<p><strong>ಮದ್ದೂರು</strong>: ತಾಲ್ಲೂಕಿನ ವೈದ್ಯನಾಥಪುರದ ಬಳಿಯಿರುವ ಆಲೂರು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶನಿವಾರ ಚಾಮುಂಡೇಶ್ವರಿ ಜಯಂತ್ಯುತ್ಸವ ಅದ್ದೂರಿಯಿಂದ ಜರುಗಿತು.</p>.<p>ಜಯಂತ್ಯುತ್ಸವದ ಅಂಗವಾಗಿ ಮುಂಜಾನೆಯಿಂದಲೇ ದೇವಿಯ ವಿಗ್ರಹಕ್ಕೆ ಅಭಿಷೇಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆದವು. ದೇವಸ್ಥಾನ ಗರ್ಭಗುಡಿ, ದೇವಿಯವರ ವಿಗ್ರಹ ಹಾಗೂ ಪ್ರಾoಗಣಕ್ಕೆ ಹೂವಿನಿಂದ ಅಲಂಕರಿಸಲಾಗಿತ್ತು, ಪ್ರಧಾನ ಅರ್ಚಕ ಗಿರೀಶ್ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.</p>.<p>ನಂತರ ಮಧ್ಯಾಹ್ನ 1ರಿಂದ ದೇವಸ್ಥಾನದ ಆವರಣದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಗ್ರಾಮದ, ಮದ್ದೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಜನರು ದೇವಿಯ ದರ್ಶನ ಪಡೆದರು.</p>.<p>ಗ್ರಾಮದ ಮುಖಂಡ ಉದಯ್ ಶಂಕರ್ ಮಾತನಾಡಿ, ‘ಪ್ರತಿ ವರ್ಷವೂ ದೇವಸ್ಥಾನದಲ್ಲಿ ಅಮ್ಮನವರ ಜಯಂತ್ಯುತ್ಸವದ ಅಂಗವಾಗಿ ಹಲವು ಪೂಜಾ ಕಾರ್ಯಕ್ರಮಗಳು, ಅನ್ನಸಂತರ್ಪಣೆಯನ್ನು ಗ್ರಾಮದ ಹಿರಿಯರು, ಮುಖಂಡರು, ಯುವಕರು ಸೇರಿದಂತೆ ಎಲ್ಲಾ ಗ್ರಾಮಸ್ಥರ ಸಹಕಾರದಿಂದ ನಡೆಸಿಕೊಂಡು ಬರುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು</strong>: ತಾಲ್ಲೂಕಿನ ವೈದ್ಯನಾಥಪುರದ ಬಳಿಯಿರುವ ಆಲೂರು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶನಿವಾರ ಚಾಮುಂಡೇಶ್ವರಿ ಜಯಂತ್ಯುತ್ಸವ ಅದ್ದೂರಿಯಿಂದ ಜರುಗಿತು.</p>.<p>ಜಯಂತ್ಯುತ್ಸವದ ಅಂಗವಾಗಿ ಮುಂಜಾನೆಯಿಂದಲೇ ದೇವಿಯ ವಿಗ್ರಹಕ್ಕೆ ಅಭಿಷೇಕ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮಗಳು ನಡೆದವು. ದೇವಸ್ಥಾನ ಗರ್ಭಗುಡಿ, ದೇವಿಯವರ ವಿಗ್ರಹ ಹಾಗೂ ಪ್ರಾoಗಣಕ್ಕೆ ಹೂವಿನಿಂದ ಅಲಂಕರಿಸಲಾಗಿತ್ತು, ಪ್ರಧಾನ ಅರ್ಚಕ ಗಿರೀಶ್ ಪೂಜಾ ಕಾರ್ಯಕ್ರಮಗಳ ನೇತೃತ್ವ ವಹಿಸಿದ್ದರು.</p>.<p>ನಂತರ ಮಧ್ಯಾಹ್ನ 1ರಿಂದ ದೇವಸ್ಥಾನದ ಆವರಣದಲ್ಲಿ ಅನ್ನಸಂತರ್ಪಣೆ ಕಾರ್ಯಕ್ರಮ ನಡೆಯಿತು. ಗ್ರಾಮದ, ಮದ್ದೂರು ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಸಾವಿರಾರು ಜನರು ದೇವಿಯ ದರ್ಶನ ಪಡೆದರು.</p>.<p>ಗ್ರಾಮದ ಮುಖಂಡ ಉದಯ್ ಶಂಕರ್ ಮಾತನಾಡಿ, ‘ಪ್ರತಿ ವರ್ಷವೂ ದೇವಸ್ಥಾನದಲ್ಲಿ ಅಮ್ಮನವರ ಜಯಂತ್ಯುತ್ಸವದ ಅಂಗವಾಗಿ ಹಲವು ಪೂಜಾ ಕಾರ್ಯಕ್ರಮಗಳು, ಅನ್ನಸಂತರ್ಪಣೆಯನ್ನು ಗ್ರಾಮದ ಹಿರಿಯರು, ಮುಖಂಡರು, ಯುವಕರು ಸೇರಿದಂತೆ ಎಲ್ಲಾ ಗ್ರಾಮಸ್ಥರ ಸಹಕಾರದಿಂದ ನಡೆಸಿಕೊಂಡು ಬರುತ್ತಿದ್ದೇವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>