<p><strong>ಮಂಡ್ಯ:</strong> ‘ರಾಸಾಯನಿಕಗಳ ಅತಿಯಾದ ಬಳಕೆಯಿಂದ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ’ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.</p>.<p>ನಗರದ ಹರಿಪ್ರಿಯ ಹೋಟೆಲ್ನಲ್ಲಿ ಸೋಮವಾರ ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ವಿಶ್ವ ಯುವಕ ಕೇಂದ್ರವು ಆಯೋಜಿಸಿದ್ದ ಹವಾಮಾನ ವೈಪರೀತ್ಯ ಮತ್ತು ಜಾಗತಿಕ ತಾಪಮಾನ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ ಸುಮಾರು 8 ಲಕ್ಷ ಹೆಕ್ಟೇರ್ ಭೂಮಿ ಫಲವತ್ತತೆ ಕಳೆದುಕೊಂಡಿದೆ. ಅತಿ ಹೆಚ್ಚು ರಾಸಾಯನಿಕ ಗೊಬ್ಬರ ಬಳಕೆಯಿಂದ ಕೃಷಿ ಮೇಲೆ ದೀರ್ಘಕಾಲದ ಪ್ರತಿಕೂಲ ಪರಿಣಾಮಗಳಾಗುತ್ತಿವೆ. ಇದರಿಂದ ನಾವು ತಿನ್ನುವ ಆಹಾರದಲ್ಲಿ ವಿಷವನ್ನು ಸೇವಿಸುತ್ತಿದ್ದೇವೆ’ ಎಂದು ವಿವರಿಸಿದರು.</p>.<p>‘ನಾಡಿನಿಂದ ಕಾಡು ನಾಶವಾಗುತ್ತಿದೆ. ಇದರಿಂದ ತಾಪಮಾನ ಹೆಚ್ಚುತ್ತಿದೆ. ಹೀಗಾಗಿ ಪ್ರತಿಯೊಬ್ಬರು ಗಿಡ ನೆಡಬೇಕ. ಇದರಿಂದ, ತಾಪಮಾನ ಕಡಿಮೆಯಾಗುತ್ತದೆ. ಪರಿಸರದ ಅಭಿವೃದ್ಧಿ ಆಗುತ್ತದೆ’ ಎಂದರು.</p>.<p>ವಿಕಸನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರ ಮಹೇಶ್ ಚಂದ್ರಗುರು ಮಾತನಾಡಿ, ‘ಹವಾಮಾನ ವೈಪರೀತ್ಯ ಮತ್ತು ಜಾಗತಿಕ ಸಮಸ್ಯೆಯಿಂದ ಜೀವ ವೈವಿಧ್ಯತೆ ಸಂಕಷ್ಟಕ್ಕೆ ಒಳಗಾಗಿದೆ. ಈ ಎಲ್ಲವನ್ನು ಕುರಿತು ಕಾರ್ಯಾಗಾರದಲ್ಲಿ ಇಂದಿನ ಯುವ ಪೀಳಿಗೆಗೆ ಮನವರಿಕೆ ಮಾಡಿಕೊಡಲಾಗುವುದು. ಮುಂದಿನ ಐದು ವರ್ಷದಲ್ಲಿ ಹೇಗೆ ನಾವು ನಮ್ಮ ರಾಜ್ಯವನ್ನು ಜಾಗತಿಕ ಸಮಸ್ಯೆಯಿಂದ ಕಾಪಾಡುವುದು ಎಂದು ವಿವರಿಸಲಾಗುವುದು’ ಎಂದರು.</p>.<p>ಕಾರ್ಯಾಕ್ರಮಾಧಿಕಾರಿ ಮಂಜುನಾಥ್, ಕೋಲಾರ ಜಿಲ್ಲೆಯ ಗ್ರಾಮ ವಿಕಾಸ ಸಂಸ್ಥೆಯ ನಿರ್ದೇಶಕ ಎಂ.ವಿ.ಎನ್.ರಾವ್, ವಿಕಸನ ಸಂಸ್ಥೆಯ ಆಡಳಿತ ಉಪಾಧ್ಯಕ್ಷ ಶಬಿನ್ ತಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ರಾಸಾಯನಿಕಗಳ ಅತಿಯಾದ ಬಳಕೆಯಿಂದ ಭೂಮಿ ತನ್ನ ಫಲವತ್ತತೆಯನ್ನು ಕಳೆದುಕೊಳ್ಳುತ್ತಿದೆ’ ಎಂದು ಶಾಸಕ ಪಿ.ರವಿಕುಮಾರ್ ಹೇಳಿದರು.</p>.<p>ನಗರದ ಹರಿಪ್ರಿಯ ಹೋಟೆಲ್ನಲ್ಲಿ ಸೋಮವಾರ ವಿಕಸನ ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ಹಾಗೂ ವಿಶ್ವ ಯುವಕ ಕೇಂದ್ರವು ಆಯೋಜಿಸಿದ್ದ ಹವಾಮಾನ ವೈಪರೀತ್ಯ ಮತ್ತು ಜಾಗತಿಕ ತಾಪಮಾನ ಕುರಿತ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ರಾಜ್ಯದಲ್ಲಿ ಸುಮಾರು 8 ಲಕ್ಷ ಹೆಕ್ಟೇರ್ ಭೂಮಿ ಫಲವತ್ತತೆ ಕಳೆದುಕೊಂಡಿದೆ. ಅತಿ ಹೆಚ್ಚು ರಾಸಾಯನಿಕ ಗೊಬ್ಬರ ಬಳಕೆಯಿಂದ ಕೃಷಿ ಮೇಲೆ ದೀರ್ಘಕಾಲದ ಪ್ರತಿಕೂಲ ಪರಿಣಾಮಗಳಾಗುತ್ತಿವೆ. ಇದರಿಂದ ನಾವು ತಿನ್ನುವ ಆಹಾರದಲ್ಲಿ ವಿಷವನ್ನು ಸೇವಿಸುತ್ತಿದ್ದೇವೆ’ ಎಂದು ವಿವರಿಸಿದರು.</p>.<p>‘ನಾಡಿನಿಂದ ಕಾಡು ನಾಶವಾಗುತ್ತಿದೆ. ಇದರಿಂದ ತಾಪಮಾನ ಹೆಚ್ಚುತ್ತಿದೆ. ಹೀಗಾಗಿ ಪ್ರತಿಯೊಬ್ಬರು ಗಿಡ ನೆಡಬೇಕ. ಇದರಿಂದ, ತಾಪಮಾನ ಕಡಿಮೆಯಾಗುತ್ತದೆ. ಪರಿಸರದ ಅಭಿವೃದ್ಧಿ ಆಗುತ್ತದೆ’ ಎಂದರು.</p>.<p>ವಿಕಸನ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ನಿರ್ದೇಶಕರ ಮಹೇಶ್ ಚಂದ್ರಗುರು ಮಾತನಾಡಿ, ‘ಹವಾಮಾನ ವೈಪರೀತ್ಯ ಮತ್ತು ಜಾಗತಿಕ ಸಮಸ್ಯೆಯಿಂದ ಜೀವ ವೈವಿಧ್ಯತೆ ಸಂಕಷ್ಟಕ್ಕೆ ಒಳಗಾಗಿದೆ. ಈ ಎಲ್ಲವನ್ನು ಕುರಿತು ಕಾರ್ಯಾಗಾರದಲ್ಲಿ ಇಂದಿನ ಯುವ ಪೀಳಿಗೆಗೆ ಮನವರಿಕೆ ಮಾಡಿಕೊಡಲಾಗುವುದು. ಮುಂದಿನ ಐದು ವರ್ಷದಲ್ಲಿ ಹೇಗೆ ನಾವು ನಮ್ಮ ರಾಜ್ಯವನ್ನು ಜಾಗತಿಕ ಸಮಸ್ಯೆಯಿಂದ ಕಾಪಾಡುವುದು ಎಂದು ವಿವರಿಸಲಾಗುವುದು’ ಎಂದರು.</p>.<p>ಕಾರ್ಯಾಕ್ರಮಾಧಿಕಾರಿ ಮಂಜುನಾಥ್, ಕೋಲಾರ ಜಿಲ್ಲೆಯ ಗ್ರಾಮ ವಿಕಾಸ ಸಂಸ್ಥೆಯ ನಿರ್ದೇಶಕ ಎಂ.ವಿ.ಎನ್.ರಾವ್, ವಿಕಸನ ಸಂಸ್ಥೆಯ ಆಡಳಿತ ಉಪಾಧ್ಯಕ್ಷ ಶಬಿನ್ ತಾಜ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>