<p><strong>ಪಾಂಡವಪುರ</strong>: ಬಿಇಒ ಕಚೇರಿಯ ದ್ವೀತಿಯ ದರ್ಜೆ ಸಹಾಯಕ ವೆಂಕಟೇಶ್ ನಿವೃತ್ತ ಶಿಕ್ಷಕ ಸುರೇಶ್ ಬಾಬು ಅವರ ಬಳಿ ಶುಕ್ರವಾರ ₹ 12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿತ್ತು.</p>.<p>ತಾಲ್ಲೂಕಿನ ಚಿನಕುರಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಸುರೇಶ್ ಬಾಬು 2022ರಲ್ಲಿ ನಿವೃತ್ತರಾಗಿದ್ದರು. ಒಂದೂವರೆ ವರ್ಷ ಕಳೆದರೂ ಸರ್ಕಾರದಿಂದ ದೊರೆಯಬೇಕಿದ್ದ ಸೌಲಭ್ಯ ಪಡೆಯಲು ಎರಡು ತಿಂಗಳಿನಿಂದ ಬಿಇಒ ಕಚೇರಿಗೆ ಅಲೆಯುತ್ತಿದ್ದರು.</p>.<p>‘ಎರಡು ತಿಂಗಳ ಹಿಂದೆಯೂ ₹ 30ಸಾವಿರವನ್ನು ಪೋನ್ ಪೇ ಮೂಲಕ ವರ್ಗಾಯಿಸಿದ್ದರು. ಆದರೂ ವೆಂಕಟೇಶ್ ₹ 12ಸಾವಿರ ಲಂಚಕ್ಕೆ ಆಗ್ರಹಿಸಿದ್ದರು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.</p>.<p>ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಗಂಣದ ಸಮೀಪದ ಟೀ ಸ್ಟಾಲ್ ಬಳಿ ಹಣ ಪಡೆಯುವಾಗ ವೆಂಕಟೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ಬಿಇಒ ಕಚೇರಿಯ ದ್ವೀತಿಯ ದರ್ಜೆ ಸಹಾಯಕ ವೆಂಕಟೇಶ್ ನಿವೃತ್ತ ಶಿಕ್ಷಕ ಸುರೇಶ್ ಬಾಬು ಅವರ ಬಳಿ ಶುಕ್ರವಾರ ₹ 12 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸ ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಸುನೀಲ್ ಕುಮಾರ್ ನೇತೃತ್ವದ ತಂಡ ದಾಳಿ ನಡೆಸಿತ್ತು.</p>.<p>ತಾಲ್ಲೂಕಿನ ಚಿನಕುರಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರಾಗಿದ್ದ ಸುರೇಶ್ ಬಾಬು 2022ರಲ್ಲಿ ನಿವೃತ್ತರಾಗಿದ್ದರು. ಒಂದೂವರೆ ವರ್ಷ ಕಳೆದರೂ ಸರ್ಕಾರದಿಂದ ದೊರೆಯಬೇಕಿದ್ದ ಸೌಲಭ್ಯ ಪಡೆಯಲು ಎರಡು ತಿಂಗಳಿನಿಂದ ಬಿಇಒ ಕಚೇರಿಗೆ ಅಲೆಯುತ್ತಿದ್ದರು.</p>.<p>‘ಎರಡು ತಿಂಗಳ ಹಿಂದೆಯೂ ₹ 30ಸಾವಿರವನ್ನು ಪೋನ್ ಪೇ ಮೂಲಕ ವರ್ಗಾಯಿಸಿದ್ದರು. ಆದರೂ ವೆಂಕಟೇಶ್ ₹ 12ಸಾವಿರ ಲಂಚಕ್ಕೆ ಆಗ್ರಹಿಸಿದ್ದರು’ ಎಂದು ಲೋಕಾಯುಕ್ತ ಪೊಲೀಸರು ತಿಳಿಸಿದರು.</p>.<p>ಪಟ್ಟಣದ ಟಿಎಪಿಸಿಎಂಎಸ್ ರೈತ ಸಭಾಗಂಣದ ಸಮೀಪದ ಟೀ ಸ್ಟಾಲ್ ಬಳಿ ಹಣ ಪಡೆಯುವಾಗ ವೆಂಕಟೇಶ್ ಅವರನ್ನು ಪೊಲೀಸರು ವಶಕ್ಕೆ ಪಡೆದರು. ಪ್ರಕರಣ ದಾಖಲಾಗಿದೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>