<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ 70 ಸಾವಿರ ಕ್ಯುಸೆಕ್ಗೆ ಏರಿಕೆಯಾಗಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸುತ್ತಿರುವುದರಿಂದ ನದಿಯ ತಗ್ಗಿನಲ್ಲಿರುವ ಪ್ರದೇಶಗಳು ಜಲಾವೃತವಾಗಿವೆ.</p><p>ಅಣೆಕಟ್ಟೆಯ ತಗ್ಗಿನಲ್ಲಿರುವ ಬೃಂದಾವನದ ಸಂಗೀತ ಕಾರಂಜಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ನೀರಿನಲ್ಲಿ ಮುಳುಗಿದೆ. ಹಾಗಾಗಿ ಸಂಗೀತ ಕಾರಂಜಿ ಪ್ರದರ್ಶನ ಮತ್ತು ದೋಣಿ ವಿಹಾರವನ್ನು ಸ್ಥಗಿತಗೊಳಿಸಲಾಗಿದೆ. ಪ್ರವಾಸಿಗರು ಉದ್ಯಾನವನ ವೀಕ್ಷಿಸಲು ಮಾತ್ರ ಅವಕಾಶ ನೀಡಲಾಗಿದೆ.</p><p>‘ಜಲಾಶಯದಿಂದ 35 ಸಾವಿರ ಕ್ಯುಸೆಕ್ಗಿಂತ ಹೆಚ್ಚು ನೀರನ್ನು ನದಿಗೆ ಹರಿಸಿದ ಸಂದರ್ಭದಲ್ಲಿ ಸಂಗೀತ ಕಾರಂಜಿಯ ಸಂಪರ್ಕ ಸೇತುವೆ ಮುಳುಗಡೆಯಾಗುತ್ತದೆ’ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.</p><p>ರಂಗನತಿಟ್ಟು ಪಕ್ಷಿಧಾಮದ ಬಳಿ ನದಿಯ ನೀರಿನ ಮಟ್ಟ ಗಂಟೆ ಗಂಟೆಗೂ ಏರಿಕೆಯಾಗುತ್ತಿದೆ. ಪಾದಚಾರಿ ಮಾರ್ಗಗಳು ಜಲಾವೃತವಾಗಿದೆ. ದೋಣಿ ವಿಹಾರ ಕೇಂದ್ರ, ವೀಕ್ಷಣಾ ಗೋಪುರ ಗೋಪುರದ ಮಾರ್ಗಗಳಲ್ಲಿ ನೀರು ತುಂಬಿದೆ. ಹಾಗಾಗಿ ದೋಣಿ ವಿಹಾರ ಮಾತ್ರವಲ್ಲದೆ ಪಕ್ಷಿ ವೀಕ್ಷಣೆಗೂ ನಿರ್ಬಂಧ ವಿಧಿಸಿದ್ದು, ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p><p>ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್ಗಿಂತ ಹೆಚ್ಚು ನೀರು ಹರಿಸಿದರೆ ಪಕ್ಷಿಧಾಮದ ಗಿಡ ಮರಗಳಲ್ಲಿ, ಕೆಳಮಟ್ಟದಲ್ಲಿ ಗೂಡು ಕಟ್ಟಿರುವ ಪಕ್ಷಿಗಳಿಗೆ ಅಪಾಯ ಎದುರಾಗಲಿದೆ.</p><p>ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ:</p><p>ನದಿಯಲ್ಲಿ ಪ್ರವಾಹ ಪರಸ್ಥಿತಿ ಉಲ್ಬಣಿಸಿದರೆ ಅಗತ್ಯ ಇರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲು ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ತಿಳಿಸಿದ್ದಾರೆ.</p><p>ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ದಿನದ 24 ಗಂಟೆಯೂ ನಿಗಾ ವಹಿಸಲಿದ್ದಾರೆ. ಸಂಕಷ್ಟಕ್ಕೆ ಸಿಲುಕುವವರನ್ನು ತಕ್ಷಣ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ನದಿ ತೀರಕ್ಕೆ ಯಾರೂ ಹೋಗಬಾರದು ಎಂದು ಅವರು ಮನವಿ ಮಾಡಿದ್ದಾರೆ.</p>. <p><strong>‘1.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ’</strong></p><p>ಕೆಆರ್ಎಸ್ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ನಿಂದ ಒಂದೂವರೆ ಲಕ್ಷ ಕ್ಯುಸೆಕ್ವರೆಗೆ ನೀರು ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮ ಗುರುವಾರ ಸಂಜೆ ಪ್ರಕಟಣೆ ಹೊರಡಿಸಿದೆ.</p><p>ಪ್ರವಾಹದಿಂದ ನದಿ ತೀರದ ಕೃಷಿ ಜಮೀನು ಮತ್ತು ದೇವಾಲಯಗಳು ಮುಳುಗುವ ಸಂಭವವಿದೆ. ನದಿ ತೀರಕ್ಕೆ ಯಾರೂ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆ.</p><p>ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಪುರಸಭೆಯಿಂದ ನದಿಯಂಚಿನ ಜನ ವಸತಿ ಸ್ಥಳಗಳಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಲಾಗುತ್ತಿದೆ. ತಾಲ್ಲೂಕಿನ ಬೆಳಗೊಳ ಸಮೀಪದ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳು, ಕಾರೇಕುರ, ಪಟ್ಟಣದ ಪಶ್ಚಿಮವಾಹಿನಿ, ಸೋಪಾನಕಟ್ಟೆ, ಜೀಬಿ ಗೇಟ್, ಗಂಜಾಂ ಬಳಿಯ ನಿಮಿಷಾಂಬಾ ದೇವಾಲಯ, ದೊಡ್ಡ ಗೋಸಾಯಿಘಾಟ್, ಕಾವೇರಿ ಸಂಗಮ, ಮಹದೇವಪುರ, ದೊಡ್ಡಪಾಳ್ಯ, ಮರಳಾಗಾಲ, ಚಿಕ್ಕಪಾಳ್ಯದ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.</p><p><strong>ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವೇಶ ನಿರ್ಬಂಧ</strong></p><p>ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಹೆಚ್ಚಾಗಿದ್ದು, ಕೆ.ಆರ್.ಎಸ್. ಅಣೆಕಟ್ಟೆಯಿಂದ ಕಾವೇರಿ ನದಿಗೆ 50ರಿಂದ 80 ಸಾವಿರ ಕ್ಯುಸೆಕ್ ನೀರು ಬಿಟ್ಟಿದ್ದಾರೆ. ಪ್ರವಾಸಿಗರ ಹಿತದೃಷ್ಟಿಯಿಂದ ಜುಲೈ 25ರಿಂದ ಮುಂದಿನ ಆದೇಶದವರೆಗೆ ರಂಗನತಿಟ್ಟು ಪಕ್ಷಿಧಾಮಕ್ಕೆ ತಾತ್ಕಾಲಿಕವಾಗಿ ಪ್ರವೇಶ ಮತ್ತು ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣಬಸಪ್ಪ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಕೆಆರ್ಎಸ್ ಜಲಾಶಯಕ್ಕೆ ಹರಿದು ಬರುವ ನೀರಿನ ಪ್ರಮಾಣ 70 ಸಾವಿರ ಕ್ಯುಸೆಕ್ಗೆ ಏರಿಕೆಯಾಗಿದ್ದು, ಅಷ್ಟೇ ಪ್ರಮಾಣದ ನೀರನ್ನು ನದಿಗೆ ಹರಿಸುತ್ತಿರುವುದರಿಂದ ನದಿಯ ತಗ್ಗಿನಲ್ಲಿರುವ ಪ್ರದೇಶಗಳು ಜಲಾವೃತವಾಗಿವೆ.</p><p>ಅಣೆಕಟ್ಟೆಯ ತಗ್ಗಿನಲ್ಲಿರುವ ಬೃಂದಾವನದ ಸಂಗೀತ ಕಾರಂಜಿಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ನೀರಿನಲ್ಲಿ ಮುಳುಗಿದೆ. ಹಾಗಾಗಿ ಸಂಗೀತ ಕಾರಂಜಿ ಪ್ರದರ್ಶನ ಮತ್ತು ದೋಣಿ ವಿಹಾರವನ್ನು ಸ್ಥಗಿತಗೊಳಿಸಲಾಗಿದೆ. ಪ್ರವಾಸಿಗರು ಉದ್ಯಾನವನ ವೀಕ್ಷಿಸಲು ಮಾತ್ರ ಅವಕಾಶ ನೀಡಲಾಗಿದೆ.</p><p>‘ಜಲಾಶಯದಿಂದ 35 ಸಾವಿರ ಕ್ಯುಸೆಕ್ಗಿಂತ ಹೆಚ್ಚು ನೀರನ್ನು ನದಿಗೆ ಹರಿಸಿದ ಸಂದರ್ಭದಲ್ಲಿ ಸಂಗೀತ ಕಾರಂಜಿಯ ಸಂಪರ್ಕ ಸೇತುವೆ ಮುಳುಗಡೆಯಾಗುತ್ತದೆ’ ಎಂದು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.</p><p>ರಂಗನತಿಟ್ಟು ಪಕ್ಷಿಧಾಮದ ಬಳಿ ನದಿಯ ನೀರಿನ ಮಟ್ಟ ಗಂಟೆ ಗಂಟೆಗೂ ಏರಿಕೆಯಾಗುತ್ತಿದೆ. ಪಾದಚಾರಿ ಮಾರ್ಗಗಳು ಜಲಾವೃತವಾಗಿದೆ. ದೋಣಿ ವಿಹಾರ ಕೇಂದ್ರ, ವೀಕ್ಷಣಾ ಗೋಪುರ ಗೋಪುರದ ಮಾರ್ಗಗಳಲ್ಲಿ ನೀರು ತುಂಬಿದೆ. ಹಾಗಾಗಿ ದೋಣಿ ವಿಹಾರ ಮಾತ್ರವಲ್ಲದೆ ಪಕ್ಷಿ ವೀಕ್ಷಣೆಗೂ ನಿರ್ಬಂಧ ವಿಧಿಸಿದ್ದು, ಪಕ್ಷಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.</p><p>ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್ಗಿಂತ ಹೆಚ್ಚು ನೀರು ಹರಿಸಿದರೆ ಪಕ್ಷಿಧಾಮದ ಗಿಡ ಮರಗಳಲ್ಲಿ, ಕೆಳಮಟ್ಟದಲ್ಲಿ ಗೂಡು ಕಟ್ಟಿರುವ ಪಕ್ಷಿಗಳಿಗೆ ಅಪಾಯ ಎದುರಾಗಲಿದೆ.</p><p>ಕಾಳಜಿ ಕೇಂದ್ರ ತೆರೆಯಲು ಸಿದ್ಧತೆ:</p><p>ನದಿಯಲ್ಲಿ ಪ್ರವಾಹ ಪರಸ್ಥಿತಿ ಉಲ್ಬಣಿಸಿದರೆ ಅಗತ್ಯ ಇರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆಯಲು ತಾಲ್ಲೂಕು ಆಡಳಿತ ಸಿದ್ಧತೆ ಮಾಡಿಕೊಂಡಿದೆ ಎಂದು ತಹಶೀಲ್ದಾರ್ ಪರಶುರಾಮ ಸತ್ತಿಗೇರಿ ತಿಳಿಸಿದ್ದಾರೆ.</p><p>ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಸಿಬ್ಬಂದಿ ದಿನದ 24 ಗಂಟೆಯೂ ನಿಗಾ ವಹಿಸಲಿದ್ದಾರೆ. ಸಂಕಷ್ಟಕ್ಕೆ ಸಿಲುಕುವವರನ್ನು ತಕ್ಷಣ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬರುವವರೆಗೆ ನದಿ ತೀರಕ್ಕೆ ಯಾರೂ ಹೋಗಬಾರದು ಎಂದು ಅವರು ಮನವಿ ಮಾಡಿದ್ದಾರೆ.</p>. <p><strong>‘1.50 ಲಕ್ಷ ಕ್ಯುಸೆಕ್ ನೀರು ಬಿಡುಗಡೆ’</strong></p><p>ಕೆಆರ್ಎಸ್ ಜಲಾಶಯದಿಂದ ನದಿಗೆ ಒಂದು ಲಕ್ಷ ಕ್ಯುಸೆಕ್ನಿಂದ ಒಂದೂವರೆ ಲಕ್ಷ ಕ್ಯುಸೆಕ್ವರೆಗೆ ನೀರು ಬಿಡಲಾಗುವುದು ಎಂದು ಕಾವೇರಿ ನೀರಾವರಿ ನಿಗಮ ಗುರುವಾರ ಸಂಜೆ ಪ್ರಕಟಣೆ ಹೊರಡಿಸಿದೆ.</p><p>ಪ್ರವಾಹದಿಂದ ನದಿ ತೀರದ ಕೃಷಿ ಜಮೀನು ಮತ್ತು ದೇವಾಲಯಗಳು ಮುಳುಗುವ ಸಂಭವವಿದೆ. ನದಿ ತೀರಕ್ಕೆ ಯಾರೂ ಹೋಗದಂತೆ ಎಚ್ಚರಿಕೆ ನೀಡಲಾಗುತ್ತಿದೆ.</p><p>ಸ್ಥಳೀಯ ಗ್ರಾಮ ಪಂಚಾಯಿತಿ ಮತ್ತು ಪುರಸಭೆಯಿಂದ ನದಿಯಂಚಿನ ಜನ ವಸತಿ ಸ್ಥಳಗಳಲ್ಲಿ ಧ್ವನಿವರ್ಧಕದ ಮೂಲಕ ಪ್ರಚಾರ ಮಾಡಲಾಗುತ್ತಿದೆ. ತಾಲ್ಲೂಕಿನ ಬೆಳಗೊಳ ಸಮೀಪದ ಬಲಮುರಿ ಮತ್ತು ಎಡಮುರಿ ಪ್ರವಾಸಿ ತಾಣಗಳು, ಕಾರೇಕುರ, ಪಟ್ಟಣದ ಪಶ್ಚಿಮವಾಹಿನಿ, ಸೋಪಾನಕಟ್ಟೆ, ಜೀಬಿ ಗೇಟ್, ಗಂಜಾಂ ಬಳಿಯ ನಿಮಿಷಾಂಬಾ ದೇವಾಲಯ, ದೊಡ್ಡ ಗೋಸಾಯಿಘಾಟ್, ಕಾವೇರಿ ಸಂಗಮ, ಮಹದೇವಪುರ, ದೊಡ್ಡಪಾಳ್ಯ, ಮರಳಾಗಾಲ, ಚಿಕ್ಕಪಾಳ್ಯದ ಬಳಿ ಪೊಲೀಸರನ್ನು ನಿಯೋಜಿಸಲಾಗಿದೆ.</p><p><strong>ರಂಗನತಿಟ್ಟು ಪಕ್ಷಿಧಾಮಕ್ಕೆ ಪ್ರವೇಶ ನಿರ್ಬಂಧ</strong></p><p>ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ಮಳೆ ಹೆಚ್ಚಾಗಿದ್ದು, ಕೆ.ಆರ್.ಎಸ್. ಅಣೆಕಟ್ಟೆಯಿಂದ ಕಾವೇರಿ ನದಿಗೆ 50ರಿಂದ 80 ಸಾವಿರ ಕ್ಯುಸೆಕ್ ನೀರು ಬಿಟ್ಟಿದ್ದಾರೆ. ಪ್ರವಾಸಿಗರ ಹಿತದೃಷ್ಟಿಯಿಂದ ಜುಲೈ 25ರಿಂದ ಮುಂದಿನ ಆದೇಶದವರೆಗೆ ರಂಗನತಿಟ್ಟು ಪಕ್ಷಿಧಾಮಕ್ಕೆ ತಾತ್ಕಾಲಿಕವಾಗಿ ಪ್ರವೇಶ ಮತ್ತು ದೋಣಿ ವಿಹಾರ ಸ್ಥಗಿತಗೊಳಿಸಲಾಗಿದೆ ಎಂದು ಮೈಸೂರು ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶರಣಬಸಪ್ಪ ತಿಳಿಸಿದ್ದಾರೆ.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>