾರ್ಮಿಕ ನಾಗೇಂದ್ರ ಎಮ್.ಎಸ್. (45) ಮೃತಪಟ್ಟರು.</p><p>ಗದಗ ಜಿಲ್ಲೆ ನರಗುಂದದ ಗುಡ್ಡದಕೇರಿ ಓಣಿಯ ಕುರಿಗಾಹಿ ಯಲ್ಲಪ್ಪ ಹನುಮಂತ ಕಿಲಿಕೈ (17) ಬೈರನಹಟ್ಟಿ ಗ್ರಾಮದ ಬಳಿ ಕುರಿ ಕಾಯುವಾಗ, ಸಿಡಿಲು ಬಡಿದು ಮೃತಪಟ್ಟರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>