<p><strong>ಮಂಡ್ಯ</strong>: ಕಳೆದ ಲೋಕಸಭಾ ಚುನಾವಣೆ ವೇಳೆ ಏಟು– ಎದಿರೇಟುಗಳ ಮೂಲಕ ದೇಶದ ಗಮನ ಸೆಳೆದಿದ್ದ ಸಂಸದೆ ಸುಮಲತಾ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ನಡುವೆ ಈಗ ಸ್ನೇಹ ಸಾಧ್ಯವೇ?</p><p>–ಇಂಥದ್ದೊಂದು ಪ್ರಶ್ನೆ ಸದ್ಯ ಜಿಲ್ಲೆಯ ಜೆಡಿಎಸ್– ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರಲ್ಲಿ ಮೂಡಿದೆ.</p><p>ಅಂಬರೀಷ್ ಸಾವಿನ ವಿಷಯ ಸೇರಿದಂತೆ ವೈಯಕ್ತಿಕ ವಿಚಾರಗಳನ್ನೆಲ್ಲಾ ತೆಗೆದು ಕುಮಾರಸ್ವಾಮಿ ಅವರು ಸುಮಲತಾರನ್ನು ಜರಿದಿದ್ದರು. ಇದಕ್ಕೆ ಸುಮಲತಾ ಹಾಗೂ ಅವರ ಬೆಂಬಲಿಗರು ಕೂಡ ತಿರುಗೇಟು ನೀಡಿದ್ದರು. ಆದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪರಿಸ್ಥಿತಿ ಬದಲಾಗುತ್ತಿದ್ದು ಕುಮಾರಸ್ವಾಮಿ ಹಾಗೂ ಸುಮಲತಾರ ನಡುವೆ ಸ್ನೇಹಸೂತ್ರವೊಂದು ಸಿದ್ಧಗೊಂಡಿದೆ ಎಂದು ಮೂಲಗಳು ತಿಳಿಸಿವೆ.</p><p>ಇದಕ್ಕೆ ಮುನ್ನುಡಿ ಎಂಬಂತೆ ಕುಮಾರಸ್ವಾಮಿ ಅವರು ಈಚೆಗೆ ‘ಸಾಧ್ಯವಾದರೆ ಸುಮಲತಾ ಅವರನ್ನು ಭೇಟಿಯಾಗುವೆ’ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ. ಮುಂದಿನ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಎಚ್.ಡಿ.ದೇವೇಗೌಡರ ಕುಟುಂಬ ಸದಸ್ಯರೇ ಅಭ್ಯರ್ಥಿಯಾಗಲಿದ್ದು ಬಿಜೆಪಿ ಜೊತೆ ಇರುವ ಸಂಸದೆ ಸುಮಲತಾ ಅವರಿಗೆ ಸ್ನೇಹ ನಿವೇದನೆ ಮಾಡಲು ಸಜ್ಜಾಗಿರುವುದಾಗಿ ಜೆಡಿಎಸ್ ಮುಖಂಡರು ಹೇಳುತ್ತಾರೆ.</p><p>ಸುಮಲತಾ ಅವರು ತಾಂತ್ರಿಕವಾಗಿ ಪಕ್ಷೇತರ ಸಂಸದೆಯಾಗಿದ್ದರೂ ರಾಜಕೀಯವಾಗಿ ಬಿಜೆಪಿ ಜೊತೆಯಲ್ಲಿದ್ದಾರೆ. ಎನ್ಡಿಎ ಮೈತ್ರಿಕೂಟ ಸೇರಿರುವ ಎಚ್ಡಿಕೆ ಅವರೂ ಬಿಜೆಪಿಯ ಮಿತ್ರರಾಗಿದ್ದಾರೆ. ಹೀಗಾಗಿ ಇಬ್ಬರೂ ನಾಯಕರ ನಡುವೆ ಸ್ನೇಹದ ಸೇತುವೆ ಕಟ್ಟಲು ಜೆಡಿಎಸ್– ಬಿಜೆಪಿ ಎರಡೂ ಪಕ್ಷಗಳ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಎರಡೂ ಪಕ್ಷಗಳ ಮುಖಂಡರು ಹೇಳುತ್ತಾರೆ.</p><p>‘ರಾಜಕಾರಣದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳಲ್ಲ. ಕಳೆದ ಪರಿಸ್ಥಿತಿಯೇ ಬೇರೆ, ಈಗಿನ ಪರಿಸ್ಥಿತಿಯೇ ಬೇರೆ. ಸುಮಲತಾ ಅವರ ಸ್ನೇಹದ ಜೊತೆ ಸೌಹಾರ್ದಯುತವಾಗಿ ಚುನಾವಣೆ ಎದುರಿಸುವ ಪ್ರಯತ್ನಗಳು ನಡೆಯುತ್ತಿವೆ. ಈ ವಿಷಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರೂ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ’ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.</p><p><strong>ಸುಮಲತಾ ಒಪ್ಪುತ್ತಾರೆಯೇ?:</strong> ಜೆಡಿಎಸ್ ಮುಖಂಡರ ಸ್ನೇಹ ನಿವೇದನೆಗೆ ಸುಮಲತಾ ಒಪ್ಪುತ್ತಾರಾ ಎಂಬ ಪ್ರಶ್ನೆ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿದೆ. ಆದರೆ, ಅವರ ಬೆಂಬಲಿಗರು ಸ್ನೇಹದ ಪ್ರಸ್ತಾಪವನ್ನು ಸಾರಾಸಗಟಾಗಿ ತಿರಸ್ಕರಿಸುತ್ತಾರೆ.</p><p>‘ರಾಜಕೀಯ ಲಾಭ ಪಡೆಯಲು ಜೆಡಿಎಸ್ ಮುಖಂಡರು ಸ್ನೇಹದ ನಾಟಕವಾಡುತ್ತಿದ್ದಾರೆ. ಸುಮಲತಾ ಅವರು ಪಕ್ಷೇತರ ಸಂಸದೆಯಾಗಿದ್ದು ಬಿಜೆಪಿಗೆ ಬೆಂಬಲ ನೀಡಿದ್ದಾರಷ್ಟೇ. ಯಾವುದಾದರೊಂದು ಪಕ್ಷ ಅಥವಾ ಮತ್ತೆ ಪಕ್ಷೇತರವಾಗಿ ಸ್ಪರ್ಧಿಸುವುದು ಖಚಿತ’ ಎಂದು ಬೆಂಬಲಿಗ ಬೇಲೂರು ಸೋಮಶೇಖರ್ ತಿಳಿಸಿದರು.</p><p>ಪ್ರತಿಕ್ರಿಯೆಗೆ ಸುಮಲತಾ ಅವರು ಕರೆ ಸ್ವೀಕರಿಸಲಿಲ್ಲ.</p><p><strong>ಕಾದು ನೋಡುತ್ತಿರುವ ಕಾಂಗ್ರೆಸ್</strong></p><p>‘ದೇವೇಗೌಡರ ಕುಟುಂಬ ಸದಸ್ಯರು ಜೆಡಿಎಸ್– ಬಿಜೆಪಿ ಮೈತ್ರಿ ಅಭ್ಯರ್ಥಿಯಾದರೆ ಕಾಂಗ್ರೆಸ್ ಕಾರ್ಯಸೂಚಿ ಭಿನ್ನವಾಗಿರಲಿದೆ. ನಮಗೆ ಅಭ್ಯರ್ಥಿಗಳ ಕೊರತೆ ಇಲ್ಲ. ಮೈತ್ರಿ ಅಭ್ಯರ್ಥಿ ಸಂಸದೆ ಸುಮಲತಾ ಅವರ ಸ್ಪರ್ಧೆ ವಿಚಾರವನ್ನು ಕಾದು ನೋಡಿ ನಾವು ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಸುಮಲತಾ ಅವರನ್ನು ಕಾಂಗ್ರೆಸ್ಗೆ ಕರೆತರುವ ಪ್ರಯತ್ನಗಳೂ ನಡೆಯುತ್ತಿವೆ’ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕಳೆದ ಲೋಕಸಭಾ ಚುನಾವಣೆ ವೇಳೆ ಏಟು– ಎದಿರೇಟುಗಳ ಮೂಲಕ ದೇಶದ ಗಮನ ಸೆಳೆದಿದ್ದ ಸಂಸದೆ ಸುಮಲತಾ ಹಾಗೂ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ನಡುವೆ ಈಗ ಸ್ನೇಹ ಸಾಧ್ಯವೇ?</p><p>–ಇಂಥದ್ದೊಂದು ಪ್ರಶ್ನೆ ಸದ್ಯ ಜಿಲ್ಲೆಯ ಜೆಡಿಎಸ್– ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರಲ್ಲಿ ಮೂಡಿದೆ.</p><p>ಅಂಬರೀಷ್ ಸಾವಿನ ವಿಷಯ ಸೇರಿದಂತೆ ವೈಯಕ್ತಿಕ ವಿಚಾರಗಳನ್ನೆಲ್ಲಾ ತೆಗೆದು ಕುಮಾರಸ್ವಾಮಿ ಅವರು ಸುಮಲತಾರನ್ನು ಜರಿದಿದ್ದರು. ಇದಕ್ಕೆ ಸುಮಲತಾ ಹಾಗೂ ಅವರ ಬೆಂಬಲಿಗರು ಕೂಡ ತಿರುಗೇಟು ನೀಡಿದ್ದರು. ಆದರೆ, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪರಿಸ್ಥಿತಿ ಬದಲಾಗುತ್ತಿದ್ದು ಕುಮಾರಸ್ವಾಮಿ ಹಾಗೂ ಸುಮಲತಾರ ನಡುವೆ ಸ್ನೇಹಸೂತ್ರವೊಂದು ಸಿದ್ಧಗೊಂಡಿದೆ ಎಂದು ಮೂಲಗಳು ತಿಳಿಸಿವೆ.</p><p>ಇದಕ್ಕೆ ಮುನ್ನುಡಿ ಎಂಬಂತೆ ಕುಮಾರಸ್ವಾಮಿ ಅವರು ಈಚೆಗೆ ‘ಸಾಧ್ಯವಾದರೆ ಸುಮಲತಾ ಅವರನ್ನು ಭೇಟಿಯಾಗುವೆ’ ಎಂದು ಹೇಳಿರುವುದು ಕುತೂಹಲ ಮೂಡಿಸಿದೆ. ಮುಂದಿನ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಎಚ್.ಡಿ.ದೇವೇಗೌಡರ ಕುಟುಂಬ ಸದಸ್ಯರೇ ಅಭ್ಯರ್ಥಿಯಾಗಲಿದ್ದು ಬಿಜೆಪಿ ಜೊತೆ ಇರುವ ಸಂಸದೆ ಸುಮಲತಾ ಅವರಿಗೆ ಸ್ನೇಹ ನಿವೇದನೆ ಮಾಡಲು ಸಜ್ಜಾಗಿರುವುದಾಗಿ ಜೆಡಿಎಸ್ ಮುಖಂಡರು ಹೇಳುತ್ತಾರೆ.</p><p>ಸುಮಲತಾ ಅವರು ತಾಂತ್ರಿಕವಾಗಿ ಪಕ್ಷೇತರ ಸಂಸದೆಯಾಗಿದ್ದರೂ ರಾಜಕೀಯವಾಗಿ ಬಿಜೆಪಿ ಜೊತೆಯಲ್ಲಿದ್ದಾರೆ. ಎನ್ಡಿಎ ಮೈತ್ರಿಕೂಟ ಸೇರಿರುವ ಎಚ್ಡಿಕೆ ಅವರೂ ಬಿಜೆಪಿಯ ಮಿತ್ರರಾಗಿದ್ದಾರೆ. ಹೀಗಾಗಿ ಇಬ್ಬರೂ ನಾಯಕರ ನಡುವೆ ಸ್ನೇಹದ ಸೇತುವೆ ಕಟ್ಟಲು ಜೆಡಿಎಸ್– ಬಿಜೆಪಿ ಎರಡೂ ಪಕ್ಷಗಳ ನಾಯಕರು ಪ್ರಯತ್ನಿಸುತ್ತಿದ್ದಾರೆ ಎಂದು ಎರಡೂ ಪಕ್ಷಗಳ ಮುಖಂಡರು ಹೇಳುತ್ತಾರೆ.</p><p>‘ರಾಜಕಾರಣದಲ್ಲಿ ಯಾರೂ ಮಿತ್ರರಲ್ಲ, ಯಾರೂ ಶತ್ರುಗಳಲ್ಲ. ಕಳೆದ ಪರಿಸ್ಥಿತಿಯೇ ಬೇರೆ, ಈಗಿನ ಪರಿಸ್ಥಿತಿಯೇ ಬೇರೆ. ಸುಮಲತಾ ಅವರ ಸ್ನೇಹದ ಜೊತೆ ಸೌಹಾರ್ದಯುತವಾಗಿ ಚುನಾವಣೆ ಎದುರಿಸುವ ಪ್ರಯತ್ನಗಳು ನಡೆಯುತ್ತಿವೆ. ಈ ವಿಷಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರೂ ಎಚ್ಚರಿಕೆಯ ಹೆಜ್ಜೆ ಇಡುತ್ತಿದ್ದಾರೆ’ ಎಂದು ಜೆಡಿಎಸ್ ಮುಖಂಡ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.</p><p><strong>ಸುಮಲತಾ ಒಪ್ಪುತ್ತಾರೆಯೇ?:</strong> ಜೆಡಿಎಸ್ ಮುಖಂಡರ ಸ್ನೇಹ ನಿವೇದನೆಗೆ ಸುಮಲತಾ ಒಪ್ಪುತ್ತಾರಾ ಎಂಬ ಪ್ರಶ್ನೆ ಎರಡೂ ಪಕ್ಷಗಳ ಕಾರ್ಯಕರ್ತರಲ್ಲಿದೆ. ಆದರೆ, ಅವರ ಬೆಂಬಲಿಗರು ಸ್ನೇಹದ ಪ್ರಸ್ತಾಪವನ್ನು ಸಾರಾಸಗಟಾಗಿ ತಿರಸ್ಕರಿಸುತ್ತಾರೆ.</p><p>‘ರಾಜಕೀಯ ಲಾಭ ಪಡೆಯಲು ಜೆಡಿಎಸ್ ಮುಖಂಡರು ಸ್ನೇಹದ ನಾಟಕವಾಡುತ್ತಿದ್ದಾರೆ. ಸುಮಲತಾ ಅವರು ಪಕ್ಷೇತರ ಸಂಸದೆಯಾಗಿದ್ದು ಬಿಜೆಪಿಗೆ ಬೆಂಬಲ ನೀಡಿದ್ದಾರಷ್ಟೇ. ಯಾವುದಾದರೊಂದು ಪಕ್ಷ ಅಥವಾ ಮತ್ತೆ ಪಕ್ಷೇತರವಾಗಿ ಸ್ಪರ್ಧಿಸುವುದು ಖಚಿತ’ ಎಂದು ಬೆಂಬಲಿಗ ಬೇಲೂರು ಸೋಮಶೇಖರ್ ತಿಳಿಸಿದರು.</p><p>ಪ್ರತಿಕ್ರಿಯೆಗೆ ಸುಮಲತಾ ಅವರು ಕರೆ ಸ್ವೀಕರಿಸಲಿಲ್ಲ.</p><p><strong>ಕಾದು ನೋಡುತ್ತಿರುವ ಕಾಂಗ್ರೆಸ್</strong></p><p>‘ದೇವೇಗೌಡರ ಕುಟುಂಬ ಸದಸ್ಯರು ಜೆಡಿಎಸ್– ಬಿಜೆಪಿ ಮೈತ್ರಿ ಅಭ್ಯರ್ಥಿಯಾದರೆ ಕಾಂಗ್ರೆಸ್ ಕಾರ್ಯಸೂಚಿ ಭಿನ್ನವಾಗಿರಲಿದೆ. ನಮಗೆ ಅಭ್ಯರ್ಥಿಗಳ ಕೊರತೆ ಇಲ್ಲ. ಮೈತ್ರಿ ಅಭ್ಯರ್ಥಿ ಸಂಸದೆ ಸುಮಲತಾ ಅವರ ಸ್ಪರ್ಧೆ ವಿಚಾರವನ್ನು ಕಾದು ನೋಡಿ ನಾವು ಅಭ್ಯರ್ಥಿ ಘೋಷಣೆ ಮಾಡುತ್ತೇವೆ. ಸುಮಲತಾ ಅವರನ್ನು ಕಾಂಗ್ರೆಸ್ಗೆ ಕರೆತರುವ ಪ್ರಯತ್ನಗಳೂ ನಡೆಯುತ್ತಿವೆ’ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>