<p>ಯಲಬುರ್ಗಾ: ‘ವಾಸಿಸುವ ಪ್ರದೇಶದಲ್ಲಿ ಸೊಳ್ಳೆಗಳ ಹುಟ್ಟಿಕೊಳ್ಳದಂತೆ ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಶುದ್ಧ ನೀರು ಸೇವಿಸುವ ಮೂಲಕ ಡಿಂಗಿ ಜ್ವರದಿಂದ ಪಾರಾಗಬಹುದಾಗಿದೆ’ ಎಂದು ಬಂಡಿ ಗ್ರಾಮದ ಆರೋಗ್ಯ ಸಮನ್ವಯಾಧಿಕಾರಿ ಡಾ. ಅನಂತ ಹೇಳಿದರು.</p>.<p>ತಾಲ್ಲೂಕಿನ ಬಂಡಿ ಗ್ರಾಮದ ಪುಟ್ಟರಾಜ ಜ್ಞಾನವಿಕಾಸ ಕೇಂದ್ರದಲ್ಲಿ ಆಯೋಜಿಸಿದ್ದ ಸೃಜನಶೀಲ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಿರ್ಮಲಾ ಕೊತಬಾಳ, ‘ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿದೆ. ವೈದ್ಯರ ಸಲಹೆ ಸೂಚನೆಗಳನ್ನು ಸರಿಯಾಗಿ ಪಾಲಿಸಿದರೆ ಆರೋಗ್ಯದಿಂದ ಇರಲು ಸಾಧ್ಯ’ ಎಂದರು.</p>.<p>ಯೋಜನಾಧಿಕಾರಿ ಸತೀಶ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಯೋಗ ಶಿಕ್ಷಕ ಲೋಕೇಶ, ಮೇಲ್ವಿಚಾರಕ ತ್ರೀವೇಣಿ ಬಾವಿಕಟ್ಟಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ, ಸೇವಾ ಪ್ರತಿನಿಧಿ ರತ್ನಾ ಸೇರಿ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಬುರ್ಗಾ: ‘ವಾಸಿಸುವ ಪ್ರದೇಶದಲ್ಲಿ ಸೊಳ್ಳೆಗಳ ಹುಟ್ಟಿಕೊಳ್ಳದಂತೆ ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಶುದ್ಧ ನೀರು ಸೇವಿಸುವ ಮೂಲಕ ಡಿಂಗಿ ಜ್ವರದಿಂದ ಪಾರಾಗಬಹುದಾಗಿದೆ’ ಎಂದು ಬಂಡಿ ಗ್ರಾಮದ ಆರೋಗ್ಯ ಸಮನ್ವಯಾಧಿಕಾರಿ ಡಾ. ಅನಂತ ಹೇಳಿದರು.</p>.<p>ತಾಲ್ಲೂಕಿನ ಬಂಡಿ ಗ್ರಾಮದ ಪುಟ್ಟರಾಜ ಜ್ಞಾನವಿಕಾಸ ಕೇಂದ್ರದಲ್ಲಿ ಆಯೋಜಿಸಿದ್ದ ಸೃಜನಶೀಲ ಹಾಗೂ ಆರೋಗ್ಯ ಜಾಗೃತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.</p>.<p>ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಿರ್ಮಲಾ ಕೊತಬಾಳ, ‘ಆರೋಗ್ಯ ಕಾಪಾಡಿಕೊಳ್ಳುವುದು ನಮ್ಮ ಕೈಯಲ್ಲಿದೆ. ವೈದ್ಯರ ಸಲಹೆ ಸೂಚನೆಗಳನ್ನು ಸರಿಯಾಗಿ ಪಾಲಿಸಿದರೆ ಆರೋಗ್ಯದಿಂದ ಇರಲು ಸಾಧ್ಯ’ ಎಂದರು.</p>.<p>ಯೋಜನಾಧಿಕಾರಿ ಸತೀಶ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಯೋಗ ಶಿಕ್ಷಕ ಲೋಕೇಶ, ಮೇಲ್ವಿಚಾರಕ ತ್ರೀವೇಣಿ ಬಾವಿಕಟ್ಟಿ, ಜ್ಞಾನವಿಕಾಸ ಸಮನ್ವಯಾಧಿಕಾರಿ ಗೀತಾ, ಸೇವಾ ಪ್ರತಿನಿಧಿ ರತ್ನಾ ಸೇರಿ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>