<p><strong>ಕಿಕ್ಕೇರಿ:</strong> ಸಮೀಪದ ಹರಿಯಾಲದಮ್ಮ ಗುಡಿ ಸಮೀಪ ಕುಂದೂರು ಗ್ರಾಮದ ಬಳಿ ಬೈಕ್ ಸವಾರರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಕಿಕ್ಕೇರಿ ಪೊಲೀಸರು ಬಂಧಿಸಿದ್ದಾರೆ.</p>.<p>ದೊಡ್ಡಸೋಮನಹಳ್ಳಿ ಗ್ರಾಮದ ಕುಮಾರ್ ಹಾಗೂ ಈತನ ಭಾವಮೈದ ಬೋರಲಿಂಗಯ್ಯ ಹಲ್ಲೆಗೊಳಗಾದವರು. ಸಮೀಪದ ಅಣೆಚಾಕನಹಳ್ಳಿ ಗ್ರಾಮದ ಸುದೀಪ, ಗಂಗನಹಳ್ಳಿ ಗ್ರಾಮದ ನಾಗರಾಜು, ಕುಂದೂರು ಗ್ರಾಮದ ಲಕ್ಷ್ಮಣ ಹಲ್ಲೆ ಮಾಡಿದವರು. ಮೂವರು ಸ್ನೇಹಿತರಾಗಿದ್ದಾರೆ.</p>.<p>ವಾರದ ಹಿಂದೆ ಕುಮಾರ್ ಹಾಗೂ ಬೋರಲಿಂಗಯ್ಯ ಅವರಿಗೆ ಸಂಬಂಧಿ ನಂದೀಶ ಹರಿಯಾಲದಮ್ಮ ಗುಡಿ ಬಳಿ ಬರಲು ತಿಳಿಸಿದ್ದು, ರಾತ್ರಿ ವೇಳೆ ಬೈಕ್ನಲ್ಲಿ ದೊಡ್ಡಸೋಮನಹಳ್ಳಿ ಗ್ರಾಮದಿಂದ ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯದ ಕುಂದೂರು ರಸ್ತೆ ಬಳಿ ಮದ್ಯಪಾನ ಮಾಡುತ್ತಿದ್ದ ಮೂವರು ವ್ಯಕ್ತಿಗಳು ಬೈಕ್ ಸವಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.</p>.<p>ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇನ್ಸ್ಪೆಕ್ಟರ್ ರೇವತಿ ಅವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿ ವಿನೋದ್, ಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ:</strong> ಸಮೀಪದ ಹರಿಯಾಲದಮ್ಮ ಗುಡಿ ಸಮೀಪ ಕುಂದೂರು ಗ್ರಾಮದ ಬಳಿ ಬೈಕ್ ಸವಾರರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳನ್ನು ಕಿಕ್ಕೇರಿ ಪೊಲೀಸರು ಬಂಧಿಸಿದ್ದಾರೆ.</p>.<p>ದೊಡ್ಡಸೋಮನಹಳ್ಳಿ ಗ್ರಾಮದ ಕುಮಾರ್ ಹಾಗೂ ಈತನ ಭಾವಮೈದ ಬೋರಲಿಂಗಯ್ಯ ಹಲ್ಲೆಗೊಳಗಾದವರು. ಸಮೀಪದ ಅಣೆಚಾಕನಹಳ್ಳಿ ಗ್ರಾಮದ ಸುದೀಪ, ಗಂಗನಹಳ್ಳಿ ಗ್ರಾಮದ ನಾಗರಾಜು, ಕುಂದೂರು ಗ್ರಾಮದ ಲಕ್ಷ್ಮಣ ಹಲ್ಲೆ ಮಾಡಿದವರು. ಮೂವರು ಸ್ನೇಹಿತರಾಗಿದ್ದಾರೆ.</p>.<p>ವಾರದ ಹಿಂದೆ ಕುಮಾರ್ ಹಾಗೂ ಬೋರಲಿಂಗಯ್ಯ ಅವರಿಗೆ ಸಂಬಂಧಿ ನಂದೀಶ ಹರಿಯಾಲದಮ್ಮ ಗುಡಿ ಬಳಿ ಬರಲು ತಿಳಿಸಿದ್ದು, ರಾತ್ರಿ ವೇಳೆ ಬೈಕ್ನಲ್ಲಿ ದೊಡ್ಡಸೋಮನಹಳ್ಳಿ ಗ್ರಾಮದಿಂದ ತೆರಳುತ್ತಿದ್ದರು. ಈ ವೇಳೆ ಮಾರ್ಗಮಧ್ಯದ ಕುಂದೂರು ರಸ್ತೆ ಬಳಿ ಮದ್ಯಪಾನ ಮಾಡುತ್ತಿದ್ದ ಮೂವರು ವ್ಯಕ್ತಿಗಳು ಬೈಕ್ ಸವಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.</p>.<p>ಕಿಕ್ಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇನ್ಸ್ಪೆಕ್ಟರ್ ರೇವತಿ ಅವರು ಆರೋಪಿಗಳನ್ನು ಬೆಂಗಳೂರಿನಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಸಿಬ್ಬಂದಿ ವಿನೋದ್, ಕುಮಾರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>