ಮಂಡ್ಯ: ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡ್ ಬಳಗ ಹಾಗೂ ಇನ್ ಸೈಟ್ ಐಎಎಸ್ ಸಂಸ್ಥೆ ಸಹಭಾಗಿತ್ವದಲ್ಲಿ ಮಂಡ್ಯದಲ್ಲಿ ಗುರುವಾರ ‘ಗೈಡಿಂಗ್ ಫೋರ್ಸ್’ ಉಚಿತ ಕಾರ್ಯಗಾರ ನಡೆಯಿತು.
ಈ ಕಾರ್ಯಾಗಾರದಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್ ಎಲ್ ನಾಗರಾಜು ಹಾಗೂ ಇನ್ಸೈಟ್ ಐಎಎಸ್ ಸಂಸ್ಥೆಯ ಸಂಸ್ಥಾಪಕರು ಮತ್ತು ನಿರ್ದೇಶಕರಾದ ವಿನಯ್ ಕುಮಾರ್ ಜಿ ಬಿ ಅವರು ವಿಶೇಷ ಭಾಷಣಕಾರರಾಗಿ ಭಾಗವಹಿಸಿದ್ದರು.