<p><strong>ಮದ್ದೂರು</strong>: ತಾಲ್ಲೂಕು ಮತ್ತು ಜಿಲ್ಲೆಯಾದ್ಯಂತ ಲೈಸೆನ್ಸ್ ಪಡೆಯದೆ ರಸ್ತೆ ಬದಿಗಳಲ್ಲಿ ಎಳನೀರು ವ್ಯಾಪಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಪಿಎಂಸಿ ಎಳನೀರು ವರ್ತಕರು ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ಕಾರ್ಯದರ್ಶಿ ಲತಾಕುಮಾರಿ ಅವರನ್ನು ಒತ್ತಾಯಿಸಲಾಯಿತು.</p>.<p>ವರ್ತಕರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಎಚ್.ರವಿ ಚನ್ನಸಂದ್ರ ಮಾತನಾಡಿ, ‘ಎಳನೀರು ವರ್ತಕರು ಲೈಸೆನ್ಸ್ ಪಡೆದು ಪಟ್ಟಣದ ಎಳನೀರು ಮಾರುಕಟ್ಟೆಯ ಪ್ರಾಂಗಣದಲ್ಲಿ ವ್ಯಾಪಾರ ಮಾಡುತ್ತಿದ್ದು, ಪ್ರಾಂಗಣಗಳಿಗೆ ಎಳನೀರು ಬರದೆ ವರ್ತಕರಿಗೆ ತುಂಬಾ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲದೇ ಕೃಷಿ ಉತ್ಪನ್ನ ಮಾರುಕಟ್ಟೆಗೂ ಆದಾಯ ಸೋರಿಕೆಯಾಗುತ್ತಿದೆ’ ಎಂದರು.</p>.<p>ಎಲ್ಲಾ ಎಪಿಎಂಸಿ ಪ್ರಾಂಗಣಗಳಲ್ಲಿ ಮಾತ್ರ ವ್ಯಾಪಾರ ನಡೆಸುವಂತೆ ಕ್ರಮವಹಿಸಬೇಕು. ಅನಧಿಕೃತ ಎಳನೀರು ವ್ಯಾಪಾರಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಒತ್ತಾಯಿಸಿದರು.</p>.<p>ಜುಲೈ 30ರಂದು ಮಧ್ಯಾಹ್ನ 12.30ಕ್ಕೆ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ಸಭಾಂಗಣದಲ್ಲಿ ಈ ಸಂಬಂಧ ಉಪ ನಿರ್ದೇಶಕರು ಸಭೆಯನ್ನು ಕರೆದಿದ್ದು, ಸಮಿತಿಯಲ್ಲಿ ಲೈಸೆನ್ಸ್ ಪಡೆದು ವ್ಯವಹರಿಸುತ್ತಿರುವ ಎಲ್ಲ ವರ್ತಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಬೇಕು ಎಂದು ಮನವಿ ಮಾಡಿದರು.</p>.<p>ವರ್ತಕರ ಸಂಘದ ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ರಾಜ, ನಿರ್ದೇಶಕರಾದ ಶಿವರಾಜು, ಶಿವಣ್ಣ, ಯೋಗೇಶ್, ಮಲ್ಲರಾಜು, ಪ್ರಸನ್ನ, ತಮ್ಮಯ್ಯ, ಸುನಿಲ್, ವಿಜಯ್, ಶಿವು, ಹೊನ್ನೇಶ್, ಕೃಷ್ಣ, ಕುಮಾರ್ ಹಾಗೂ ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ತಾಲ್ಲೂಕು ಮತ್ತು ಜಿಲ್ಲೆಯಾದ್ಯಂತ ಲೈಸೆನ್ಸ್ ಪಡೆಯದೆ ರಸ್ತೆ ಬದಿಗಳಲ್ಲಿ ಎಳನೀರು ವ್ಯಾಪಾರ ಮಾಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಎಪಿಎಂಸಿ ಎಳನೀರು ವರ್ತಕರು ಪಟ್ಟಣದ ಎಪಿಎಂಸಿ ಕಚೇರಿಯಲ್ಲಿ ಕಾರ್ಯದರ್ಶಿ ಲತಾಕುಮಾರಿ ಅವರನ್ನು ಒತ್ತಾಯಿಸಲಾಯಿತು.</p>.<p>ವರ್ತಕರ ಸಂಘದ ತಾಲ್ಲೂಕು ಅಧ್ಯಕ್ಷ ಸಿ.ಎಚ್.ರವಿ ಚನ್ನಸಂದ್ರ ಮಾತನಾಡಿ, ‘ಎಳನೀರು ವರ್ತಕರು ಲೈಸೆನ್ಸ್ ಪಡೆದು ಪಟ್ಟಣದ ಎಳನೀರು ಮಾರುಕಟ್ಟೆಯ ಪ್ರಾಂಗಣದಲ್ಲಿ ವ್ಯಾಪಾರ ಮಾಡುತ್ತಿದ್ದು, ಪ್ರಾಂಗಣಗಳಿಗೆ ಎಳನೀರು ಬರದೆ ವರ್ತಕರಿಗೆ ತುಂಬಾ ತೊಂದರೆಯಾಗುತ್ತಿದೆ. ಅಷ್ಟೇ ಅಲ್ಲದೇ ಕೃಷಿ ಉತ್ಪನ್ನ ಮಾರುಕಟ್ಟೆಗೂ ಆದಾಯ ಸೋರಿಕೆಯಾಗುತ್ತಿದೆ’ ಎಂದರು.</p>.<p>ಎಲ್ಲಾ ಎಪಿಎಂಸಿ ಪ್ರಾಂಗಣಗಳಲ್ಲಿ ಮಾತ್ರ ವ್ಯಾಪಾರ ನಡೆಸುವಂತೆ ಕ್ರಮವಹಿಸಬೇಕು. ಅನಧಿಕೃತ ಎಳನೀರು ವ್ಯಾಪಾರಕ್ಕೆ ಕಡಿವಾಣ ಹಾಕಬೇಕು ಎಂದು ಅವರು ಒತ್ತಾಯಿಸಿದರು.</p>.<p>ಜುಲೈ 30ರಂದು ಮಧ್ಯಾಹ್ನ 12.30ಕ್ಕೆ ಕೃಷಿ ಉತ್ಪನ್ನ ಮಾರುಕಟ್ಟೆಯ ಸಮಿತಿಯ ಸಭಾಂಗಣದಲ್ಲಿ ಈ ಸಂಬಂಧ ಉಪ ನಿರ್ದೇಶಕರು ಸಭೆಯನ್ನು ಕರೆದಿದ್ದು, ಸಮಿತಿಯಲ್ಲಿ ಲೈಸೆನ್ಸ್ ಪಡೆದು ವ್ಯವಹರಿಸುತ್ತಿರುವ ಎಲ್ಲ ವರ್ತಕರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಗೆ ಆಗಮಿಸಬೇಕು ಎಂದು ಮನವಿ ಮಾಡಿದರು.</p>.<p>ವರ್ತಕರ ಸಂಘದ ಉಪಾಧ್ಯಕ್ಷ ಉಮೇಶ್, ಕಾರ್ಯದರ್ಶಿ ರಾಜ, ನಿರ್ದೇಶಕರಾದ ಶಿವರಾಜು, ಶಿವಣ್ಣ, ಯೋಗೇಶ್, ಮಲ್ಲರಾಜು, ಪ್ರಸನ್ನ, ತಮ್ಮಯ್ಯ, ಸುನಿಲ್, ವಿಜಯ್, ಶಿವು, ಹೊನ್ನೇಶ್, ಕೃಷ್ಣ, ಕುಮಾರ್ ಹಾಗೂ ಸೋಮಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>