<p><strong>ಮದ್ದೂರು:</strong> ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾ ಕಂಬಕ್ಕೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಹಾಗೂ ಮಗ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಬಳಿ ಸಂಭವಿಸಿದೆ.</p>.<p>ಬೆಂಗಳೂರಿನವರಾದ ದರ್ಶನ್ (21) ಹಾಗೂ ಅವರ ತಾಯಿ ಕಲಾ (40) ಮೃತರು. ಮಂಜುನಾಥ್ ಹಾಗೂ ಅವರ ಪತ್ನಿ ಮೇಘಾ ಅವರು ಗಾಯಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p><strong>ಘಟನೆಯ ವಿವರ: </strong>ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬೆಳಿಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪೂಜೆಗೆಂದು ತೆರಳಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮದ್ದೂರು ಪಟ್ಟಣದ ಬಳಿಯ ರುದ್ರಾಕ್ಷಿಪುರ ಬಳಿ ಶುಕ್ರವಾರ 3 ಘಂಟೆ ಸುಮಾರಿಗೆ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಕಾರಣ ಅಪಘಾತ ಸಂಭವಿಸಿದೆ.</p>.<p>ಮದ್ದೂರು ಪಟ್ಟಣದ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾ ಕಂಬಕ್ಕೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಾಯಿ ಹಾಗೂ ಮಗ ಮೃತಪಟ್ಟು, ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಬಳಿ ಸಂಭವಿಸಿದೆ.</p>.<p>ಬೆಂಗಳೂರಿನವರಾದ ದರ್ಶನ್ (21) ಹಾಗೂ ಅವರ ತಾಯಿ ಕಲಾ (40) ಮೃತರು. ಮಂಜುನಾಥ್ ಹಾಗೂ ಅವರ ಪತ್ನಿ ಮೇಘಾ ಅವರು ಗಾಯಗೊಂಡು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ.</p>.<p><strong>ಘಟನೆಯ ವಿವರ: </strong>ಬೆಂಗಳೂರಿನ ಒಂದೇ ಕುಟುಂಬದ ನಾಲ್ವರು ಶುಕ್ರವಾರ ಬೆಳಿಗ್ಗೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಪೂಜೆಗೆಂದು ತೆರಳಿ ವಾಪಸ್ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಮದ್ದೂರು ಪಟ್ಟಣದ ಬಳಿಯ ರುದ್ರಾಕ್ಷಿಪುರ ಬಳಿ ಶುಕ್ರವಾರ 3 ಘಂಟೆ ಸುಮಾರಿಗೆ ಬೆಂಗಳೂರು ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಕಾರಣ ಅಪಘಾತ ಸಂಭವಿಸಿದೆ.</p>.<p>ಮದ್ದೂರು ಪಟ್ಟಣದ ಸಂಚಾರ ವಿಭಾಗದ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>