<p>ಶ್ರೀರಂಗಪಟ್ಟಣ: ತಾಲ್ಲೂಕಿನ ನೆಲಮನೆ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಬೆಂಕಿ ಆಕಸ್ಮಿಕದಿಂದಾಗಿ ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಹೋಗಿದೆ.</p>.<p>ನೆಲಮನೆ ಗ್ರಾಮದ ಎನ್.ಸಿ. ಕೃಷ್ಣೇಗೌಡ ಅವರಿಗೆ ಸೇರಿದ ಒಂದೂವರೆ ಎಕರೆ ಮತ್ತು ಲಕ್ಷ್ಮೀನರಸಿಂಹ ಅವರು ಒಂದೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಹೋಗಿದೆ. ಈ ಪೈಕಿ ಎನ್.ಸಿ. ಕೃಷ್ಣೇಗೌಡ ಅವರ ಕಬ್ಬು ಬೆಳೆ ಇನ್ನು ಎರಡು ತಿಂಗಳಲ್ಲಿ ಕಟಾವಿಗೆ ಬರುತ್ತಿತ್ತು ಎಂದು ಗ್ರಾ.ಪಂ. ಸದಸ್ಯ ಎನ್.ಸಿ. ಪ್ರಭಾಕರ್ ತಿಳಿಸಿದ್ದಾರೆ.</p>.<p>ರೈಲ್ವೆ ಹಳಿಯ ಪಕ್ಕದಲ್ಲಿರುವ ಕಬ್ಬು ಬೆಳೆ ಬೆಂಕಿ ಬಿದ್ದಿದ್ದು, ಬೆಂಕಿ ನಂದಿಸಲು ಆಸುಪಾಸಿನ ಜಮೀನುಗಳ ರೈತರು ವಿಫಲ ಯತ್ನ ನಡೆಸಿದರು. ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದು ತಿಳಿದು ಬಂದಿಲ್ಲ ಎಂದು ರೈತರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ತಾಲ್ಲೂಕಿನ ನೆಲಮನೆ ಗ್ರಾಮದ ಬಳಿ ಬುಧವಾರ ಮಧ್ಯಾಹ್ನ ಬೆಂಕಿ ಆಕಸ್ಮಿಕದಿಂದಾಗಿ ಮೂರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಬೆಳೆ ಸಂಪೂರ್ಣ ಸುಟ್ಟು ಹೋಗಿದೆ.</p>.<p>ನೆಲಮನೆ ಗ್ರಾಮದ ಎನ್.ಸಿ. ಕೃಷ್ಣೇಗೌಡ ಅವರಿಗೆ ಸೇರಿದ ಒಂದೂವರೆ ಎಕರೆ ಮತ್ತು ಲಕ್ಷ್ಮೀನರಸಿಂಹ ಅವರು ಒಂದೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಹೋಗಿದೆ. ಈ ಪೈಕಿ ಎನ್.ಸಿ. ಕೃಷ್ಣೇಗೌಡ ಅವರ ಕಬ್ಬು ಬೆಳೆ ಇನ್ನು ಎರಡು ತಿಂಗಳಲ್ಲಿ ಕಟಾವಿಗೆ ಬರುತ್ತಿತ್ತು ಎಂದು ಗ್ರಾ.ಪಂ. ಸದಸ್ಯ ಎನ್.ಸಿ. ಪ್ರಭಾಕರ್ ತಿಳಿಸಿದ್ದಾರೆ.</p>.<p>ರೈಲ್ವೆ ಹಳಿಯ ಪಕ್ಕದಲ್ಲಿರುವ ಕಬ್ಬು ಬೆಳೆ ಬೆಂಕಿ ಬಿದ್ದಿದ್ದು, ಬೆಂಕಿ ನಂದಿಸಲು ಆಸುಪಾಸಿನ ಜಮೀನುಗಳ ರೈತರು ವಿಫಲ ಯತ್ನ ನಡೆಸಿದರು. ಬೆಂಕಿ ಹೇಗೆ ಹೊತ್ತಿಕೊಂಡಿತು ಎಂಬುದು ತಿಳಿದು ಬಂದಿಲ್ಲ ಎಂದು ರೈತರು ಹೇಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>