<p><strong>ಹಲಗೂರು</strong>: ‘ಕೆಆರ್ಎಸ್ ಜಲಾಶಯದಿಂದ ಹೆಚ್ಚುವರಿಯಾಗಿ ನೀರು ಬಿಡುಗಡೆ ಮಾಡಿರುವ ಹಿನ್ನೆನಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು’ ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಸಲಹೆ ನೀಡಿದರು.</p>.<p>ಹಲಗೂರು ಸಮೀಪದ ಪ್ರಸಿದ್ದ ಪ್ರವಾಸಿ ತಾಣ ಮುತ್ತತ್ತಿಗೆ ಸೋಮವಾರ ಸಂಜೆ ಭೇಟಿ ನೀಡಿ, ಕಂದಾಯ ಇಲಾಖೆ ಮತ್ತು ಸ್ಥಳಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.</p>.<p>‘ಹಲವು ದಿನಗಳಿಂದ ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಗಳು ಯಾವುದೇ ಸಮಯದಲ್ಲಾದರೂ ತುಂಬಿ ಹರಿಯಬಹುದು. ಮುಂದಿನ ದಿನಗಳಲ್ಲಿ ಮಳೆ ಹೀಗೆ ಮುಂದುವರಿದರೆ ಮುತ್ತತ್ತಿಯಲ್ಲಿನ ನದಿ ಪಾತ್ರದಲ್ಲಿರುವ ಹಲವು ಮನೆಗಳಿಗೆ ತೊಂದರೆ ಸಂಭವಿಸಬಹುದಾಗಿದ್ದು, ಈ ಭಾಗದ ನಿವಾಸಿಗಳು ಸ್ಥಳಾಂತರ ಮಾಡಲು ಸಿದ್ದತೆ ಮಾಡಿಕೊಳ್ಳಬೇಕು. ಪ್ರವಾಸಿಗರು ಕಾವೇರಿ ನದಿಗೆ ಇಳಿಯುವುದು, ಫೋಟೊ ತೆಗೆಯುವುದು ಮುಂತಾದ ಪ್ರಕ್ರಿಯೆಗಳಿಗೆ ಕೈ ಹಾಕಿ ಜೀವಕ್ಕೆ ಅಪಾಯ ತಂದುಕೊಳ್ಳಬಾರದು’ ಎಂದು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.</p>.<p>‘ಮುತ್ತತ್ತಿ ಅಂಜನೇಯ ಸ್ವಾಮಿ ದೇವಾಲಯಕ್ಕೆ ಪ್ರತಿನಿತ್ಯ ಭಕ್ತರು ಆಗಮಿಸುತ್ತಿದ್ದು, ನದಿ ದಂಡೆಯಲ್ಲಿ ಪ್ರತಿ ದಿನವೂ ಹೋಮ್ ಗಾರ್ಡ್ ಸಿಬ್ಬಂದಿ ಸೇರಿದಂತೆ ಪೋಲಿಸ್ ಸಿಬ್ಬಂದಿ ಕಾವಲು ಇದ್ದಾರೆ. ಸಾರ್ವಜನಿಕರು ಮತ್ತು ಭಕ್ತರು ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಮುಂಜಾಗ್ರತಾ ಕ್ರಮವಾಗಿ ನದಿ ದಂಡೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೃಹತ್ ಸೂಚನಾ ಫಲಕ ಅಳವಡಿಸಲು ಕ್ರಮ ವಹಿಸಬೇಕು’ ಎಂದು ತಾಲ್ಲೂಕು ಆಡಳಿತಕ್ಕೆ ಸೂಚನೆ ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ತಹಶೀಲ್ದಾರ್ ಕೆ.ಎನ್.ಲೋಕೇಶ್, ಕಾವೇರಿ ನೀರಾವರಿ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ವಾಸುದೇವ, ಡಿವೈಎಸ್ಪಿ ಕೃಷ್ಣಪ್ಪ, ಬ್ಯಾಡರಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ, ರಾಜಸ್ವ ನಿರೀಕ್ಷಕ ಮಧುಸೂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ‘ಕೆಆರ್ಎಸ್ ಜಲಾಶಯದಿಂದ ಹೆಚ್ಚುವರಿಯಾಗಿ ನೀರು ಬಿಡುಗಡೆ ಮಾಡಿರುವ ಹಿನ್ನೆನಲೆಯಲ್ಲಿ ಕಾವೇರಿ ನದಿ ಪಾತ್ರದಲ್ಲಿ ವಾಸಿಸುತ್ತಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು’ ಎಂದು ಮಂಡ್ಯ ಜಿಲ್ಲಾಧಿಕಾರಿ ಕುಮಾರ ಸಲಹೆ ನೀಡಿದರು.</p>.<p>ಹಲಗೂರು ಸಮೀಪದ ಪ್ರಸಿದ್ದ ಪ್ರವಾಸಿ ತಾಣ ಮುತ್ತತ್ತಿಗೆ ಸೋಮವಾರ ಸಂಜೆ ಭೇಟಿ ನೀಡಿ, ಕಂದಾಯ ಇಲಾಖೆ ಮತ್ತು ಸ್ಥಳಿಯ ಅಧಿಕಾರಿಗಳಿಂದ ಮಾಹಿತಿ ಪಡೆದು ಅವರು ಮಾತನಾಡಿದರು.</p>.<p>‘ಹಲವು ದಿನಗಳಿಂದ ಕಾವೇರಿ ನದಿ ಪಾತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ನದಿಗಳು ಯಾವುದೇ ಸಮಯದಲ್ಲಾದರೂ ತುಂಬಿ ಹರಿಯಬಹುದು. ಮುಂದಿನ ದಿನಗಳಲ್ಲಿ ಮಳೆ ಹೀಗೆ ಮುಂದುವರಿದರೆ ಮುತ್ತತ್ತಿಯಲ್ಲಿನ ನದಿ ಪಾತ್ರದಲ್ಲಿರುವ ಹಲವು ಮನೆಗಳಿಗೆ ತೊಂದರೆ ಸಂಭವಿಸಬಹುದಾಗಿದ್ದು, ಈ ಭಾಗದ ನಿವಾಸಿಗಳು ಸ್ಥಳಾಂತರ ಮಾಡಲು ಸಿದ್ದತೆ ಮಾಡಿಕೊಳ್ಳಬೇಕು. ಪ್ರವಾಸಿಗರು ಕಾವೇರಿ ನದಿಗೆ ಇಳಿಯುವುದು, ಫೋಟೊ ತೆಗೆಯುವುದು ಮುಂತಾದ ಪ್ರಕ್ರಿಯೆಗಳಿಗೆ ಕೈ ಹಾಕಿ ಜೀವಕ್ಕೆ ಅಪಾಯ ತಂದುಕೊಳ್ಳಬಾರದು’ ಎಂದು ಸಾರ್ವಜನಿಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.</p>.<p>‘ಮುತ್ತತ್ತಿ ಅಂಜನೇಯ ಸ್ವಾಮಿ ದೇವಾಲಯಕ್ಕೆ ಪ್ರತಿನಿತ್ಯ ಭಕ್ತರು ಆಗಮಿಸುತ್ತಿದ್ದು, ನದಿ ದಂಡೆಯಲ್ಲಿ ಪ್ರತಿ ದಿನವೂ ಹೋಮ್ ಗಾರ್ಡ್ ಸಿಬ್ಬಂದಿ ಸೇರಿದಂತೆ ಪೋಲಿಸ್ ಸಿಬ್ಬಂದಿ ಕಾವಲು ಇದ್ದಾರೆ. ಸಾರ್ವಜನಿಕರು ಮತ್ತು ಭಕ್ತರು ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ ವಹಿಸಬೇಕು. ಮುಂಜಾಗ್ರತಾ ಕ್ರಮವಾಗಿ ನದಿ ದಂಡೆಯಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಬೃಹತ್ ಸೂಚನಾ ಫಲಕ ಅಳವಡಿಸಲು ಕ್ರಮ ವಹಿಸಬೇಕು’ ಎಂದು ತಾಲ್ಲೂಕು ಆಡಳಿತಕ್ಕೆ ಸೂಚನೆ ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್, ತಹಶೀಲ್ದಾರ್ ಕೆ.ಎನ್.ಲೋಕೇಶ್, ಕಾವೇರಿ ನೀರಾವರಿ ನಿಗಮದ ಕಾರ್ಯ ನಿರ್ವಾಹಕ ಎಂಜಿನಿಯರ್ ವಾಸುದೇವ, ಡಿವೈಎಸ್ಪಿ ಕೃಷ್ಣಪ್ಪ, ಬ್ಯಾಡರಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮಲ್ಲಿಕಾರ್ಜುನ, ರಾಜಸ್ವ ನಿರೀಕ್ಷಕ ಮಧುಸೂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>