<p><strong>ಶ್ರೀರಂಗಪಟ್ಟಣ</strong>: ಕೆಆರ್ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಒಂದು ಲಕ್ಷ ಕ್ಯುಸೆಕ್'ಗೂ ಹೆಚ್ಚು ನೀರು ಹರಿಸುತ್ತಿದ್ದು, ಶ್ರೀರಂಗಪಟ್ಟಣ ಸುತ್ತಮುತ್ತ ನದಿ ತೀರದ ದೇವಾಲಯ, ರಸ್ತೆಗಳು ಜಲಾವೃತವಾಗಿವೆ.</p><p>ಪಟ್ಟಣ ಸಮೀಪದ ಗಂಜಾಂನ ಪ್ರಸಿದ್ಧ ನಿಮಿಷಾಂಬ ದೇವಾಲಯದ ಮೆಟ್ಟಿಲುಗಳು ಮುಳುಗಡೆಯಾಗಿವೆ. ದೇವಾಲಯದ ಮುಂದಿನ ರಸ್ತೆ ಕೂಡ ಜಲಾವೃತವಾಗಿದೆ.</p><p>ಪಟ್ಟಣದಿಂದ ಪಾಲಹಳ್ಳಿ ಮಾರ್ಗವಾಗಿ ಮೈಸೂರು, ಕೆಆರ್ಎಸ್, ರಂಗನತಿಟ್ಟು ಪಕ್ಷಿಧಾಮಕ್ಕೆ ಸಂಪರ್ಕ ಕಲ್ಪಿಸುವ ಪಶ್ಚಿಮ ವಾಹಿನಿ ಬಳಿಯ ರೈಲ್ವೆ ಸೇತುವೆಯ ಕೆಳಗಿನ ರಸ್ತೆಯಲ್ಲಿ ಎರಡು ಅಡಿಗಳಷ್ಟು ನೀರು ಹರಿಯುತ್ತಿದೆ.</p>.<p>ಪಟ್ಟಣ ಸಮೀಪದ ದೊಡ್ಡ ಗೋಸಾಯಿಘಾಟ್ ಬಳಿ ಕಾಶಿ ವಿಶ್ವನಾಥ, ಪಾಂಡುರಂಗ, ಆಂಜನೇಯಸ್ವಾಮಿ ದೇವಾಲಯಗಳು ಭಾಗಶಃ ಮುಳುಗಿವೆ. ಚಿಕ್ಕ ಗೋಸಾಯಿಘಾಟ್ ಬಳಿಯ ವಿಶ್ವನಾಥ ದೇವಾಲಯದ ಗರ್ಭಗುಡಿಯಲ್ಲಿ ಮೂರು ಅಡಿಯಷ್ಟು ನೀರು ನಿಂತಿದೆ.</p><p>ಪಟ್ಟಣದ ಕಾವೇರಿ ಪುರ ಬಡಾವಣೆಯಲ್ಲಿ ನದಿ ಅಂಚಿನ ಶನೇಶ್ವರ ದೇವಾಲಯ ಮತ್ತು ಕೆಲವು ಮನೆಗಳಿಗೆ ನೀರು ನುಗ್ಗಿದೆ. ಕಾವೇರಿ ಸಂಗಮದ ಬಳಿ ಬಟ್ಟೆ ಬದಲಿಸುವ ಮನೆಗಳು ನೀರಿನಲ್ಲಿ ಮುಳುಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ಕೆಆರ್ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಒಂದು ಲಕ್ಷ ಕ್ಯುಸೆಕ್'ಗೂ ಹೆಚ್ಚು ನೀರು ಹರಿಸುತ್ತಿದ್ದು, ಶ್ರೀರಂಗಪಟ್ಟಣ ಸುತ್ತಮುತ್ತ ನದಿ ತೀರದ ದೇವಾಲಯ, ರಸ್ತೆಗಳು ಜಲಾವೃತವಾಗಿವೆ.</p><p>ಪಟ್ಟಣ ಸಮೀಪದ ಗಂಜಾಂನ ಪ್ರಸಿದ್ಧ ನಿಮಿಷಾಂಬ ದೇವಾಲಯದ ಮೆಟ್ಟಿಲುಗಳು ಮುಳುಗಡೆಯಾಗಿವೆ. ದೇವಾಲಯದ ಮುಂದಿನ ರಸ್ತೆ ಕೂಡ ಜಲಾವೃತವಾಗಿದೆ.</p><p>ಪಟ್ಟಣದಿಂದ ಪಾಲಹಳ್ಳಿ ಮಾರ್ಗವಾಗಿ ಮೈಸೂರು, ಕೆಆರ್ಎಸ್, ರಂಗನತಿಟ್ಟು ಪಕ್ಷಿಧಾಮಕ್ಕೆ ಸಂಪರ್ಕ ಕಲ್ಪಿಸುವ ಪಶ್ಚಿಮ ವಾಹಿನಿ ಬಳಿಯ ರೈಲ್ವೆ ಸೇತುವೆಯ ಕೆಳಗಿನ ರಸ್ತೆಯಲ್ಲಿ ಎರಡು ಅಡಿಗಳಷ್ಟು ನೀರು ಹರಿಯುತ್ತಿದೆ.</p>.<p>ಪಟ್ಟಣ ಸಮೀಪದ ದೊಡ್ಡ ಗೋಸಾಯಿಘಾಟ್ ಬಳಿ ಕಾಶಿ ವಿಶ್ವನಾಥ, ಪಾಂಡುರಂಗ, ಆಂಜನೇಯಸ್ವಾಮಿ ದೇವಾಲಯಗಳು ಭಾಗಶಃ ಮುಳುಗಿವೆ. ಚಿಕ್ಕ ಗೋಸಾಯಿಘಾಟ್ ಬಳಿಯ ವಿಶ್ವನಾಥ ದೇವಾಲಯದ ಗರ್ಭಗುಡಿಯಲ್ಲಿ ಮೂರು ಅಡಿಯಷ್ಟು ನೀರು ನಿಂತಿದೆ.</p><p>ಪಟ್ಟಣದ ಕಾವೇರಿ ಪುರ ಬಡಾವಣೆಯಲ್ಲಿ ನದಿ ಅಂಚಿನ ಶನೇಶ್ವರ ದೇವಾಲಯ ಮತ್ತು ಕೆಲವು ಮನೆಗಳಿಗೆ ನೀರು ನುಗ್ಗಿದೆ. ಕಾವೇರಿ ಸಂಗಮದ ಬಳಿ ಬಟ್ಟೆ ಬದಲಿಸುವ ಮನೆಗಳು ನೀರಿನಲ್ಲಿ ಮುಳುಗಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>