ಜೈಲಿಗೆ ಹೋಗಲು ಸಿದ್ಧ: ಬೃಂದಾವನದ ಬಳಿ ಪ್ರತಿಭಟನೆ ನಡೆಸಿದ ನಂತರ, ರೈತರು ಮಂಡ್ಯ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಕುಮಾರ ಅವರನ್ನು ಭೇಟಿ ಮಾಡಿದರು. ‘ಟ್ರಯಲ್ ಬ್ಲಾಸ್ಟ್ ಕೂಡಲೇ ನಿಲ್ಲಿಸಬೇಕು. ಈ ಬಗ್ಗೆ ಮುಖ್ಯಮಂತ್ರಿ ಸಭೆ ಕರೆದು ತೀರ್ಮಾನ ಕೈಗೊಳ್ಳಬೇಕು. ಇಲ್ಲದಿದ್ದರೆ ಜು.5ರಂದು ಪ್ರತಿಭಟನೆ ನಡೆಸುತ್ತೇವೆ. ಜೈಲಿಗೆ ಹೋಗಲೂ ಸಿದ್ಧರಿದ್ದೇವೆ’ ಎಂದು ರೈತ ಮುಖಂಡರು ಗುಡುಗಿದರು.