<p><strong>ಮೈಸೂರು</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಣಿಯಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ರಾಜ್ಯಪಾಲರನ್ನು ಏಜೆಂಟ್ ಆಗಿ ಬಳಸಿಕೊಳ್ಳುತ್ತಿದ್ದಾರೆ. ಇದು ಮುಂದುವರಿದರೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ’ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಎಚ್ಚರಿಸಿದರು.</p>.<p>‘ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ್ದನ್ನೇ ಆಧಾರವಾಗಿಟ್ಟುಕೊಂಡು ರಾಜ್ಯಪಾಲರು ಕೂಡಲೇ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಮಾಹಿತಿ ಕೇಳುತ್ತಾರೆ. ಬಿಜೆಪಿ–ಜೆಡಿಎಸ್ ನಾಯಕರ ಅಭಿಪ್ರಾಯ ಪಡೆದು ಈ ಕ್ರಮಕ್ಕೆ ಮುಂದಾಗಿದ್ದಾರೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಯಾವುದೇ ಅಕ್ರಮ ಎಸಗಿಲ್ಲ. ಹೀಗಿದ್ದೂ ಅವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಒಟ್ಟಾಗಿ ಸಂಚು ರೂಪಿಸಿದ್ದಾರೆ’ ಎಂದು ದೂರಿದರು.</p>.<p>‘ಸಿದ್ದರಾಮಯ್ಯ ಕುಟುಂಬದವರು ಖಾಸಗಿ ಜಮೀನು ಖರೀದಿಸಿದರೆ ಸರ್ಕಾರಕ್ಕೆ ಯಾವ ರೀತಿ ನಷ್ಟವಾಗುತ್ತದೆ? 14 ನಿವೇಶನ ಪಡೆಯಲು ಸಿದ್ದರಾಮಯ್ಯ ಪ್ರಭಾವ ಬಳಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ ಮಾತ್ರಕ್ಕೆ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಬಹುದೇ? ಅಬ್ರಹಾಂ ಕೊಟ್ಟ ದೂರೇ ಅಂತಿಮವೇ’ ಎಂದು ಪ್ರಶ್ನಿಸಿದರು.</p>.<p>‘ಟಿ.ಜೆ. ಅಬ್ರಹಾಂ ಸಲ್ಲಿಸಿರುವ 20 ಪುಟಗಳ ದೂರನ್ನು ಓದಿದರೆ ರಾಜಭವನದಲ್ಲಿ ಬಿಜೆಪಿ ನಾಯಕರು ಕುಳಿತು ಸಿದ್ಧಪಡಿಸಿರುವಂತಿದೆ. ರಾಜಭವನವನ್ನು ಬಿಜೆಪಿ ಕಚೇರಿ ಮಾಡಬೇಡಿ. ಹಿಂದುಳಿದ ವರ್ಗಕ್ಕೆ ಸೇರಿದ ಮುಖ್ಯಮಂತ್ರಿಗೆ ತೊಂದರೆ ಕೊಡಲು, ದಲಿತ ಅಲ್ಪಸಂಖ್ಯಾತರಿಗೆ ಅವಮಾನ ಮಾಡಲು ಸಂಚು ನಡೆದಿದೆ. ಇದರ ವಿರುದ್ಧ ಜನರ ಮುಂದೆ ಹೋಗುತ್ತೇವೆ’ ಎಂದರು.</p>.<p>‘ಬಿಜೆಪಿ ಪಾದಯಾತ್ರೆಯಿಂದ ಜೆಡಿಎಸ್ ಯೂಟರ್ನ್ ಮಾಡಲು ಕುಮಾರಸ್ವಾಮಿ ಕ್ಷುಲ್ಲಕ ಕಾರಣವನ್ನು ಜನತೆಯ ಮುಂದಿಟ್ಟಿದ್ದಾರೆ. ಮೇಲ್ನೋಟಕ್ಕೆ ಜನಗಳ ಅನುಕಂಪ ಗಿಟ್ಟಿಸಿಕೊಳ್ಳಲು ಪಾದಯಾತ್ರೆಯಿಂದ ಹಿಂದೆ ಸರಿಯುವಂತೆ ಹೇಳಿದ್ದಾರೆ. ಆಂತರಿಕವಾಗಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ’ ಎಂದು ದೂರಿದರು.</p>.<p>ಕಾಂಗ್ರೆಸ್ ಜಿಲ್ಲಾ ನಗರ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಬಿ.ಎಂ. ರಾಮು, ಎಚ್.ವಿ. ರಾಜೀವ್, ಭಾಸ್ಕರ್, ಶಿವಪ್ರಸಾದ್, ಸಂತೋಷ್, ಶಿವಣ್ಣ, ಗಿರೀಶ್, ಶ್ರೀಧರ್, ಕೆ.ಮಹೇಶ್, ತಿಮ್ಮಯ್ಯ, ಶಾಂತರಾಜು ಇದ್ದರು.</p>.<p><strong>ಪ್ರತಿ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧ </strong></p><p>‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿದರೆ ಕ್ರಾಂತಿಯಾಗುತ್ತದೆ. ಬಿಜೆಪಿಯ ಪ್ರತಿ ಹೋರಾಟಕ್ಕೆ ನಾವು ಸಿದ್ಧರಾಗಿದ್ದೇವೆ. ಹೈಕಮಾಂಡ್ನಿಂದ ಸೂಚನೆ ಬಂದ ತಕ್ಷಣ ಬೀದಿಗಿಳಿಯುತ್ತೇವೆ’ ಎಂದು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಎಚ್ಚರಿಸಿದರು. </p><p>‘ಆ.3ರಂದು ಬಿಜೆಪಿ ಪಾದಯಾತ್ರೆ ಮಾಡುವುದಿಲ್ಲ ಎಂಬ ಮಾಹಿತಿ ಬಂದಿದೆ. ರಾಜ್ಯದಲ್ಲಿ ಎಲ್ಲಿಯೇ ಬಿಜೆಪಿ ಪಾದಯಾತ್ರೆ ಮಾಡಿದರೂ ನಾವು ಪ್ರತಿ ಹೋರಾಟ ಮಾಡುತ್ತೇವೆ. ಮುಂದಾಗುವ ಅನಾಹುತಗಳಿಗೆ ಬಿಜೆಪಿ–ಜೆಡಿಎಸ್ ನಾಯಕರೇ ಹೊಣೆ’ ಎಂದರು. </p><p>‘ಪಾದಯಾತ್ರೆ ಸತ್ಯಾಗ್ರಹ ಅಸಹಕಾರ ಚಳವಳಿಗಳೆಲ್ಲ ದೇಶಕ್ಕೆ ಕಾಂಗ್ರೆಸ್ ಕೊಟ್ಟ ಬಳವಳಿ. ಬಿಜೆಪಿ ಈಗ ಅದನ್ನು ನಕಲು ಮಾಡುತ್ತಿದೆ. ಸಿದ್ದರಾಮಯ್ಯರಂತಹ ಪ್ರಾಮಾಣಿಕ ಬದ್ಧತೆಯ ರಾಜಕಾರಣಿಗಳು ಈ ರಾಜ್ಯಕ್ಕೆ ಅನಿವಾರ್ಯ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹಣಿಯಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ರಾಜ್ಯಪಾಲರನ್ನು ಏಜೆಂಟ್ ಆಗಿ ಬಳಸಿಕೊಳ್ಳುತ್ತಿದ್ದಾರೆ. ಇದು ಮುಂದುವರಿದರೆ ಕಾಂಗ್ರೆಸ್ ಬೀದಿಗಿಳಿದು ಹೋರಾಟ ಮಾಡಬೇಕಾಗುತ್ತದೆ’ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಎಚ್ಚರಿಸಿದರು.</p>.<p>‘ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಸಿದ್ದರಾಮಯ್ಯ ವಿರುದ್ಧ ದೂರು ಸಲ್ಲಿಸಿದ್ದನ್ನೇ ಆಧಾರವಾಗಿಟ್ಟುಕೊಂಡು ರಾಜ್ಯಪಾಲರು ಕೂಡಲೇ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ಮಾಹಿತಿ ಕೇಳುತ್ತಾರೆ. ಬಿಜೆಪಿ–ಜೆಡಿಎಸ್ ನಾಯಕರ ಅಭಿಪ್ರಾಯ ಪಡೆದು ಈ ಕ್ರಮಕ್ಕೆ ಮುಂದಾಗಿದ್ದಾರೆ’ ಎಂದು ಅವರು ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಯಾವುದೇ ಅಕ್ರಮ ಎಸಗಿಲ್ಲ. ಹೀಗಿದ್ದೂ ಅವರ ವಿರುದ್ಧ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್.ಅಶೋಕ, ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ ಒಟ್ಟಾಗಿ ಸಂಚು ರೂಪಿಸಿದ್ದಾರೆ’ ಎಂದು ದೂರಿದರು.</p>.<p>‘ಸಿದ್ದರಾಮಯ್ಯ ಕುಟುಂಬದವರು ಖಾಸಗಿ ಜಮೀನು ಖರೀದಿಸಿದರೆ ಸರ್ಕಾರಕ್ಕೆ ಯಾವ ರೀತಿ ನಷ್ಟವಾಗುತ್ತದೆ? 14 ನಿವೇಶನ ಪಡೆಯಲು ಸಿದ್ದರಾಮಯ್ಯ ಪ್ರಭಾವ ಬಳಸಿದ್ದಾರೆ ಎಂದು ದೂರಿನಲ್ಲಿ ಆಪಾದಿಸಿದ ಮಾತ್ರಕ್ಕೆ ಮುಖ್ಯಮಂತ್ರಿ ವಿರುದ್ಧ ಕ್ರಮ ಕೈಗೊಳ್ಳಬಹುದೇ? ಅಬ್ರಹಾಂ ಕೊಟ್ಟ ದೂರೇ ಅಂತಿಮವೇ’ ಎಂದು ಪ್ರಶ್ನಿಸಿದರು.</p>.<p>‘ಟಿ.ಜೆ. ಅಬ್ರಹಾಂ ಸಲ್ಲಿಸಿರುವ 20 ಪುಟಗಳ ದೂರನ್ನು ಓದಿದರೆ ರಾಜಭವನದಲ್ಲಿ ಬಿಜೆಪಿ ನಾಯಕರು ಕುಳಿತು ಸಿದ್ಧಪಡಿಸಿರುವಂತಿದೆ. ರಾಜಭವನವನ್ನು ಬಿಜೆಪಿ ಕಚೇರಿ ಮಾಡಬೇಡಿ. ಹಿಂದುಳಿದ ವರ್ಗಕ್ಕೆ ಸೇರಿದ ಮುಖ್ಯಮಂತ್ರಿಗೆ ತೊಂದರೆ ಕೊಡಲು, ದಲಿತ ಅಲ್ಪಸಂಖ್ಯಾತರಿಗೆ ಅವಮಾನ ಮಾಡಲು ಸಂಚು ನಡೆದಿದೆ. ಇದರ ವಿರುದ್ಧ ಜನರ ಮುಂದೆ ಹೋಗುತ್ತೇವೆ’ ಎಂದರು.</p>.<p>‘ಬಿಜೆಪಿ ಪಾದಯಾತ್ರೆಯಿಂದ ಜೆಡಿಎಸ್ ಯೂಟರ್ನ್ ಮಾಡಲು ಕುಮಾರಸ್ವಾಮಿ ಕ್ಷುಲ್ಲಕ ಕಾರಣವನ್ನು ಜನತೆಯ ಮುಂದಿಟ್ಟಿದ್ದಾರೆ. ಮೇಲ್ನೋಟಕ್ಕೆ ಜನಗಳ ಅನುಕಂಪ ಗಿಟ್ಟಿಸಿಕೊಳ್ಳಲು ಪಾದಯಾತ್ರೆಯಿಂದ ಹಿಂದೆ ಸರಿಯುವಂತೆ ಹೇಳಿದ್ದಾರೆ. ಆಂತರಿಕವಾಗಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸುವ ಕಾರ್ಯದಲ್ಲಿ ಮಗ್ನರಾಗಿದ್ದಾರೆ’ ಎಂದು ದೂರಿದರು.</p>.<p>ಕಾಂಗ್ರೆಸ್ ಜಿಲ್ಲಾ ನಗರ ಸಮಿತಿ ಅಧ್ಯಕ್ಷ ಆರ್.ಮೂರ್ತಿ, ಮುಖಂಡರಾದ ಬಿ.ಎಂ. ರಾಮು, ಎಚ್.ವಿ. ರಾಜೀವ್, ಭಾಸ್ಕರ್, ಶಿವಪ್ರಸಾದ್, ಸಂತೋಷ್, ಶಿವಣ್ಣ, ಗಿರೀಶ್, ಶ್ರೀಧರ್, ಕೆ.ಮಹೇಶ್, ತಿಮ್ಮಯ್ಯ, ಶಾಂತರಾಜು ಇದ್ದರು.</p>.<p><strong>ಪ್ರತಿ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧ </strong></p><p>‘ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿದರೆ ಕ್ರಾಂತಿಯಾಗುತ್ತದೆ. ಬಿಜೆಪಿಯ ಪ್ರತಿ ಹೋರಾಟಕ್ಕೆ ನಾವು ಸಿದ್ಧರಾಗಿದ್ದೇವೆ. ಹೈಕಮಾಂಡ್ನಿಂದ ಸೂಚನೆ ಬಂದ ತಕ್ಷಣ ಬೀದಿಗಿಳಿಯುತ್ತೇವೆ’ ಎಂದು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಜೆ. ವಿಜಯ್ಕುಮಾರ್ ಎಚ್ಚರಿಸಿದರು. </p><p>‘ಆ.3ರಂದು ಬಿಜೆಪಿ ಪಾದಯಾತ್ರೆ ಮಾಡುವುದಿಲ್ಲ ಎಂಬ ಮಾಹಿತಿ ಬಂದಿದೆ. ರಾಜ್ಯದಲ್ಲಿ ಎಲ್ಲಿಯೇ ಬಿಜೆಪಿ ಪಾದಯಾತ್ರೆ ಮಾಡಿದರೂ ನಾವು ಪ್ರತಿ ಹೋರಾಟ ಮಾಡುತ್ತೇವೆ. ಮುಂದಾಗುವ ಅನಾಹುತಗಳಿಗೆ ಬಿಜೆಪಿ–ಜೆಡಿಎಸ್ ನಾಯಕರೇ ಹೊಣೆ’ ಎಂದರು. </p><p>‘ಪಾದಯಾತ್ರೆ ಸತ್ಯಾಗ್ರಹ ಅಸಹಕಾರ ಚಳವಳಿಗಳೆಲ್ಲ ದೇಶಕ್ಕೆ ಕಾಂಗ್ರೆಸ್ ಕೊಟ್ಟ ಬಳವಳಿ. ಬಿಜೆಪಿ ಈಗ ಅದನ್ನು ನಕಲು ಮಾಡುತ್ತಿದೆ. ಸಿದ್ದರಾಮಯ್ಯರಂತಹ ಪ್ರಾಮಾಣಿಕ ಬದ್ಧತೆಯ ರಾಜಕಾರಣಿಗಳು ಈ ರಾಜ್ಯಕ್ಕೆ ಅನಿವಾರ್ಯ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>