<p><strong>ಪಾಂಡವಪುರ</strong>: ಕೆಆರ್ಎಸ್ ಅಣೆಕಟ್ಟೆಯಿಂದ 1ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಹರಿಯಬಿಟ್ಟಿರುವುದರಿಂದ ನದಿ ಪಾತ್ರದ ತಾಲ್ಲೂಕಿನ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನೀರು ನುಗ್ಗಿದ್ದು, ಗ್ರಾಮವು ಜಲಾವೃತಗೊಳ್ಳುವ ಭೀತಿ ಗ್ರಾಮಸ್ಥರಿಗೆ ಎದುರಾಗಿದೆ.</p>.<p>ಕಾವೇರಿ ಹೊಳೆಯ ದಡದ ಕೂಗಳತೆಯಲ್ಲಿರುವ ಎಣ್ಣೆಹೊಳೆ ಗ್ರಾಮದ ಮನೆಗಳ ಮಗ್ಗುಲಿಗೆ ನೀರು ಹರಿದು ಬಂದಿದೆ. ಮಕ್ಕಳು ಮಹಿಳೆಯರು ಭಯಭೀತರಾಗಿದ್ದಾರೆ. ಹೊಳೆ ನೀರು ಗ್ರಾಮದ ಕೆಲವು ಮನೆಗಳಿಗೆ, ಜಾನುವಾರು ಕೊಟ್ಟಿಗೆಗೆ, ಮೇವುಗಳ ಮೆದೆಗಳಿಗೆ ನುಗ್ಗಿದ್ದು, ರೋಗರುಜಿನಗಳು ಹರಡುವ ಭೀತಿ ಜನರನ್ನು ಕಾಡುತ್ತಿದೆ.</p>.<p>50 ಎಕರೆ ಬೆಳೆ ಮುಳುಗಡೆ: ಹೊಳೆ ಆಜುಬಾಜಿನಲ್ಲಿರುವ ರೈತರ ಸುಮಾರು 50 ಎಕರೆಯಷ್ಟು ಜಮೀನಿನ ಬೆಳೆಗಳು ಕೂಡ ಜಲಾವೃತಗೊಂಡಿದ್ದು, ರೈತರು ಸಂಕಷ್ಟದಲ್ಲಿದ್ದಾರೆ.</p>.<p>ತಹಶೀಲ್ದಾರ್ ಭೇಟಿ: ತಹಶೀಲ್ದಾರ್ ಎಸ್.ಸಂತೋಷ್ ಅವರು ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಗ್ರಾಮದ ಜನರಿಗೆ ಮುನ್ನೆಚ್ಚರಿಕೆ, ಸಲಹೆ ನೀಡಿದರು. ಗ್ರಾಮಕ್ಕೆ ಆಗಾಗ್ಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮವಹಿಸಬೇಕೆಂದು ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಹಾಗೂ ಪಿಡಿಓಗಳಿಗೆ ಸೂಚನೆ ನೀಡಿದರು.</p>.<p><strong>ತಡೆಗೋಡೆ ಪೂರ್ಣಗೊಳಿಸಲು ಒತ್ತಾಯ:</strong></p>.<p>ಹೊಳೆ ದಂಡೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಈ ಹಿಂದೆ ಸುಮಾರು ₹ 7ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿತ್ತಾದರೂ, ಪೂರ್ಣಗೊಂಡಿಲ್ಲವಾದ್ದರಿಂದ ಹೊಳೆ ನೀರು ಗ್ರಾಮಕ್ಕೆ ನುಗ್ಗುತ್ತಿದೆ. ಕೂಡಲೇ ತಡೆಗೋಡೆಯನ್ನು ಪೂರ್ಣಗೊಳಿಸಿಕೊಡಿ, ವ್ಯವಸ್ಥಿತವಾದ ವೈಜ್ಞಾನಿಕ ಚರಂಡಿ ನಿರ್ಮಾಣ ಮಾಡಿಕೊಡಬೇಕು. ಜಲಾವೃತಗೊಂಡಿರುವ ರೈತರ ಬೆಳೆಗಳಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ತಹಶೀಲ್ದಾರ್ ಸಂತೋಷ್ ಅವರನ್ನು ಒತ್ತಾಯಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲ್ಲೂಕು ಅಧ್ಯಕ್ಷ ಕೆನ್ನಾಳು ನಾಗರಾಜು, ಮುಖಂಡರಾದ ಕೃಷ್ಣಪ್ಪ, ಮಂಜು, ರಘು, ರಾಘವೇಂದ್ರ, ಸುರೇಶ್ ಸೇರಿದಂತೆ ಗ್ರಾಮಸ್ಥರು ತಹಶೀಲ್ದಾರ್ ಎಸ್.ಸಂತೋಷ್ ಅವರೊಂದಿಗೆ ಚರ್ಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ಕೆಆರ್ಎಸ್ ಅಣೆಕಟ್ಟೆಯಿಂದ 1ಲಕ್ಷಕ್ಕೂ ಅಧಿಕ ಕ್ಯುಸೆಕ್ ನೀರನ್ನು ಕಾವೇರಿ ನದಿಗೆ ಹರಿಯಬಿಟ್ಟಿರುವುದರಿಂದ ನದಿ ಪಾತ್ರದ ತಾಲ್ಲೂಕಿನ ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ನೀರು ನುಗ್ಗಿದ್ದು, ಗ್ರಾಮವು ಜಲಾವೃತಗೊಳ್ಳುವ ಭೀತಿ ಗ್ರಾಮಸ್ಥರಿಗೆ ಎದುರಾಗಿದೆ.</p>.<p>ಕಾವೇರಿ ಹೊಳೆಯ ದಡದ ಕೂಗಳತೆಯಲ್ಲಿರುವ ಎಣ್ಣೆಹೊಳೆ ಗ್ರಾಮದ ಮನೆಗಳ ಮಗ್ಗುಲಿಗೆ ನೀರು ಹರಿದು ಬಂದಿದೆ. ಮಕ್ಕಳು ಮಹಿಳೆಯರು ಭಯಭೀತರಾಗಿದ್ದಾರೆ. ಹೊಳೆ ನೀರು ಗ್ರಾಮದ ಕೆಲವು ಮನೆಗಳಿಗೆ, ಜಾನುವಾರು ಕೊಟ್ಟಿಗೆಗೆ, ಮೇವುಗಳ ಮೆದೆಗಳಿಗೆ ನುಗ್ಗಿದ್ದು, ರೋಗರುಜಿನಗಳು ಹರಡುವ ಭೀತಿ ಜನರನ್ನು ಕಾಡುತ್ತಿದೆ.</p>.<p>50 ಎಕರೆ ಬೆಳೆ ಮುಳುಗಡೆ: ಹೊಳೆ ಆಜುಬಾಜಿನಲ್ಲಿರುವ ರೈತರ ಸುಮಾರು 50 ಎಕರೆಯಷ್ಟು ಜಮೀನಿನ ಬೆಳೆಗಳು ಕೂಡ ಜಲಾವೃತಗೊಂಡಿದ್ದು, ರೈತರು ಸಂಕಷ್ಟದಲ್ಲಿದ್ದಾರೆ.</p>.<p>ತಹಶೀಲ್ದಾರ್ ಭೇಟಿ: ತಹಶೀಲ್ದಾರ್ ಎಸ್.ಸಂತೋಷ್ ಅವರು ಎಣ್ಣೆಹೊಳೆಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿ ಗ್ರಾಮದ ಜನರಿಗೆ ಮುನ್ನೆಚ್ಚರಿಕೆ, ಸಲಹೆ ನೀಡಿದರು. ಗ್ರಾಮಕ್ಕೆ ಆಗಾಗ್ಗೆ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮವಹಿಸಬೇಕೆಂದು ಗ್ರಾಮ ಲೆಕ್ಕಿಗರು, ರಾಜಸ್ವ ನಿರೀಕ್ಷಕರು ಹಾಗೂ ಪಿಡಿಓಗಳಿಗೆ ಸೂಚನೆ ನೀಡಿದರು.</p>.<p><strong>ತಡೆಗೋಡೆ ಪೂರ್ಣಗೊಳಿಸಲು ಒತ್ತಾಯ:</strong></p>.<p>ಹೊಳೆ ದಂಡೆಯಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಈ ಹಿಂದೆ ಸುಮಾರು ₹ 7ಕೋಟಿ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗಿತ್ತಾದರೂ, ಪೂರ್ಣಗೊಂಡಿಲ್ಲವಾದ್ದರಿಂದ ಹೊಳೆ ನೀರು ಗ್ರಾಮಕ್ಕೆ ನುಗ್ಗುತ್ತಿದೆ. ಕೂಡಲೇ ತಡೆಗೋಡೆಯನ್ನು ಪೂರ್ಣಗೊಳಿಸಿಕೊಡಿ, ವ್ಯವಸ್ಥಿತವಾದ ವೈಜ್ಞಾನಿಕ ಚರಂಡಿ ನಿರ್ಮಾಣ ಮಾಡಿಕೊಡಬೇಕು. ಜಲಾವೃತಗೊಂಡಿರುವ ರೈತರ ಬೆಳೆಗಳಿಗೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ತಹಶೀಲ್ದಾರ್ ಸಂತೋಷ್ ಅವರನ್ನು ಒತ್ತಾಯಿಸಿದರು.</p>.<p>ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ.ಎಲ್.ಕೆಂಪೂಗೌಡ, ತಾಲ್ಲೂಕು ಅಧ್ಯಕ್ಷ ಕೆನ್ನಾಳು ನಾಗರಾಜು, ಮುಖಂಡರಾದ ಕೃಷ್ಣಪ್ಪ, ಮಂಜು, ರಘು, ರಾಘವೇಂದ್ರ, ಸುರೇಶ್ ಸೇರಿದಂತೆ ಗ್ರಾಮಸ್ಥರು ತಹಶೀಲ್ದಾರ್ ಎಸ್.ಸಂತೋಷ್ ಅವರೊಂದಿಗೆ ಚರ್ಚಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>