ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ | ಗಣೇಶ ಮೂರ್ತಿ ಮೆರವಣಿಗೆ: ಇಬ್ಬರು ಯುವಕರಿಗೆ ಚಾಕು ಇರಿತ

Published : 21 ಸೆಪ್ಟೆಂಬರ್ 2024, 13:26 IST
Last Updated : 21 ಸೆಪ್ಟೆಂಬರ್ 2024, 13:26 IST
ಫಾಲೋ ಮಾಡಿ
Comments

ಮಂಡ್ಯ: ತಾಲ್ಲೂಕಿನ ಮಾಚಹಳ್ಳಿಯಲ್ಲಿ ಶುಕ್ರವಾರ ರಾತ್ರಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಇಬ್ಬರು ಯುವಕರಿಗೆ ಚಾಕು ಇರಿತವಾಗಿದ್ದು, ಗಾಯಗೊಂಡವರನ್ನು ಮಂಡ್ಯದ ಮಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಚಹಳ್ಳಿಯ ಸಚಿನ್‌ ಎಂ.ಸಿ. ಮತ್ತು ನಂಜುಂಡಸ್ವಾಮಿ ಗಾಯಗೊಂಡವರು. ಚಾಕು ಇರಿತ ಮತ್ತು ಕಲ್ಲಿನಿಂದ ಹಲ್ಲೆ ನಡೆಸಿರುವುದರಿಂದ ಕೈ, ತಲೆ, ಹೊಟ್ಟೆ ಮತ್ತು ಕಣ್ಣಿನ ಭಾಗಕ್ಕೆ ಗಾಯಗಳಾಗಿವೆ.

ಗಣೇಶ ಮೂರ್ತಿ ಮೆರವಣಿಗೆ ವೇಳೆ ನೃತ್ಯ ಮಾಡುತ್ತಿದ್ದ ಸಚ್ಚಿನ್‌ ಮತ್ತು ನಂಜುಂಡಸ್ವಾಮಿ ಅವರ ಮೇಲೆ ಏಕಾಏಕಿ ಯುವಕರ ಗುಂಪೊಂದು ದಾಳಿ ನಡೆಸಿ ಹಲ್ಲೆ ಮಾಡಿದೆ. ಇದಕ್ಕೆ ಹಳೆಯ ದ್ವೇಷ ಕಾರಣ ಎಂದು ದೂರಲಾಗಿದೆ.

ಮಾಚಹಳ್ಳಿಯ ಮಧು, ಚಿಕ್ಕ ಅಲಿಯಾಸ್‌ ಪ್ರಜ್ಜು, ರಾಜು, ದರ್ಶನ್‌, ಲೋಕೇಶ, ಯೋಗೇಶ, ಮಹದೇವಸ್ವಾಮಿ ಎಂಬುವರ ವಿರುದ್ಧ ಶಿವಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT