ಪ್ರತಿ ಆಗಸ್ಟ್ ತಿಂಗಳಲ್ಲಿಯೂ ಮಳೆ ಬಿದ್ದು ಕಾವೇರಿ ನದಿ ಉಕ್ಕಿ ಹರಿಯುವುದರಿಂದ ಕೆಸರಕ್ಕಿ ಹಳ್ಳ ನೀರಿನಿಂದ ತುಂಬಿಕೊಳ್ಳುತ್ತಿದೆ. ಇದರಿಂದಾಗಿ ಮಳೆಗಾಲದಲ್ಲಿ ಜನರು ಸಮಸ್ಯೆ ಎದುರಿಸಬೇಕಿದೆ. ಜನಪ್ರತಿನಿಧಿಗಳು ಸಮಸ್ಯೆ ಅರಿತು ಕೆಸರಕ್ಕಿ ಹಳ್ಳಕ್ಕೆ ಎತ್ತರದ ಸೇತುವೆ ನಿರ್ಮಿಸಬೇಕು.
-ರಕ್ಷಿತ್ ಮುತ್ತತ್ತಿ ನಿವಾಸಿ.
ಕೆಸರಕ್ಕಿ ಹಳ್ಳದ ಸೇತುವೆ ಪರಿಸ್ಥಿತಿ ಕುರಿತು ಇಲಾಖೆ ವತಿಯಿಂದ ಸ್ಥಳ ಪರಿಶೀಲನೆ ನಡೆಸಲಾಗುವುದು ಅಗತ್ಯ ಕಂಡು ಬಂದಲ್ಲಿ ಸರ್ಕಾರಕ್ಕೆ ಪತ್ರ ಬರೆದು ಸೇತುವೆ ನಿರ್ಮಾಣಕ್ಕೆ ಕ್ರಮವಹಿಸಲಾಗುವುದು. ಮುತ್ತತ್ತಿ ಜನರಿಗೆ ಆತಂಕ ಬೇಡ.
-ಸೋಮಶೇಖರ್ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೋಪಯೋಗಿ ಇಲಾಖೆ.