<p>ಯಲಬುರ್ಗಾ: ‘ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ’ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ದೂರಿದರು.</p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಗುಂಗಿನಲ್ಲಿಯೇ ಕಾಲಹರಣ ಮಾಡುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಮುಡಾ ಪ್ರಕರಣ, ವಾಲ್ಮೀಕಿ ನಿಗಮದ ಹಣ ದುರ್ಬಬಳಕೆ ಸೇರಿ ಅನೇಕ ಹಗರಣಗಳಲ್ಲಿ ಸಿಲುಕಿಕೊಂಡು ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ, ವಿವಿಧ ತನಿಖಾ ತಂಡಗಳಿಂದ ಅಧಿಕಾರಿಗಳು ರಾಜಕಾರಣಿಗಳ ವಿಚಾರಣೆ ಮೇಲಿಂದ ಮೇಲೆ ನಡೆಯುತ್ತಿರುವುದನ್ನು ಗಮನಿಸಿದರೆ ಸರ್ಕಾರವು ಭ್ರಷ್ಟಾಚಾರ ಮತ್ತು ಅವ್ಯವಹಾರವನ್ನೇ ಆಡಳಿತ ಎಂದು ಭಾವಿಸಿದಂತಿದೆ’ ಎಂದು ವ್ಯಂಗ್ಯವಾಡಿದರು.</p>.<p>‘ಮುಂದಿನ ದಿನಗಳಲ್ಲಿ ವಿವಿಧ ಚುನಾವಣೆಗಳನ್ನು ಎದುರಿಸಬೇಕಾಗುವುದರಿಂದ ಈಗಲೇ ಪಕ್ಷವನ್ನು ಸಂಘಟಿಸಿ ಬಲಗೊಳಿಸುವ ಕೆಲಸ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಗ್ರಾಮೀಣ ಮಟ್ಟದಲ್ಲಿಯೇ ಪಕ್ಷ ಸಂಘಟನೆಗೆ ಮುಂದಾಗಬೇಕು. ಸದಸ್ಯರನ್ನು ನೋಂದಾಯಿಸಿಕೊಂಡು ಬಲಗೊಳಿಸಬೇಕು. ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು’ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನವೀನಕುಮಾರ ಗುಳಗಣ್ಣನವರ್ ಮಾತನಾಡಿ, ‘ಗ್ಯಾರಂಟಿ ಹೆಸರಿನಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಈಗಿನ ರಾಜ್ಯ ಸರ್ಕಾರ ಖಜಾನೆ ಖಾಲಿಯಾಗಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ರಾಜ್ಯ ಸರ್ಕಾರ ನಿಶಕ್ತ ಸರ್ಕಾರವಾದಂತಿದೆ. ವಿವಿಧ ನಿಗಮಗಳಲ್ಲಿನ ಹಣವನ್ನು ದೋಚುವುದರಲ್ಲಿ ನಿರತರಾಗಿದ್ದಾರೆ’ ಎಂದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಹೊಸಮನಿ, ಮಾಜಿ ಅಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ್, ವೀರಣ್ಣ ಹುಬ್ಬಳ್ಳಿ, ಶಿವಕುಮಾರ ನಾಗಲಾಪೂರಮಠ, ಶಿವಪ್ಪ ವಾದಿ, ಶರಣಪ್ಪ ಬಣ್ಣದಬಾವಿ ಸೇರಿದಂತೆ ಮತ್ತಿತರು ಮಾತನಾಡಿದರು. ಮುಖಂಡರಾದ ಬಸವಲಿಂಗಪ್ಪ ಭೂತೆ, ಶಿವಶಂಕರ ದೇಸಾಯಿ, ಬಸವರಾಜ ಗೌರಾ, ಶಕುಂತಾಲದೇವಿ ಮಾಲಿಪಾಟೀಲ್, ಶಂಕ್ರಪ್ಪ ಸುರಪುರ, ರತನ ದೇಸಾಯಿ, ಶರಣಪ್ಪ ಈಳಗೇರ, ಅಯ್ಯನಗೌಡ ಕೆಂಚಮ್ಮನವರ್, ಸಿದ್ರಾಮೇಶ ಬೇಲೇರಿ, ರವಿ ಕಲಬುರ್ಗಿ, ಬಸವಲಿಂಗಪ್ಪ ಕೊತ್ತಲ, ವಸಂತಕುಮಾರ ಭಾವಿಮನಿ, ಕಳಕಪ್ಪ ತಳವಾರ, ಅಶೋಕ ಅರಕೇರಿ, ಕಲ್ಲಪ್ಪ ಕರಮುಡಿ, ಶಿವಲಿಲಾ ದಳವಾಯಿ, ಸಂತೋಷಾಜಿ ಜೋಷಿ ಸೇರಿದಂತೆ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ‘ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ’ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ದೂರಿದರು.</p>.<p>ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ‘ಗ್ಯಾರಂಟಿ ಗುಂಗಿನಲ್ಲಿಯೇ ಕಾಲಹರಣ ಮಾಡುತ್ತಿರುವ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅವುಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಲ್ಲಿ ವಿಫಲವಾಗಿದೆ. ಮುಡಾ ಪ್ರಕರಣ, ವಾಲ್ಮೀಕಿ ನಿಗಮದ ಹಣ ದುರ್ಬಬಳಕೆ ಸೇರಿ ಅನೇಕ ಹಗರಣಗಳಲ್ಲಿ ಸಿಲುಕಿಕೊಂಡು ಆಡಳಿತ ನಡೆಸಲು ಸಾಧ್ಯವಾಗುತ್ತಿಲ್ಲ, ವಿವಿಧ ತನಿಖಾ ತಂಡಗಳಿಂದ ಅಧಿಕಾರಿಗಳು ರಾಜಕಾರಣಿಗಳ ವಿಚಾರಣೆ ಮೇಲಿಂದ ಮೇಲೆ ನಡೆಯುತ್ತಿರುವುದನ್ನು ಗಮನಿಸಿದರೆ ಸರ್ಕಾರವು ಭ್ರಷ್ಟಾಚಾರ ಮತ್ತು ಅವ್ಯವಹಾರವನ್ನೇ ಆಡಳಿತ ಎಂದು ಭಾವಿಸಿದಂತಿದೆ’ ಎಂದು ವ್ಯಂಗ್ಯವಾಡಿದರು.</p>.<p>‘ಮುಂದಿನ ದಿನಗಳಲ್ಲಿ ವಿವಿಧ ಚುನಾವಣೆಗಳನ್ನು ಎದುರಿಸಬೇಕಾಗುವುದರಿಂದ ಈಗಲೇ ಪಕ್ಷವನ್ನು ಸಂಘಟಿಸಿ ಬಲಗೊಳಿಸುವ ಕೆಲಸ ಆಗಬೇಕಾಗಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಗ್ರಾಮೀಣ ಮಟ್ಟದಲ್ಲಿಯೇ ಪಕ್ಷ ಸಂಘಟನೆಗೆ ಮುಂದಾಗಬೇಕು. ಸದಸ್ಯರನ್ನು ನೋಂದಾಯಿಸಿಕೊಂಡು ಬಲಗೊಳಿಸಬೇಕು. ಕಾಂಗ್ರೆಸ್ ಸರ್ಕಾರದ ವೈಫಲ್ಯವನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು’ ಎಂದು ಕಾರ್ಯಕರ್ತರಿಗೆ ಕಿವಿ ಮಾತು ಹೇಳಿದರು.</p>.<p>ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ನವೀನಕುಮಾರ ಗುಳಗಣ್ಣನವರ್ ಮಾತನಾಡಿ, ‘ಗ್ಯಾರಂಟಿ ಹೆಸರಿನಲ್ಲಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಈಗಿನ ರಾಜ್ಯ ಸರ್ಕಾರ ಖಜಾನೆ ಖಾಲಿಯಾಗಿದೆ. ಯಾವುದೇ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ. ರಾಜ್ಯ ಸರ್ಕಾರ ನಿಶಕ್ತ ಸರ್ಕಾರವಾದಂತಿದೆ. ವಿವಿಧ ನಿಗಮಗಳಲ್ಲಿನ ಹಣವನ್ನು ದೋಚುವುದರಲ್ಲಿ ನಿರತರಾಗಿದ್ದಾರೆ’ ಎಂದರು.</p>.<p>ಬಿಜೆಪಿ ಮಂಡಲ ಅಧ್ಯಕ್ಷ ಮಾರುತಿ ಹೊಸಮನಿ, ಮಾಜಿ ಅಧ್ಯಕ್ಷ ವಿಶ್ವನಾಥ ಮರಿಬಸಪ್ಪನವರ್, ವೀರಣ್ಣ ಹುಬ್ಬಳ್ಳಿ, ಶಿವಕುಮಾರ ನಾಗಲಾಪೂರಮಠ, ಶಿವಪ್ಪ ವಾದಿ, ಶರಣಪ್ಪ ಬಣ್ಣದಬಾವಿ ಸೇರಿದಂತೆ ಮತ್ತಿತರು ಮಾತನಾಡಿದರು. ಮುಖಂಡರಾದ ಬಸವಲಿಂಗಪ್ಪ ಭೂತೆ, ಶಿವಶಂಕರ ದೇಸಾಯಿ, ಬಸವರಾಜ ಗೌರಾ, ಶಕುಂತಾಲದೇವಿ ಮಾಲಿಪಾಟೀಲ್, ಶಂಕ್ರಪ್ಪ ಸುರಪುರ, ರತನ ದೇಸಾಯಿ, ಶರಣಪ್ಪ ಈಳಗೇರ, ಅಯ್ಯನಗೌಡ ಕೆಂಚಮ್ಮನವರ್, ಸಿದ್ರಾಮೇಶ ಬೇಲೇರಿ, ರವಿ ಕಲಬುರ್ಗಿ, ಬಸವಲಿಂಗಪ್ಪ ಕೊತ್ತಲ, ವಸಂತಕುಮಾರ ಭಾವಿಮನಿ, ಕಳಕಪ್ಪ ತಳವಾರ, ಅಶೋಕ ಅರಕೇರಿ, ಕಲ್ಲಪ್ಪ ಕರಮುಡಿ, ಶಿವಲಿಲಾ ದಳವಾಯಿ, ಸಂತೋಷಾಜಿ ಜೋಷಿ ಸೇರಿದಂತೆ ಕಾರ್ಯಕರ್ತರು, ಮುಖಂಡರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>