<p><strong>ಮಳವಳ್ಳಿ</strong>: ಪುರಸಭೆಯ 22ನೇ ವಾರ್ಡ್ನ ತಮ್ಮಡಹಳ್ಳಿ ರಸ್ತೆಯಲ್ಲಿನ ಕೊನೆ ಭಾಗದಲ್ಲಿ ನಗರೋತ್ಥಾನ ಯೋಜನೆಯಡಿ ಅವೈಜ್ಞಾನಿಕ ಕಾಮಗಾರಿಯಿಂದ ಆಗಿದ್ದ ಗುಂಡಿಗಳನ್ನು ಕೊನೆಗೂ ಪುರಸಭೆಯಿಂದ ಮುಚ್ಚಿಸಲಾಗಿದೆ.</p>.<p>ನಗರೋತ್ಥಾನ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಂಡಿದ್ದ ಗುತ್ತಿಗೆದಾರ ಯುಜಿಡಿ ಮತ್ತು ಚರಂಡಿ ಕಾಮಗಾರಿ ವೇಳೆ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚದೇ ಇದ್ದುದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. 22ನೇ ವಾರ್ಡ್ನ ಸದಸ್ಯ ಇಂದ್ರಮ್ಮ ದೊಡ್ಡಯ್ಯ ಸಾಕಷ್ಟು ಬಾರಿ ಗುಂಡಿ ಮುಚ್ಚಲು ಗುತ್ತಿಗೆದಾರರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೊನೆಗೆ ಪುರಸಭೆ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಿಸಿದ್ದಾರೆ.</p>.<p>ಸದಸ್ಯೆ ಇಂದ್ರಮ್ಮ ದೊಡ್ಡಯ್ಯ ಮಾತನಾಡಿ, ‘ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಮಳೆ ಬಂದ ಸಂದರ್ಭ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಹೀಗಾಗಿ ತಾತ್ಕಾಲಿಕವಾಗಿ ಮಣ್ಣು ಹಾಕಿಸಿದ್ದು, ಮುಂದಿನ ದಿನಗಳಲ್ಲಿ ಗುತ್ತಿಗೆದಾರ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಳವಳ್ಳಿ</strong>: ಪುರಸಭೆಯ 22ನೇ ವಾರ್ಡ್ನ ತಮ್ಮಡಹಳ್ಳಿ ರಸ್ತೆಯಲ್ಲಿನ ಕೊನೆ ಭಾಗದಲ್ಲಿ ನಗರೋತ್ಥಾನ ಯೋಜನೆಯಡಿ ಅವೈಜ್ಞಾನಿಕ ಕಾಮಗಾರಿಯಿಂದ ಆಗಿದ್ದ ಗುಂಡಿಗಳನ್ನು ಕೊನೆಗೂ ಪುರಸಭೆಯಿಂದ ಮುಚ್ಚಿಸಲಾಗಿದೆ.</p>.<p>ನಗರೋತ್ಥಾನ ಯೋಜನೆಯಡಿ ಕಾಮಗಾರಿ ಕೈಗೆತ್ತಿಕೊಂಡಿದ್ದ ಗುತ್ತಿಗೆದಾರ ಯುಜಿಡಿ ಮತ್ತು ಚರಂಡಿ ಕಾಮಗಾರಿ ವೇಳೆ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚದೇ ಇದ್ದುದರಿಂದ ವಾಹನ ಸವಾರರು ಪರದಾಡುವಂತಾಗಿತ್ತು. 22ನೇ ವಾರ್ಡ್ನ ಸದಸ್ಯ ಇಂದ್ರಮ್ಮ ದೊಡ್ಡಯ್ಯ ಸಾಕಷ್ಟು ಬಾರಿ ಗುಂಡಿ ಮುಚ್ಚಲು ಗುತ್ತಿಗೆದಾರರಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಕೊನೆಗೆ ಪುರಸಭೆ ಅಧಿಕಾರಿಗಳು ಗುಂಡಿಗಳನ್ನು ಮುಚ್ಚಿಸಿದ್ದಾರೆ.</p>.<p>ಸದಸ್ಯೆ ಇಂದ್ರಮ್ಮ ದೊಡ್ಡಯ್ಯ ಮಾತನಾಡಿ, ‘ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಮಳೆ ಬಂದ ಸಂದರ್ಭ ಸಾರ್ವಜನಿಕರಿಗೆ ಸಾಕಷ್ಟು ತೊಂದರೆ ಅನುಭವಿಸುತ್ತಿದ್ದರು. ಹೀಗಾಗಿ ತಾತ್ಕಾಲಿಕವಾಗಿ ಮಣ್ಣು ಹಾಕಿಸಿದ್ದು, ಮುಂದಿನ ದಿನಗಳಲ್ಲಿ ಗುತ್ತಿಗೆದಾರ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾಗಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>