<p><strong>ಮಂಡ್ಯ:</strong> ತಮಿಳುನಾಡಿಗೆ ಪ್ರತಿದಿನ 8 ಸಾವಿರ ಕ್ಯುಸೆಕ್ ನೀರನ್ನು ಬಿಡಲು ತೀರ್ಮಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ನಗರದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೆಲಕಾಲ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>ಜೆಡಿಎಸ್ ಮುಖಂಡ ಕೆ.ಟಿ. ಶ್ರೀಕಂಠೇಗೌಡ ಮಾತನಾಡಿ, ‘ಕೆಆರ್ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ಅದನ್ನು ನಿಲ್ಲಿಸಬೇಕು. ಸರ್ವಪಕ್ಷ ಸಭೆಯಲ್ಲಿ 8 ಸಾವಿರ ಕ್ಯುಸೆಕ್ ನೀರು ಹರಿಸಲು ಒಪ್ಪಿಗೆ ಸೂಚಿಸಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸರ್ಕಾರ ಆದೇಶ ಪಾಲನೆ ಮಾಡಿ ನೀರು ಬಿಟ್ಟ ನಂತರ ಮೇಲ್ಮನವಿ ಸಲ್ಲಿಸಿ ಏನು ಮಾಡಲಿದೆ, ಸರ್ಕಾರದ ನಿಲುವಿನಲ್ಲಿ ವೈರುಧ್ಯ ಇದೆ. ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ತಮಿಳುನಾಡಿಗೆ ನಿರಂತರ ನೀರು ಹರಿಸಿದರೆ ಕೃಷ್ಣರಾಜಸಾಗರದಲ್ಲಿ ನೀರಿನ ಪ್ರಮಾಣ ಕುಸಿತ ಕಾಣುವ ಮೂಲಕ ಕುಡಿಯುವ ನೀರು ಮತ್ತು ಬೆಳೆಗಳಿಗೆ ನೀರು ಕೊಡಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>‘ತಮಿಳುನಾಡಿಗೆ ನೀರು ಬಿಟ್ಟ ಪರಿಣಾಮದಿಂದ ಈಗಾಗಲೇ ಕಳೆದ ಬಾರಿ ಬೆಳೆ ಬೆಳೆಯಲು ಸಾಧ್ಯವಾಗದೆ ರೈತರು ಸಂಕಷ್ಟದಲ್ಲಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಸಮೃದ್ಧವಾಗಿ ಬೆಳೆ ಬೆಳೆದರೆ ಸಂಕಷ್ಟದಿಂದ ಹೊರಬರಲು ಸಾಧ್ಯ ಆದರೆ ನೀರು ಬಿಡುವ ಸರ್ಕಾರದ ತೀರ್ಮಾನ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ. ಈ ಸರ್ಕಾರಕ್ಕೆ ರೈತರ ಹಿತ ಕಾಪಾಡುವ ಕಾಳಜಿ ಇಲ್ಲ, ಇಚ್ಛಾಶಕ್ತಿ ಕೊರತೆಯಿಂದ ರೈತರಿಗೆ ನಿರಂತರ ಅನ್ಯಾಯವಾಗುತ್ತಿದೆ. ಸರ್ವಸಪಕ್ಷಗಳ ಸಭೆಯಲ್ಲಿ ಕೈಗೊಂಡಿರುವ ನೀರು ಬಿಡುವ ತೀರ್ಮಾನ ಒಪ್ಪಲು ಸಾಧ್ಯವಿಲ್ಲ. ಇದು ರೈತರ ವಿರುದ್ಧವಾಗಿದೆ. ಕೂಡಲೇ ಸರ್ವಪಕ್ಷ ಸಭೆಯ ನಿರ್ಣಯ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಮ್ ಮಾತನಾಡಿ, ‘ಕಾವೇರಿ ನೀರನ್ನು ಇಲ್ಲಿ ಪ್ರತಿಭಟನೆ ಮಾಡುತ್ತಿರುವವರೇ ಕುಡಿಯುತ್ತಿಲ್ಲ. ಪ್ರತಿಯೊಬ್ಬ ರೈತರೂ ಬೀದಿಗಿಳಿದು ಹೋರಾಟ ಮಾಡಬೇಕು. ಇದಕ್ಕೆ ಕಾವೇರಿ ಕೊಳ್ಳದ ಜನರು ಬೆಂಬಲ ನೀಡಿ ಪ್ರತಿಭಟನೆ ನಡೆಸಬೇಕು. ಇಲ್ಲವಾದರೆ ಕಾವೇರಿ ಚಳವಳಿ ಯಶಸ್ವಿ ಕಾಣಲು ಸಾಧ್ಯವಿಲ್ಲ’ ಎಂದು ಕರೆ ನೀಡಿದರು.</p>.<p>‘ರಾಜ್ಯದ ಮೂರು ರಾಜಕೀಯ ಪಕ್ಷಗಳು ಕಾವೇರಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅವರ ಇಚ್ಛಾಶಕ್ತಿ ಕೊರತೆಯಿಂದ ರೈತರಿಗೆ ನಿರಂತರ ಅನ್ಯಾಯವಾಗುತ್ತಿದೆ. ನೀರು ಬಿಡುವ ನಿರ್ಣಯವನ್ನು ಒಪ್ಪುವುದಿಲ್ಲ, ನಮ್ಮ ಅಣೆಕಟ್ಟೆಯ ನೀರನ್ನು ತಮಿಳುನಾಡಿಗೆ ಬಿಟ್ಟರೆ ಕೃಷಿಗೆ ಮತ್ತು ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಕಾವೇರಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಸದನದಲ್ಲಿ ಚರ್ಚೆ ಮಾಡಬೇಕಾಗಿರುವುದು ಕಾವೇರಿ ಕೊಳ್ಳ ಭಾಗಗಳ ಜನಪ್ರತಿನಿಧಿಗಳ ಜವಾಬ್ದಾರಿ, ಈ ಬಗ್ಗೆ ಸಮಗ್ರ ಚರ್ಚೆ ನಡೆಸಿ ರೈತರ ಕಾಪಾಡಲು ಮುಂದಾಗಬೇಕು. ಕಾವೇರಿ ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಕೆ.ಬೋರಯ್ಯ, ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಶಿವಳ್ಳಿ ಚಂದ್ರಶೇಖರ್, ಎಚ್.ಡಿ. ದೇವೇಗೌಡ, ಎಸ್. ನಾರಾಯಣ್, ಬಸವರಾಜ್, ಸುಶೀಲಮ್ಮ, ವೀಣಾಂಬ, ಇಂದಿರಾ, ಮಂಜುಳಾ, ವನಜಾಕ್ಷಿ, ಬಿ. ಪುಟ್ಟಸ್ವಾಮಿ, ನಾಗೇಶ್, ಪ್ರಸಾದ್, ನಾರಾಯಣಸ್ವಾಮಿ, ಕೆಂಪೇಗೌಡ, ಎಚ್.ಸಿ.ಮಂಜುನಾಥ್, ಮಹಾಂತಪ್ಪ, ಬಸವೇಗೌಡ, ಎಂ.ಎಲ್. ತುಳಸೀಧರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ತಮಿಳುನಾಡಿಗೆ ಪ್ರತಿದಿನ 8 ಸಾವಿರ ಕ್ಯುಸೆಕ್ ನೀರನ್ನು ಬಿಡಲು ತೀರ್ಮಾನಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ವಿವಿಧ ಸಂಘಟನೆಗಳ ಕಾರ್ಯಕರ್ತರು ಸೋಮವಾರ ನಗರದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿ ಕೆಲಕಾಲ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.</p>.<p>ಜೆಡಿಎಸ್ ಮುಖಂಡ ಕೆ.ಟಿ. ಶ್ರೀಕಂಠೇಗೌಡ ಮಾತನಾಡಿ, ‘ಕೆಆರ್ಎಸ್ ಅಣೆಕಟ್ಟೆಯಿಂದ ತಮಿಳುನಾಡಿಗೆ ನೀರು ದೊಡ್ಡ ಪ್ರಮಾಣದಲ್ಲಿ ಹರಿಯುತ್ತಿದೆ. ಅದನ್ನು ನಿಲ್ಲಿಸಬೇಕು. ಸರ್ವಪಕ್ಷ ಸಭೆಯಲ್ಲಿ 8 ಸಾವಿರ ಕ್ಯುಸೆಕ್ ನೀರು ಹರಿಸಲು ಒಪ್ಪಿಗೆ ಸೂಚಿಸಿರುವುದು ಸರಿಯಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಸರ್ಕಾರ ಆದೇಶ ಪಾಲನೆ ಮಾಡಿ ನೀರು ಬಿಟ್ಟ ನಂತರ ಮೇಲ್ಮನವಿ ಸಲ್ಲಿಸಿ ಏನು ಮಾಡಲಿದೆ, ಸರ್ಕಾರದ ನಿಲುವಿನಲ್ಲಿ ವೈರುಧ್ಯ ಇದೆ. ಸರ್ಕಾರದ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ತಮಿಳುನಾಡಿಗೆ ನಿರಂತರ ನೀರು ಹರಿಸಿದರೆ ಕೃಷ್ಣರಾಜಸಾಗರದಲ್ಲಿ ನೀರಿನ ಪ್ರಮಾಣ ಕುಸಿತ ಕಾಣುವ ಮೂಲಕ ಕುಡಿಯುವ ನೀರು ಮತ್ತು ಬೆಳೆಗಳಿಗೆ ನೀರು ಕೊಡಲು ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದರು.</p>.<p>‘ತಮಿಳುನಾಡಿಗೆ ನೀರು ಬಿಟ್ಟ ಪರಿಣಾಮದಿಂದ ಈಗಾಗಲೇ ಕಳೆದ ಬಾರಿ ಬೆಳೆ ಬೆಳೆಯಲು ಸಾಧ್ಯವಾಗದೆ ರೈತರು ಸಂಕಷ್ಟದಲ್ಲಿದ್ದಾರೆ. ಮುಂದಿನ ಮೂರು ವರ್ಷಗಳ ಕಾಲ ಸಮೃದ್ಧವಾಗಿ ಬೆಳೆ ಬೆಳೆದರೆ ಸಂಕಷ್ಟದಿಂದ ಹೊರಬರಲು ಸಾಧ್ಯ ಆದರೆ ನೀರು ಬಿಡುವ ಸರ್ಕಾರದ ತೀರ್ಮಾನ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಲಿದೆ. ಈ ಸರ್ಕಾರಕ್ಕೆ ರೈತರ ಹಿತ ಕಾಪಾಡುವ ಕಾಳಜಿ ಇಲ್ಲ, ಇಚ್ಛಾಶಕ್ತಿ ಕೊರತೆಯಿಂದ ರೈತರಿಗೆ ನಿರಂತರ ಅನ್ಯಾಯವಾಗುತ್ತಿದೆ. ಸರ್ವಸಪಕ್ಷಗಳ ಸಭೆಯಲ್ಲಿ ಕೈಗೊಂಡಿರುವ ನೀರು ಬಿಡುವ ತೀರ್ಮಾನ ಒಪ್ಪಲು ಸಾಧ್ಯವಿಲ್ಲ. ಇದು ರೈತರ ವಿರುದ್ಧವಾಗಿದೆ. ಕೂಡಲೇ ಸರ್ವಪಕ್ಷ ಸಭೆಯ ನಿರ್ಣಯ ವಾಪಸ್ ಪಡೆಯಬೇಕು’ ಎಂದು ಆಗ್ರಹಿಸಿದರು.</p>.<p>ಜಿಲ್ಲಾ ರೈತ ಹಿತರಕ್ಷಣಾ ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಮ್ ಮಾತನಾಡಿ, ‘ಕಾವೇರಿ ನೀರನ್ನು ಇಲ್ಲಿ ಪ್ರತಿಭಟನೆ ಮಾಡುತ್ತಿರುವವರೇ ಕುಡಿಯುತ್ತಿಲ್ಲ. ಪ್ರತಿಯೊಬ್ಬ ರೈತರೂ ಬೀದಿಗಿಳಿದು ಹೋರಾಟ ಮಾಡಬೇಕು. ಇದಕ್ಕೆ ಕಾವೇರಿ ಕೊಳ್ಳದ ಜನರು ಬೆಂಬಲ ನೀಡಿ ಪ್ರತಿಭಟನೆ ನಡೆಸಬೇಕು. ಇಲ್ಲವಾದರೆ ಕಾವೇರಿ ಚಳವಳಿ ಯಶಸ್ವಿ ಕಾಣಲು ಸಾಧ್ಯವಿಲ್ಲ’ ಎಂದು ಕರೆ ನೀಡಿದರು.</p>.<p>‘ರಾಜ್ಯದ ಮೂರು ರಾಜಕೀಯ ಪಕ್ಷಗಳು ಕಾವೇರಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಅವರ ಇಚ್ಛಾಶಕ್ತಿ ಕೊರತೆಯಿಂದ ರೈತರಿಗೆ ನಿರಂತರ ಅನ್ಯಾಯವಾಗುತ್ತಿದೆ. ನೀರು ಬಿಡುವ ನಿರ್ಣಯವನ್ನು ಒಪ್ಪುವುದಿಲ್ಲ, ನಮ್ಮ ಅಣೆಕಟ್ಟೆಯ ನೀರನ್ನು ತಮಿಳುನಾಡಿಗೆ ಬಿಟ್ಟರೆ ಕೃಷಿಗೆ ಮತ್ತು ಕುಡಿಯುವ ನೀರಿಗಾಗಿ ಹಾಹಾಕಾರ ಎದುರಾಗುತ್ತದೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>‘ಕಾವೇರಿ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವುದು ಸರಿಯಲ್ಲ. ಸದನದಲ್ಲಿ ಚರ್ಚೆ ಮಾಡಬೇಕಾಗಿರುವುದು ಕಾವೇರಿ ಕೊಳ್ಳ ಭಾಗಗಳ ಜನಪ್ರತಿನಿಧಿಗಳ ಜವಾಬ್ದಾರಿ, ಈ ಬಗ್ಗೆ ಸಮಗ್ರ ಚರ್ಚೆ ನಡೆಸಿ ರೈತರ ಕಾಪಾಡಲು ಮುಂದಾಗಬೇಕು. ಕಾವೇರಿ ನೀರಿಗಾಗಿ ಹೋರಾಟ ಮಾಡಬೇಕಾಗಿರುವುದು ಪ್ರತಿಯೊಬ್ಬರ ಜವಾಬ್ದಾರಿ’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಕೆ.ಬೋರಯ್ಯ, ಇಂಡುವಾಳು ಚಂದ್ರಶೇಖರ್, ಮುದ್ದೇಗೌಡ, ಶಿವಳ್ಳಿ ಚಂದ್ರಶೇಖರ್, ಎಚ್.ಡಿ. ದೇವೇಗೌಡ, ಎಸ್. ನಾರಾಯಣ್, ಬಸವರಾಜ್, ಸುಶೀಲಮ್ಮ, ವೀಣಾಂಬ, ಇಂದಿರಾ, ಮಂಜುಳಾ, ವನಜಾಕ್ಷಿ, ಬಿ. ಪುಟ್ಟಸ್ವಾಮಿ, ನಾಗೇಶ್, ಪ್ರಸಾದ್, ನಾರಾಯಣಸ್ವಾಮಿ, ಕೆಂಪೇಗೌಡ, ಎಚ್.ಸಿ.ಮಂಜುನಾಥ್, ಮಹಾಂತಪ್ಪ, ಬಸವೇಗೌಡ, ಎಂ.ಎಲ್. ತುಳಸೀಧರ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>