<p><strong>ಕೆ.ಆರ್.ಪೇಟೆ:</strong> ತಾಲ್ಲೂಕಿನ ಬೇಲದಕೆರೆ ಗ್ರಾಮದಲ್ಲಿರುವ ಪ್ರಾಚೀನ ಅಮೃತೇಶ್ವರ (ಈಶ್ವರ) ದೇವಾಲಯಕ್ಕೆ ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಅವರು ಕಾಮಗಾರಿ ವೀಕ್ಷಿಸಿ ಸೂಕ್ತ ನಿರ್ದೇಶನ ನೀಡಿದರು.</p>.<p>ಮೈಸೂರಿನಿಂದ ಧರ್ಮಸ್ಥಳಕ್ಕೆ ತೆರಳುವ ವೇಳೆ ಮಾರ್ಗ ಮಧ್ಯೆ ಕೆ.ಆರ್.ಪೇಟೆ ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಗೆ ಆಗಮಿಸಿದ ಅವರು ತಾಲ್ಲೂಕಿನಲ್ಲಿ ಸಂಸ್ಥೆಯ ಕಾರ್ಯಕ್ರಮಗಳ ಅನುಷ್ಠಾ, ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಜೀರ್ಣೋದ್ದಾರಗೊಳ್ಳುತ್ತಿರುವ ದೇವಸ್ಥಾನಗಳ ಮಾಹಿತಿ ಪಡೆದರು.</p>.<p>ತಾಲ್ಲುಕಿನಲ್ಲಿ ಹೊಯ್ಸಳ ಅರಸರ ಕಾಲದಲ್ಲಿ ನಿರ್ಮುತವಾದ ಮಂಚೀಬೀಡು, ಹರಿಹರಪುರ, ಮಡುವಿನಕೋಡಿ ಮತ್ತು ಬೇಲದಕೆರೆ ಮುಂತಾದ ಗ್ರಾಮಗಳಲ್ಲಿ ಶಿಥಿಲವಾಗಿದ್ದ ದೇವಾಲಯಗಳ ಜೀರ್ಣೋದ್ದಾರಕ್ಕೆ ಧರ್ಮೋತ್ಥಾನ ಟ್ರಸ್ಟ್ ನೆರವು ನೀಡಿದೆ. ಈ ಹಿನ್ನಲೆಯಲ್ಲಿ ಬೇಲದಕೆರೆ ಗ್ರಾಮಕ್ಕೆ ತೆರಳಿ ಅಮೃತೇಶ್ವರ ದೇವಾಲಯದ ಕಾಮಗಾರಿ ವೀಕ್ಷಿಸಿದರು.</p>.<p>ನಂತರ ಮಾತನಾಡಿದ ಅವರು, ‘ಭಾರತೀಯ ಪರಂಪರೆಯ ಪ್ರತಿನಿಧಿಗಳೆಂದರೆ ದೇವಾಲಯಗಳಾಗಿದ್ದು, ಆ ಮೂಲಕ ನಾಡಿನ ಸಂಸ್ಕೃತಿ ಅರ್ಥವಾಗುತ್ತದೆ. ನಾಡಿನಲ್ಲಿ ಸಾವಿರಾರು ದೇವಾಲಯಗಳು ವಿನಾಶದ ಅಂಚಿನಲ್ಲಿದ್ದು, ಅವುಗಳ ಜೀರ್ಣೋದ್ದಾರಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದರು.</p>.<p>ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ, ಗ್ರಾಮ ಮುಖಂಡರಾದ ಬೇಲದಕೆರೆ ನಂಜಪ್ಪ, ಪಾಪೇಗೌಡ, ಶಿಕ್ಷಕ ಬಿ.ಸಿ.ಎಸ್.ಕುಮಾರ್, ಮರೀಗೌಡ, ವಿಜಯಲಕ್ಷ್ಮೀ ಮಂಜೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ:</strong> ತಾಲ್ಲೂಕಿನ ಬೇಲದಕೆರೆ ಗ್ರಾಮದಲ್ಲಿರುವ ಪ್ರಾಚೀನ ಅಮೃತೇಶ್ವರ (ಈಶ್ವರ) ದೇವಾಲಯಕ್ಕೆ ಭೇಟಿ ನೀಡಿದ ರಾಜ್ಯಸಭಾ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಅವರು ಕಾಮಗಾರಿ ವೀಕ್ಷಿಸಿ ಸೂಕ್ತ ನಿರ್ದೇಶನ ನೀಡಿದರು.</p>.<p>ಮೈಸೂರಿನಿಂದ ಧರ್ಮಸ್ಥಳಕ್ಕೆ ತೆರಳುವ ವೇಳೆ ಮಾರ್ಗ ಮಧ್ಯೆ ಕೆ.ಆರ್.ಪೇಟೆ ಪಟ್ಟಣದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಚೇರಿಗೆ ಆಗಮಿಸಿದ ಅವರು ತಾಲ್ಲೂಕಿನಲ್ಲಿ ಸಂಸ್ಥೆಯ ಕಾರ್ಯಕ್ರಮಗಳ ಅನುಷ್ಠಾ, ಧರ್ಮೋತ್ಥಾನ ಟ್ರಸ್ಟ್ ವತಿಯಿಂದ ಜೀರ್ಣೋದ್ದಾರಗೊಳ್ಳುತ್ತಿರುವ ದೇವಸ್ಥಾನಗಳ ಮಾಹಿತಿ ಪಡೆದರು.</p>.<p>ತಾಲ್ಲುಕಿನಲ್ಲಿ ಹೊಯ್ಸಳ ಅರಸರ ಕಾಲದಲ್ಲಿ ನಿರ್ಮುತವಾದ ಮಂಚೀಬೀಡು, ಹರಿಹರಪುರ, ಮಡುವಿನಕೋಡಿ ಮತ್ತು ಬೇಲದಕೆರೆ ಮುಂತಾದ ಗ್ರಾಮಗಳಲ್ಲಿ ಶಿಥಿಲವಾಗಿದ್ದ ದೇವಾಲಯಗಳ ಜೀರ್ಣೋದ್ದಾರಕ್ಕೆ ಧರ್ಮೋತ್ಥಾನ ಟ್ರಸ್ಟ್ ನೆರವು ನೀಡಿದೆ. ಈ ಹಿನ್ನಲೆಯಲ್ಲಿ ಬೇಲದಕೆರೆ ಗ್ರಾಮಕ್ಕೆ ತೆರಳಿ ಅಮೃತೇಶ್ವರ ದೇವಾಲಯದ ಕಾಮಗಾರಿ ವೀಕ್ಷಿಸಿದರು.</p>.<p>ನಂತರ ಮಾತನಾಡಿದ ಅವರು, ‘ಭಾರತೀಯ ಪರಂಪರೆಯ ಪ್ರತಿನಿಧಿಗಳೆಂದರೆ ದೇವಾಲಯಗಳಾಗಿದ್ದು, ಆ ಮೂಲಕ ನಾಡಿನ ಸಂಸ್ಕೃತಿ ಅರ್ಥವಾಗುತ್ತದೆ. ನಾಡಿನಲ್ಲಿ ಸಾವಿರಾರು ದೇವಾಲಯಗಳು ವಿನಾಶದ ಅಂಚಿನಲ್ಲಿದ್ದು, ಅವುಗಳ ಜೀರ್ಣೋದ್ದಾರಕ್ಕೆ ಎಲ್ಲರ ಸಹಕಾರ ಅಗತ್ಯ’ ಎಂದರು.</p>.<p>ಈ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲ್ಲೂಕು ಯೋಜನಾಧಿಕಾರಿ ಮಮತಾಶೆಟ್ಟಿ, ಗ್ರಾಮ ಮುಖಂಡರಾದ ಬೇಲದಕೆರೆ ನಂಜಪ್ಪ, ಪಾಪೇಗೌಡ, ಶಿಕ್ಷಕ ಬಿ.ಸಿ.ಎಸ್.ಕುಮಾರ್, ಮರೀಗೌಡ, ವಿಜಯಲಕ್ಷ್ಮೀ ಮಂಜೇಗೌಡ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>