<p><strong>ನಂಜನಗೂಡು:</strong> ‘ರಾಜ್ಯದಾದ್ಯಂತ 200 ಪಶುಚಿಕಿತ್ಸಾಲಯ ಮಂಜೂರಾಗಿದ್ದು, ಮೈಸೂರು ಜಿಲ್ಲೆಗೆ 12 ಸೇರಿವೆ’ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಹೇಳಿದರು.</p>.<p>ತಾಲ್ಲೂಕಿನ ಕಂದೆಗಾಲ ಗ್ರಾಮದಲ್ಲಿ ಶನಿವಾರ ಪಶುಚಿಕಿತ್ಸಾ ಆಸ್ಪತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಾಸಕ ದರ್ಶನ್ ಧ್ರುವನಾರಾಯಣ ತಾಲ್ಲೂಕಿಗೆ ಮೂರು ಪಶು ಆಸ್ಪತ್ರೆ ತೆರೆಯಲು ಬೇಡಿಕೆ ಸಲ್ಲಿಸಿದ್ದರು. ಕಂದೆಗಾಲ ಕಾಡಂಚಿನ ಗ್ರಾಮವಾಗಿದ್ದು, ಜಾನುವಾರುಗಳಿಗೆ ಚಿಕಿತ್ಸೆ ಪಡೆಯಲು ರೈತರು ಯಡಿಯಾಲದ ಕೇಂದ್ರ ಅವಲಂಬಿಸಬೇಕಾಗಿತ್ತು. ಈ ಭಾಗದಲ್ಲಿ 2,100ಕ್ಕೂ ಹೆಚ್ಚು ಜಾನುವಾರುಗಳಿದ್ದು, ಗ್ರಾಮಕ್ಕೆ ಪಶು ಚಿಕಿತ್ಸಾ ಕೇಂದ್ರದ ಅಗತ್ಯದ ಬಗ್ಗೆ ಇಲಾಖೆಗೆ ಮನವರಿಕೆಯಾಗಿತ್ತು. ಮುಂದಿನ ದಿನಗಳಲ್ಲಿ ಚಿಕಿತ್ಸಾ ಕೇಂದ್ರಕ್ಕೆ ಹೊಸ ಕಟ್ಟಡವನ್ನು ಮಂಜೂರು ಮಾಡಲಾಗುವುದು’ ಎಂದು ಹೇಳಿದರು.</p>.<p>‘ಇಲಾಖೆ ಬರಗಾಲ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ, ರಾಜ್ಯದಾದ್ಯಂತ ₹400 ಕೋಟಿ ವೆಚ್ಚದಲ್ಲಿ ಮೇವಿನ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ 1.9 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ಗಳನ್ನು ವಿತರಿಸಲಾಗಿತ್ತು, ಹೀಗಾಗಿ ಬರಗಾಲದ ಪರಿಸ್ಥಿತಿಯಲ್ಲೂ ಹಾಲಿನ ಉತ್ಪಾದನೆ ಹೆಚ್ಚಿದೆ. ರಾಜ್ಯದಲ್ಲಿ 400 ಪಶುವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ‘ಜಿಲ್ಲೆಯಲ್ಲಿ ಜಾನುವಾರು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಸೇವೆ ಆರಂಭಿಸಲಾಗಿದ್ದು, 1965 ಕ್ಕೆ ಕರೆ ಮಾಡಿದರೆ ವೈದ್ಯರು ಮನೆ ಬಾಗಿಲಿಗೆ ಸಿಬ್ಬಂದಿಯೊಂದಿಗೆ ಬಂದು ಪಶುಗಳಿಗೆ ಚಿಕಿತ್ಸೆ ನೀಡಲಿದ್ದಾರೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಸಕ ಮಂಜೇಗೌಡ, ಮುಖಂಡರಾದ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ವಕ್ತಾರ ಲಕ್ಷ್ಮಣ್, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ನಾಗರಾಜ್, ಕುರಹಟ್ಟಿ ಮಹೇಶ್, ಶ್ರೀಕಂಠನಾಯ್ಕ, ಗ್ರಾ.ಪಂ. ಅಧ್ಯಕ್ಷ ಹರೀಶ್ ಕುಮಾರ್, ಕೆ.ಮಾರುತಿ, ಅಭಿನಂದನ್ ಪಟೇಲ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಶರಣಬಸಪ್ಪ ಉಪಸ್ಥಿತರಿದ್ದರು. </p>.<blockquote>ಮೇವಿನ ಬಿತ್ತನೆ ಬೀಜ ವಿತರಣೆ ರಾಜ್ಯದಲ್ಲಿ 400 ಪಶುವೈದ್ಯರ ನೇಮಕ ಆ್ಯಂಬುಲೆನ್ಸ್ ಸೇವೆ ಆರಂಭ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಂಜನಗೂಡು:</strong> ‘ರಾಜ್ಯದಾದ್ಯಂತ 200 ಪಶುಚಿಕಿತ್ಸಾಲಯ ಮಂಜೂರಾಗಿದ್ದು, ಮೈಸೂರು ಜಿಲ್ಲೆಗೆ 12 ಸೇರಿವೆ’ ಎಂದು ಪಶುಸಂಗೋಪನೆ ಸಚಿವ ಕೆ.ವೆಂಕಟೇಶ್ ಹೇಳಿದರು.</p>.<p>ತಾಲ್ಲೂಕಿನ ಕಂದೆಗಾಲ ಗ್ರಾಮದಲ್ಲಿ ಶನಿವಾರ ಪಶುಚಿಕಿತ್ಸಾ ಆಸ್ಪತ್ರೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶಾಸಕ ದರ್ಶನ್ ಧ್ರುವನಾರಾಯಣ ತಾಲ್ಲೂಕಿಗೆ ಮೂರು ಪಶು ಆಸ್ಪತ್ರೆ ತೆರೆಯಲು ಬೇಡಿಕೆ ಸಲ್ಲಿಸಿದ್ದರು. ಕಂದೆಗಾಲ ಕಾಡಂಚಿನ ಗ್ರಾಮವಾಗಿದ್ದು, ಜಾನುವಾರುಗಳಿಗೆ ಚಿಕಿತ್ಸೆ ಪಡೆಯಲು ರೈತರು ಯಡಿಯಾಲದ ಕೇಂದ್ರ ಅವಲಂಬಿಸಬೇಕಾಗಿತ್ತು. ಈ ಭಾಗದಲ್ಲಿ 2,100ಕ್ಕೂ ಹೆಚ್ಚು ಜಾನುವಾರುಗಳಿದ್ದು, ಗ್ರಾಮಕ್ಕೆ ಪಶು ಚಿಕಿತ್ಸಾ ಕೇಂದ್ರದ ಅಗತ್ಯದ ಬಗ್ಗೆ ಇಲಾಖೆಗೆ ಮನವರಿಕೆಯಾಗಿತ್ತು. ಮುಂದಿನ ದಿನಗಳಲ್ಲಿ ಚಿಕಿತ್ಸಾ ಕೇಂದ್ರಕ್ಕೆ ಹೊಸ ಕಟ್ಟಡವನ್ನು ಮಂಜೂರು ಮಾಡಲಾಗುವುದು’ ಎಂದು ಹೇಳಿದರು.</p>.<p>‘ಇಲಾಖೆ ಬರಗಾಲ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ, ರಾಜ್ಯದಾದ್ಯಂತ ₹400 ಕೋಟಿ ವೆಚ್ಚದಲ್ಲಿ ಮೇವಿನ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ. ಜಿಲ್ಲೆಯಲ್ಲಿ 1.9 ಲಕ್ಷ ಮೇವಿನ ಬಿತ್ತನೆ ಬೀಜದ ಕಿಟ್ಗಳನ್ನು ವಿತರಿಸಲಾಗಿತ್ತು, ಹೀಗಾಗಿ ಬರಗಾಲದ ಪರಿಸ್ಥಿತಿಯಲ್ಲೂ ಹಾಲಿನ ಉತ್ಪಾದನೆ ಹೆಚ್ಚಿದೆ. ರಾಜ್ಯದಲ್ಲಿ 400 ಪಶುವೈದ್ಯರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ’ ಎಂದು ತಿಳಿಸಿದರು.</p>.<p>ಶಾಸಕ ದರ್ಶನ್ ಧ್ರುವನಾರಾಯಣ ಮಾತನಾಡಿ, ‘ಜಿಲ್ಲೆಯಲ್ಲಿ ಜಾನುವಾರು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್ ಸೇವೆ ಆರಂಭಿಸಲಾಗಿದ್ದು, 1965 ಕ್ಕೆ ಕರೆ ಮಾಡಿದರೆ ವೈದ್ಯರು ಮನೆ ಬಾಗಿಲಿಗೆ ಸಿಬ್ಬಂದಿಯೊಂದಿಗೆ ಬಂದು ಪಶುಗಳಿಗೆ ಚಿಕಿತ್ಸೆ ನೀಡಲಿದ್ದಾರೆ’ ಎಂದರು.</p>.<p>ಕಾರ್ಯಕ್ರಮದಲ್ಲಿ ಶಾಸಕ ಮಂಜೇಗೌಡ, ಮುಖಂಡರಾದ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ವಕ್ತಾರ ಲಕ್ಷ್ಮಣ್, ಪಶುಸಂಗೋಪನೆ ಇಲಾಖೆ ಉಪ ನಿರ್ದೇಶಕ ಡಾ.ನಾಗರಾಜ್, ಕುರಹಟ್ಟಿ ಮಹೇಶ್, ಶ್ರೀಕಂಠನಾಯ್ಕ, ಗ್ರಾ.ಪಂ. ಅಧ್ಯಕ್ಷ ಹರೀಶ್ ಕುಮಾರ್, ಕೆ.ಮಾರುತಿ, ಅಭಿನಂದನ್ ಪಟೇಲ್, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ಶರಣಬಸಪ್ಪ ಉಪಸ್ಥಿತರಿದ್ದರು. </p>.<blockquote>ಮೇವಿನ ಬಿತ್ತನೆ ಬೀಜ ವಿತರಣೆ ರಾಜ್ಯದಲ್ಲಿ 400 ಪಶುವೈದ್ಯರ ನೇಮಕ ಆ್ಯಂಬುಲೆನ್ಸ್ ಸೇವೆ ಆರಂಭ</blockquote>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>