<p><strong>ಮಂಡ್ಯ</strong>: ‘ಬಿಜೆಪಿ ಮುಖಂಡ ಕೆ.ಸಿ.ನಾರಾಯಣಗೌಡ ಅವರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಸೇರ್ಪಡೆ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾರಾಯಣಗೌಡರು ನಮ್ಮ ಸ್ನೇಹಿತರಾಗಿದ್ದು, ಹಲವು ದಿನಗಳಿಂದಲೂ ಸಂಪರ್ಕದಲ್ಲಿದ್ದರು. ಕೆ.ಆರ್.ಪೇಟೆ ಭಾಗದ ಹಲವು ಮುಖಂಡರು, ಕಾರ್ಯಕರ್ತರೂ ಕಾಂಗ್ರೆಸ್ ಸೇರಲಿದ್ದಾರೆ’ ಎಂದರು.</p>.<p>‘ಬಿಜೆಪಿ ಟಿಕೆಟ್ ಸಿಗದ ಸಂಸದೆ ಸುಮಲತಾ ಅವರ ನಡೆ ಬಗ್ಗೆ ಗೊತ್ತಿಲ್ಲ. ಪಕ್ಷೇತರರಾಗಿ ಸ್ಪರ್ಧಿಸಿ ಎಂದು ಒತ್ತಾಯಿಸಿಲ್ಲ. ಅವರ ಹಾಗೂ ನಮ್ಮ ನಡುವೆ ವೈಯಕ್ತಿಕವಾಗಿ ಉತ್ತಮ ಸ್ನೇಹ ಸಂಬಂಧವಿದೆ. ರಾಜಕೀಯವಾಗಿ ಯಾವುದೇ ಚರ್ಚೆ ಮಾಡಿಲ್ಲ. ಅವರು ಕಾಂಗ್ರೆಸ್ ಬೆಂಬಲಿಸಿದರೆ ಸ್ವಾಗತಿಸುತ್ತೇವೆ’ ಎಂದರು.</p>.<p>‘ಎಚ್.ಡಿ.ಕುಮಾರಸ್ವಾಮಿ ಎಲ್ಲಿಗೇ ಹೋದರೂ ಅದೇ ತನ್ನ ಕರ್ಮಭೂಮಿ ಎನ್ನುತ್ತಾರೆ. ಎಚ್.ಡಿ.ದೇವೇಗೌಡರ ಮಗನೆಂಬ ಕಾರಣಕ್ಕೆ ಅವರ ಮೇಲೆ ಗೌರವವಿದೆ. 3 ಬಾರಿ ಮುಖ್ಯಮಂತ್ರಿ ಮಾಡಿದ ರಾಮನಗರವನ್ನು ಪ್ರಾಣ ಹೋದರೂ ಬಿಡುವುದಿಲ್ಲ ಎನ್ನುತ್ತಿದ್ದರು. ಈಗ ಮಂಡ್ಯಕ್ಕೆ ಬರುತ್ತಿರುವುದರಿಂದ ಅಲ್ಲಿನ ಜನ ವಿರೋಧಿಸುತ್ತಿದ್ದಾರೆ. ಯಾರೇ ಅಭ್ಯರ್ಥಿಯಾದರೂ ನಮಗೆ ತೊಂದರೆ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಬಿಜೆಪಿ ಮುಖಂಡ ಕೆ.ಸಿ.ನಾರಾಯಣಗೌಡ ಅವರು ಬೆಂಬಲಿಗರೊಂದಿಗೆ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಸೇರ್ಪಡೆ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು’ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾರಾಯಣಗೌಡರು ನಮ್ಮ ಸ್ನೇಹಿತರಾಗಿದ್ದು, ಹಲವು ದಿನಗಳಿಂದಲೂ ಸಂಪರ್ಕದಲ್ಲಿದ್ದರು. ಕೆ.ಆರ್.ಪೇಟೆ ಭಾಗದ ಹಲವು ಮುಖಂಡರು, ಕಾರ್ಯಕರ್ತರೂ ಕಾಂಗ್ರೆಸ್ ಸೇರಲಿದ್ದಾರೆ’ ಎಂದರು.</p>.<p>‘ಬಿಜೆಪಿ ಟಿಕೆಟ್ ಸಿಗದ ಸಂಸದೆ ಸುಮಲತಾ ಅವರ ನಡೆ ಬಗ್ಗೆ ಗೊತ್ತಿಲ್ಲ. ಪಕ್ಷೇತರರಾಗಿ ಸ್ಪರ್ಧಿಸಿ ಎಂದು ಒತ್ತಾಯಿಸಿಲ್ಲ. ಅವರ ಹಾಗೂ ನಮ್ಮ ನಡುವೆ ವೈಯಕ್ತಿಕವಾಗಿ ಉತ್ತಮ ಸ್ನೇಹ ಸಂಬಂಧವಿದೆ. ರಾಜಕೀಯವಾಗಿ ಯಾವುದೇ ಚರ್ಚೆ ಮಾಡಿಲ್ಲ. ಅವರು ಕಾಂಗ್ರೆಸ್ ಬೆಂಬಲಿಸಿದರೆ ಸ್ವಾಗತಿಸುತ್ತೇವೆ’ ಎಂದರು.</p>.<p>‘ಎಚ್.ಡಿ.ಕುಮಾರಸ್ವಾಮಿ ಎಲ್ಲಿಗೇ ಹೋದರೂ ಅದೇ ತನ್ನ ಕರ್ಮಭೂಮಿ ಎನ್ನುತ್ತಾರೆ. ಎಚ್.ಡಿ.ದೇವೇಗೌಡರ ಮಗನೆಂಬ ಕಾರಣಕ್ಕೆ ಅವರ ಮೇಲೆ ಗೌರವವಿದೆ. 3 ಬಾರಿ ಮುಖ್ಯಮಂತ್ರಿ ಮಾಡಿದ ರಾಮನಗರವನ್ನು ಪ್ರಾಣ ಹೋದರೂ ಬಿಡುವುದಿಲ್ಲ ಎನ್ನುತ್ತಿದ್ದರು. ಈಗ ಮಂಡ್ಯಕ್ಕೆ ಬರುತ್ತಿರುವುದರಿಂದ ಅಲ್ಲಿನ ಜನ ವಿರೋಧಿಸುತ್ತಿದ್ದಾರೆ. ಯಾರೇ ಅಭ್ಯರ್ಥಿಯಾದರೂ ನಮಗೆ ತೊಂದರೆ ಇಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>