<p><strong>ಮಂಡ್ಯ:</strong> ‘ರಾಜ್ಯ ಸರ್ಕಾರ ತಮಿಳುನಾಡಿಗೆ ನಿರಂತರ ನೀರು ಹರಿಸಿದ್ದರ ಪರಿಣಾಮವಾಗಿ ಕೆಆರ್ಎಸ್ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ₹1,200 ಕೋಟಿ ಬೆಳೆ ನಷ್ಟವಾಗಿದೆ. ಸರ್ಕಾರ ಇದನ್ನು ತುಂಬಿಕೊಡಬೇಕು’ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಾಯಕಿ ಸುನಂದಾ ಜಯರಾಂ ಒತ್ತಾಯಿಸಿದರು.</p>.<p>‘ಕರ್ನಾಟಕ ಪ್ರಸ್ತುತ ಹನ್ನೊಂದೂವರೆ ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಮಾಡುತ್ತಿದ್ದು, 20 ಲಕ್ಷಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ನೀರಾವರಿ ಪ್ರದೇಶವನ್ನು ವಿಸ್ತರಿಸಿಕೊಳ್ಳಲು ಅವಕಾಶವಿದೆ. ಆದರೆ, ಆ ನಿಟ್ಟಿನಲ್ಲಿ ಸರ್ಕಾರಗಳು ಪ್ರಯತ್ನವನ್ನೇ ಮಾಡುತ್ತಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಕಾವೇರಿ ಕೊಳ್ಳದ ನೀರಾವರಿ ಅಂತರ್ಜಲ, ವಿದ್ಯುತ್ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡು ಕಾರ್ಯಗತ ಮಾಡಬೇಕು. ಇದಕ್ಕಾಗಿ ಪ್ರತಿ ವರ್ಷ ಬಜೆಟ್ನಲ್ಲಿ ಶೇ 30 ರಷ್ಟು ಅನುದಾನ ಕಾಯ್ದಿರಿಸಬೇಕು’ ಎಂದರು.</p>.<p>‘ಅತಿವೃಷ್ಠಿ ಸಮಯದಲ್ಲಿ ಮಳೆ ನೀರನ್ನು ಕಾವೇರಿ ಕೊಳ್ಳದಲ್ಲಿ ಹಿಡಿದಿಟ್ಟಕೊಳ್ಳುವ ಪ್ರಯತ್ನವಾಗಬೇಕು. ಪ್ರವಾಹ ಬಂದಾಗ ನೀರು ಹಿಡಿದಿಟ್ಟುಕೊಂಡಿದ್ದರೆ ಬರದ ಈ ಸಂದರ್ಭದಲ್ಲಿ ನೀರಿಗಾರಿ ಪರಿತಪಿಸುವ ಪರಿಸ್ಥಿತಿ ಬರುತ್ತಿರಲಿಲ್ಲ. ಕಾವೇರಿ ಕೊಳ್ಳದ ಪ್ರದೇಶದ ಬರಗಾಲವನ್ನು ತಡೆಯುವ ಕ್ರಮಗಳನ್ನೇ ಸರ್ಕಾರ ಕೈಗೊಳ್ಳುತ್ತಿಲ್ಲ’ ಎಂದರು.</p>.<p>‘ಕಾವೇರಿ ಕೊಳ್ಳದಲ್ಲಿ ಸಣ್ಣ, ಮಧ್ಯಮ, ದೊಡ್ಡ ನೀರಾವರಿಯಂತಹ ಯೋಜನೆಯನ್ನು ತುರ್ತಾಗಿ ಕಾರ್ಯಗತ ಮಾಡಲು ಕ್ರಮ ವಹಿಸಬೇಕು. ಕೆಆರ್ಎಸ್ ಜಲಾಶಯ ಭದ್ರತೆ, ರಕ್ಷಣೆ ಮುಖ್ಯವಾಗಿದ್ದು, ಗಣಿಗಾರಿಕೆ, ಪರೀಕ್ಷಾರ್ಥ ಸ್ಪೋಟ, ಡಿಸ್ನಿಲ್ಯಾಂಡ್ ಕಾರ್ಯಚಟುವಟಿಕೆಗಳನ್ನು ಅಣೆಕಟ್ಟೆಯ ಪ್ರದೇಶಗಳಲ್ಲಿ ನಿಷೇಧಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಾವೇರಿ ನದಿ ನೀರು ನ್ಯಾಯಮಂಡಳಿ ನೀಡಿರುವ ತೀರ್ಪು ಏಕಪಕ್ಷೀಯವಾಗಿದ್ದು, ಪಾಲಿಸಲಾಗದಂತ ತೀರ್ಪು ಆಗಿರುವುದರಿಂದ ರಾಜ್ಯ ಸರ್ಕಾರ ತೀರ್ಪನ್ನು ತಿರಸ್ಕರಿಸಬೇಕು. ಕಾವೇರಿ ನದಿ ನೀರು ನಿಯಂತ್ರಣ ಮಂಡಳಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಗಳು ರೈತರ ಪಾಲಿಗೆ ಮರಣಶಾಸನವಾಗಿವೆ’ ಎಂದರು.</p>.<p>‘ಕರ್ನಾಟಕ ಒಪ್ಪಿಕೊಳ್ಳಲು, ಪಾಲಿಸಲು ಸಾಧ್ಯವಿಲ್ಲದಂತಹ ಘೋರ ಆದೇಶವನ್ನು ಸರ್ಕಾರ ತಿರಸ್ಕರಿಸಿ ಕಾನೂನು ಹೋರಾಟ ಮುಂದುವರಿಸಬೇಕು. ಕಾವೇರಿ ಕೊಳ್ಳದ ನದಿ, ನೀರು ಉಳಿವು, ಜಲಾಶಯ ರಕ್ಷಣೆ ಮಾಡುವ ಕರ್ತವ್ಯಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ತಮಿಳುನಾಡು ಸರ್ಕಾರ ಒಕ್ಕೂಟಕ್ಕೆ ಧಕ್ಕೆ ತರುವ ಕಾರ್ಯ ಮಾಡುತ್ತಿದೆ. ಹಠಮಾರಿತನದ ಧೋರಣೆಯಿಂದಾಗಿ ನೀರು ಲಭ್ಯವಿಲ್ಲದಿದ್ದರೂ ನಿರಂತರವಾಗಿ ನೀರನ್ನು ಪಡೆದುಕೊಳ್ಳುತ್ತಿದೆ. ತನ್ನ ಕೃಷಿ ಪ್ರದೇಶವನ್ನು ಕೇಂದ್ರದ ಅನುದಾನದಿಂದ ಹೆಚ್ಚೆಚ್ಚು ವಿಸ್ತಾರ ಮಾಡಿಕೊಳ್ಳುತ್ತಿದೆ. ಕರ್ನಾಟಕ ನೀರಾವರಿ ಪ್ರದೇಶಗಳ ವಿಸ್ತರಣೆಗೆ ಅಡ್ಡಿಪಡಿಸುತ್ತಿದೆ’ ಎಂದರು.</p>.<p>ಸಮಿತಿಯ ಕೆ.ಬೋರಯ್ಯ, ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಸಾತನೂರು ವೇಣುಗೋಪಾಲ್, ಮಂಜುನಾಥ್, ನಾರಾಯಣ್, ಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ರಾಜ್ಯ ಸರ್ಕಾರ ತಮಿಳುನಾಡಿಗೆ ನಿರಂತರ ನೀರು ಹರಿಸಿದ್ದರ ಪರಿಣಾಮವಾಗಿ ಕೆಆರ್ಎಸ್ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ₹1,200 ಕೋಟಿ ಬೆಳೆ ನಷ್ಟವಾಗಿದೆ. ಸರ್ಕಾರ ಇದನ್ನು ತುಂಬಿಕೊಡಬೇಕು’ ಎಂದು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಾಯಕಿ ಸುನಂದಾ ಜಯರಾಂ ಒತ್ತಾಯಿಸಿದರು.</p>.<p>‘ಕರ್ನಾಟಕ ಪ್ರಸ್ತುತ ಹನ್ನೊಂದೂವರೆ ಲಕ್ಷ ಎಕರೆ ಪ್ರದೇಶದಲ್ಲಿ ನೀರಾವರಿ ಮಾಡುತ್ತಿದ್ದು, 20 ಲಕ್ಷಕ್ಕೂ ಹೆಚ್ಚು ಎಕರೆ ಪ್ರದೇಶಕ್ಕೆ ನೀರಾವರಿ ಪ್ರದೇಶವನ್ನು ವಿಸ್ತರಿಸಿಕೊಳ್ಳಲು ಅವಕಾಶವಿದೆ. ಆದರೆ, ಆ ನಿಟ್ಟಿನಲ್ಲಿ ಸರ್ಕಾರಗಳು ಪ್ರಯತ್ನವನ್ನೇ ಮಾಡುತ್ತಿಲ್ಲ’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಕಾವೇರಿ ಕೊಳ್ಳದ ನೀರಾವರಿ ಅಂತರ್ಜಲ, ವಿದ್ಯುತ್ ಅಭಿವೃದ್ಧಿ ಯೋಜನೆಗಳನ್ನು ಕೈಗೆತ್ತಿಕೊಂಡು ಕಾರ್ಯಗತ ಮಾಡಬೇಕು. ಇದಕ್ಕಾಗಿ ಪ್ರತಿ ವರ್ಷ ಬಜೆಟ್ನಲ್ಲಿ ಶೇ 30 ರಷ್ಟು ಅನುದಾನ ಕಾಯ್ದಿರಿಸಬೇಕು’ ಎಂದರು.</p>.<p>‘ಅತಿವೃಷ್ಠಿ ಸಮಯದಲ್ಲಿ ಮಳೆ ನೀರನ್ನು ಕಾವೇರಿ ಕೊಳ್ಳದಲ್ಲಿ ಹಿಡಿದಿಟ್ಟಕೊಳ್ಳುವ ಪ್ರಯತ್ನವಾಗಬೇಕು. ಪ್ರವಾಹ ಬಂದಾಗ ನೀರು ಹಿಡಿದಿಟ್ಟುಕೊಂಡಿದ್ದರೆ ಬರದ ಈ ಸಂದರ್ಭದಲ್ಲಿ ನೀರಿಗಾರಿ ಪರಿತಪಿಸುವ ಪರಿಸ್ಥಿತಿ ಬರುತ್ತಿರಲಿಲ್ಲ. ಕಾವೇರಿ ಕೊಳ್ಳದ ಪ್ರದೇಶದ ಬರಗಾಲವನ್ನು ತಡೆಯುವ ಕ್ರಮಗಳನ್ನೇ ಸರ್ಕಾರ ಕೈಗೊಳ್ಳುತ್ತಿಲ್ಲ’ ಎಂದರು.</p>.<p>‘ಕಾವೇರಿ ಕೊಳ್ಳದಲ್ಲಿ ಸಣ್ಣ, ಮಧ್ಯಮ, ದೊಡ್ಡ ನೀರಾವರಿಯಂತಹ ಯೋಜನೆಯನ್ನು ತುರ್ತಾಗಿ ಕಾರ್ಯಗತ ಮಾಡಲು ಕ್ರಮ ವಹಿಸಬೇಕು. ಕೆಆರ್ಎಸ್ ಜಲಾಶಯ ಭದ್ರತೆ, ರಕ್ಷಣೆ ಮುಖ್ಯವಾಗಿದ್ದು, ಗಣಿಗಾರಿಕೆ, ಪರೀಕ್ಷಾರ್ಥ ಸ್ಪೋಟ, ಡಿಸ್ನಿಲ್ಯಾಂಡ್ ಕಾರ್ಯಚಟುವಟಿಕೆಗಳನ್ನು ಅಣೆಕಟ್ಟೆಯ ಪ್ರದೇಶಗಳಲ್ಲಿ ನಿಷೇಧಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕಾವೇರಿ ನದಿ ನೀರು ನ್ಯಾಯಮಂಡಳಿ ನೀಡಿರುವ ತೀರ್ಪು ಏಕಪಕ್ಷೀಯವಾಗಿದ್ದು, ಪಾಲಿಸಲಾಗದಂತ ತೀರ್ಪು ಆಗಿರುವುದರಿಂದ ರಾಜ್ಯ ಸರ್ಕಾರ ತೀರ್ಪನ್ನು ತಿರಸ್ಕರಿಸಬೇಕು. ಕಾವೇರಿ ನದಿ ನೀರು ನಿಯಂತ್ರಣ ಮಂಡಳಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶಗಳು ರೈತರ ಪಾಲಿಗೆ ಮರಣಶಾಸನವಾಗಿವೆ’ ಎಂದರು.</p>.<p>‘ಕರ್ನಾಟಕ ಒಪ್ಪಿಕೊಳ್ಳಲು, ಪಾಲಿಸಲು ಸಾಧ್ಯವಿಲ್ಲದಂತಹ ಘೋರ ಆದೇಶವನ್ನು ಸರ್ಕಾರ ತಿರಸ್ಕರಿಸಿ ಕಾನೂನು ಹೋರಾಟ ಮುಂದುವರಿಸಬೇಕು. ಕಾವೇರಿ ಕೊಳ್ಳದ ನದಿ, ನೀರು ಉಳಿವು, ಜಲಾಶಯ ರಕ್ಷಣೆ ಮಾಡುವ ಕರ್ತವ್ಯಗಳನ್ನು ತ್ವರಿತವಾಗಿ ಕೈಗೆತ್ತಿಕೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>‘ತಮಿಳುನಾಡು ಸರ್ಕಾರ ಒಕ್ಕೂಟಕ್ಕೆ ಧಕ್ಕೆ ತರುವ ಕಾರ್ಯ ಮಾಡುತ್ತಿದೆ. ಹಠಮಾರಿತನದ ಧೋರಣೆಯಿಂದಾಗಿ ನೀರು ಲಭ್ಯವಿಲ್ಲದಿದ್ದರೂ ನಿರಂತರವಾಗಿ ನೀರನ್ನು ಪಡೆದುಕೊಳ್ಳುತ್ತಿದೆ. ತನ್ನ ಕೃಷಿ ಪ್ರದೇಶವನ್ನು ಕೇಂದ್ರದ ಅನುದಾನದಿಂದ ಹೆಚ್ಚೆಚ್ಚು ವಿಸ್ತಾರ ಮಾಡಿಕೊಳ್ಳುತ್ತಿದೆ. ಕರ್ನಾಟಕ ನೀರಾವರಿ ಪ್ರದೇಶಗಳ ವಿಸ್ತರಣೆಗೆ ಅಡ್ಡಿಪಡಿಸುತ್ತಿದೆ’ ಎಂದರು.</p>.<p>ಸಮಿತಿಯ ಕೆ.ಬೋರಯ್ಯ, ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಸಾತನೂರು ವೇಣುಗೋಪಾಲ್, ಮಂಜುನಾಥ್, ನಾರಾಯಣ್, ಕೃಷ್ಣ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>