<p><strong>ನಾಗಮಂಗಲ</strong>: ‘ಅಹಿಂಸಾತ್ಮಕ ಮಾರ್ಗದಲ್ಲಿ ಸ್ವಾತಂತ್ರ್ಯ ಹೋರಾಟ ಮಾಡುವ ಮೂಲಕ ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಗಾಂಧೀಜಿ. ಅವರ ತತ್ವ ಸಿದ್ಧಾಂತಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಬದುಕಬೇಕಿದೆ’ ಎಂದು ಮುಖ್ಯ ಶಿಕ್ಷಕ ಜಗನ್ನಾಥ್ ಹೇಳಿದರು.</p>.<p>ತಾಲ್ಲೂಕಿನ ಪಿ.ನೇರಲೆಕೆರೆ ಪ್ರೌಢಶಾಲೆಯಲ್ಲಿ ಮಂಗಳವಾರ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>‘ಗಾಂಧೀಜಿ ಅವರ ಪ್ರಾಣತ್ಯಾಗ ಮಾಡಿದ ದಿನವನ್ನು ಹುತಾತ್ಮರ ದಿನವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದ ಎಲ್ಲಾ ಹುತಾತ್ಮರನ್ನು ಸ್ಮರಿಸಿಕೊಳ್ಳುವ ದಿನವಾಗಿದೆ.ದೇಶ ಅಭಿವೃದ್ಧಿಯಾಗಬೇಕಾದರೆ ಗ್ರಾಮಗಳು ಅಭಿವೃದ್ಧಿಯಾಗಬೇಕು ಎಂದು ಕನಸು ಕಂಡಿದ್ದವರು. ಅವರ ಜೀವನವೇ ನಮ್ಮೆಲ್ಲರಿಗೂ ನಿಜವಾದ ಸಂದೇಶವಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಾದ ನೀವು ಗಾಂಧೀಜಿ ಅವರ ತತ್ವ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬದುಕಬೇಕು’ ಎಂದರು.</p>.<p>ನಂತರ ಶಿಕ್ಷಕ ರಮೇಶ್ ಮಾತನಾಡಿ, ‘ಗಾಂಧೀಜಿ ಅವರ ಜೀವನದ ಪ್ರಮುಖ ಅಂಶಗಳನ್ನು ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳು ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ನಮನ ಸಲ್ಲಿಸಿದರು.</p>.<p>ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶಹಾಬುದ್ದೀನ್ ಡಿ.ಬಣಕಾರ್, ವೆಂಕಟೇಶ್ ರಾವ್, ಶ್ರೀನಿವಾಸಯ್ಯ, ವಿನಯ್ ಕುಮಾರ್ ಮತ್ತು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ</strong>: ‘ಅಹಿಂಸಾತ್ಮಕ ಮಾರ್ಗದಲ್ಲಿ ಸ್ವಾತಂತ್ರ್ಯ ಹೋರಾಟ ಮಾಡುವ ಮೂಲಕ ಜಗತ್ತಿಗೆ ಸಾರಿದ ಮಹಾನ್ ವ್ಯಕ್ತಿ ಗಾಂಧೀಜಿ. ಅವರ ತತ್ವ ಸಿದ್ಧಾಂತಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಬದುಕಬೇಕಿದೆ’ ಎಂದು ಮುಖ್ಯ ಶಿಕ್ಷಕ ಜಗನ್ನಾಥ್ ಹೇಳಿದರು.</p>.<p>ತಾಲ್ಲೂಕಿನ ಪಿ.ನೇರಲೆಕೆರೆ ಪ್ರೌಢಶಾಲೆಯಲ್ಲಿ ಮಂಗಳವಾರ ಹುತಾತ್ಮರ ದಿನದ ಕಾರ್ಯಕ್ರಮದಲ್ಲಿ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದರು.</p>.<p>‘ಗಾಂಧೀಜಿ ಅವರ ಪ್ರಾಣತ್ಯಾಗ ಮಾಡಿದ ದಿನವನ್ನು ಹುತಾತ್ಮರ ದಿನವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಮಡಿದ ಎಲ್ಲಾ ಹುತಾತ್ಮರನ್ನು ಸ್ಮರಿಸಿಕೊಳ್ಳುವ ದಿನವಾಗಿದೆ.ದೇಶ ಅಭಿವೃದ್ಧಿಯಾಗಬೇಕಾದರೆ ಗ್ರಾಮಗಳು ಅಭಿವೃದ್ಧಿಯಾಗಬೇಕು ಎಂದು ಕನಸು ಕಂಡಿದ್ದವರು. ಅವರ ಜೀವನವೇ ನಮ್ಮೆಲ್ಲರಿಗೂ ನಿಜವಾದ ಸಂದೇಶವಾಗಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳಾದ ನೀವು ಗಾಂಧೀಜಿ ಅವರ ತತ್ವ ಮತ್ತು ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಪ್ರಜೆಗಳಾಗಿ ಬದುಕಬೇಕು’ ಎಂದರು.</p>.<p>ನಂತರ ಶಿಕ್ಷಕ ರಮೇಶ್ ಮಾತನಾಡಿ, ‘ಗಾಂಧೀಜಿ ಅವರ ಜೀವನದ ಪ್ರಮುಖ ಅಂಶಗಳನ್ನು ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು. ವಿದ್ಯಾರ್ಥಿಗಳು ಗಾಂಧೀಜಿ ಅವರ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ ನಮನ ಸಲ್ಲಿಸಿದರು.</p>.<p>ಕಾರ್ಯಕ್ರಮದಲ್ಲಿ ಶಿಕ್ಷಕರಾದ ಶಹಾಬುದ್ದೀನ್ ಡಿ.ಬಣಕಾರ್, ವೆಂಕಟೇಶ್ ರಾವ್, ಶ್ರೀನಿವಾಸಯ್ಯ, ವಿನಯ್ ಕುಮಾರ್ ಮತ್ತು ವಿದ್ಯಾರ್ಥಿಗಳು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>