<p><strong>ಮದ್ದೂರು:</strong> ‘ಜನನಿ ಹಾಗೂ ಜನ್ಮಭೂಮಿಗಳೆರಡು ಸ್ವರ್ಗಕ್ಕೆ ಸಮಾನವೆಂದು ಪುರಾಣದಲ್ಲೇ ಉಲ್ಲೇಖವಿದೆ. ತವರಿನ ಅಕ್ಕರೆಯಿಂದಾಗಿ ಸನ್ಮಾನಕ್ಕೆ ಒಪ್ಪಿದೆ’ ಎಂದು ಕೇಂದ್ರ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ತಿಳಿಸಿದರು.</p>.<p>ಪಟ್ಟಣದ ಪೂರ್ಣಪ್ರಜ್ಞ ಶಾಲೆಯ ಆವರಣದಲ್ಲಿ ಚುಂಚಶ್ರೀ ಗೆಳೆಯರ ಬಳಗ ಹಾಗೂ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದಿಂದ ನಡೆದ ಬಾಲಗಂಗಾಧರನಾಥ ಸ್ವಾಮೀಜಿ ಅವರ 79 ನೇ ಜಯಂತ್ಯುತ್ಸವ ಹಾಗೂ ‘ಬಿಜಿಎಸ್ ಸೇವಾರತ್ನ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಬಿಜಿಎಸ್ ಸ್ವಾಮೀಜಿ ಅವರು ಎಲ್ಲಾ ಸಮುದಾಯದವರ ಬಡವ, ರೈತರ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಕಾಯಕ ಮಾಡಿದವರು. ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾದ ನಂತರ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು’ ಎಂದರು.</p>.<p>‘ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಬೇಕೆಂದರೆ ಪ್ರಾಮಾಣಿಕತೆ, ಸೂಕ್ಷ್ಮತೆ ಬೇಕು. ಜನರ ವಿಶ್ವಾಸ ಗಳಿಸುವುದು ಮುಖ್ಯ’ ಎಂದರು.</p>.<p>ಶಾಸಕ ಉದಯ್ ಮಾತನಾಡಿದರು.</p>.<p>ಹಿರಿಯ ಸಾಹಿತಿ ಜಯಪ್ರಕಾಶ್ ಗೌಡ ಮಾತನಾಡಿ, ‘ರವಿಕಾಂತೇಗೌಡ ಅವರು ಎಸ್ಸೆಸ್ಸೆಲ್ಸಿವರೆಗೂ ಕನ್ನಡ ಮಾಧ್ಯಮದಲ್ಲಿ ಓದಿದವರು ಅವರ ತಂದೆ ಡಾ. ಬೆಸಗರಹಳ್ಳಿ ರಾಮಣ್ಣ ಅವರೊಂದಿಗೆ ನಾಟಕಗಳಲ್ಲಿ ಪಾತ್ರ ಮಾಡುತ್ತಿದ್ದರು.ಓದಿನ ಹಂತದಲ್ಲಿಯೇ ಕೈ ಬರಹದ ಪತ್ರಿಕೆ ಹೊರ ತರುತ್ತಿದ್ದರು’ ಎಂದು ನೆನಪಿಸಿಕೊಂಡರು.</p>.<p>ನಿವೃತ್ತ ಐಎಎಸ್ ಅಧಿಕಾರಿ ತಿಮ್ಮೇಗೌಡ, ನಿವೃತ್ತ ಪ್ರಾಂಶುಪಾಲ ಕೃಷ್ಣ, ಬಿಇಒ ಕಾಳೀರಯ್ಯ, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ದೇಶಹಳ್ಳಿ ಶಿವಪ್ಪ, ಮೋಹನ್ ಕುಮಾರ್, ಪೂರ್ಣಪ್ರಜ್ಞಾ ಶಾಲೆಯ ಅಧ್ಯಕ್ಷೆ ಕಸ್ತೂರಿ, ಕಾರ್ಯದರ್ಶಿ ಅನಂತೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ‘ಜನನಿ ಹಾಗೂ ಜನ್ಮಭೂಮಿಗಳೆರಡು ಸ್ವರ್ಗಕ್ಕೆ ಸಮಾನವೆಂದು ಪುರಾಣದಲ್ಲೇ ಉಲ್ಲೇಖವಿದೆ. ತವರಿನ ಅಕ್ಕರೆಯಿಂದಾಗಿ ಸನ್ಮಾನಕ್ಕೆ ಒಪ್ಪಿದೆ’ ಎಂದು ಕೇಂದ್ರ ವಲಯ ಐಜಿಪಿ ಬಿ.ಆರ್.ರವಿಕಾಂತೇಗೌಡ ತಿಳಿಸಿದರು.</p>.<p>ಪಟ್ಟಣದ ಪೂರ್ಣಪ್ರಜ್ಞ ಶಾಲೆಯ ಆವರಣದಲ್ಲಿ ಚುಂಚಶ್ರೀ ಗೆಳೆಯರ ಬಳಗ ಹಾಗೂ ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದಿಂದ ನಡೆದ ಬಾಲಗಂಗಾಧರನಾಥ ಸ್ವಾಮೀಜಿ ಅವರ 79 ನೇ ಜಯಂತ್ಯುತ್ಸವ ಹಾಗೂ ‘ಬಿಜಿಎಸ್ ಸೇವಾರತ್ನ’ ಪ್ರಶಸ್ತಿ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಬಿಜಿಎಸ್ ಸ್ವಾಮೀಜಿ ಅವರು ಎಲ್ಲಾ ಸಮುದಾಯದವರ ಬಡವ, ರೈತರ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವ ಕಾಯಕ ಮಾಡಿದವರು. ಯುವಜನತೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಆಯ್ಕೆಯಾದ ನಂತರ ಸಮಾಜದ ಋಣ ತೀರಿಸುವ ಕೆಲಸ ಮಾಡಬೇಕು’ ಎಂದರು.</p>.<p>‘ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಬೇಕೆಂದರೆ ಪ್ರಾಮಾಣಿಕತೆ, ಸೂಕ್ಷ್ಮತೆ ಬೇಕು. ಜನರ ವಿಶ್ವಾಸ ಗಳಿಸುವುದು ಮುಖ್ಯ’ ಎಂದರು.</p>.<p>ಶಾಸಕ ಉದಯ್ ಮಾತನಾಡಿದರು.</p>.<p>ಹಿರಿಯ ಸಾಹಿತಿ ಜಯಪ್ರಕಾಶ್ ಗೌಡ ಮಾತನಾಡಿ, ‘ರವಿಕಾಂತೇಗೌಡ ಅವರು ಎಸ್ಸೆಸ್ಸೆಲ್ಸಿವರೆಗೂ ಕನ್ನಡ ಮಾಧ್ಯಮದಲ್ಲಿ ಓದಿದವರು ಅವರ ತಂದೆ ಡಾ. ಬೆಸಗರಹಳ್ಳಿ ರಾಮಣ್ಣ ಅವರೊಂದಿಗೆ ನಾಟಕಗಳಲ್ಲಿ ಪಾತ್ರ ಮಾಡುತ್ತಿದ್ದರು.ಓದಿನ ಹಂತದಲ್ಲಿಯೇ ಕೈ ಬರಹದ ಪತ್ರಿಕೆ ಹೊರ ತರುತ್ತಿದ್ದರು’ ಎಂದು ನೆನಪಿಸಿಕೊಂಡರು.</p>.<p>ನಿವೃತ್ತ ಐಎಎಸ್ ಅಧಿಕಾರಿ ತಿಮ್ಮೇಗೌಡ, ನಿವೃತ್ತ ಪ್ರಾಂಶುಪಾಲ ಕೃಷ್ಣ, ಬಿಇಒ ಕಾಳೀರಯ್ಯ, ನಾಡಪ್ರಭು ಕೆಂಪೇಗೌಡ ಒಕ್ಕಲಿಗರ ಸಂಘದ ತಾಲ್ಲೂಕು ಅಧ್ಯಕ್ಷ ದೇಶಹಳ್ಳಿ ಶಿವಪ್ಪ, ಮೋಹನ್ ಕುಮಾರ್, ಪೂರ್ಣಪ್ರಜ್ಞಾ ಶಾಲೆಯ ಅಧ್ಯಕ್ಷೆ ಕಸ್ತೂರಿ, ಕಾರ್ಯದರ್ಶಿ ಅನಂತೇಗೌಡ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>