<p><strong>ಮೈಸೂರು:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬ ಪಿತೂರಿಯಿಂದ ಬಿಜೆಪಿ– ಜೆಡಿಎಸ್ನವರು ಹಮ್ಮಿಕೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ಅಹಿಂದ, ಪ್ರಗತಿಪರ ಸಂಘಟನೆಗಳಿಂದಲೂ ಪಾದಯಾತ್ರೆ ನಡೆಸಲಾಗುವುದು’ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಎಸ್. ಶಿವರಾಮು ತಿಳಿಸಿದರು.</p>.ಮುಡಾ ಹಗರಣ: ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಅಹೋರಾತ್ರಿ ಧರಣಿ .<p>‘ಬಿಜೆಪಿ ಸರ್ಕಾರದ ಕಾಲದ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಮೈಸೂರಿನ ಮುಡಾ ಕಚೇರಿಯಿಂದ ಪಾದಯಾತ್ರೆ ಆರಂಭಿಸಿ, ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಬಿಜೆಪಿ–ಜೆಡಿಎಸ್ನವರು ಆರಂಭಿಸಿದ ದಿನವೇ ನಾವೂ ಪ್ರಾರಂಭಿಸುತ್ತೇವೆ. ಕಾಂಗ್ರೆಸ್ನವರ ಬೆಂಬಲವನ್ನೂ ಪಡೆಯುತ್ತೇವೆ. ಸಿದ್ದರಾಮಯ್ಯ ಅಭಿಮಾನಿಗಳೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದರು.</p>.ಮುಡಾ ಹಗರಣ | ನಿಲುವಳಿ ಮಂಡನೆಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ: ಸದನದಲ್ಲಿ ಗದ್ದಲ.<p>‘ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಇಳಿಸಲು ಹಾಗೂ ರಾಜಕೀಯವಾಗಿ ಮುಗಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸುಪಾರಿ ಕೊಟ್ಟಿದ್ದಾರೆ’ ಎಂದು ದೂರಿದರು.</p><p>‘ಮುಖ್ಯಮಂತ್ರಿ ಆಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಬಿ.ವೈ. ವಿಜಯೇಂದ್ರ ಕಾರಣ. ಏಕೆಂದರೆ, ಅವರು ಭ್ರಷ್ಟಾಚಾರದ ಪಿತಾಮಹ. ಯಡಿಯೂರಪ್ಪ ಸರ್ಕಾರವಿದ್ದಾಗ ವಿಜಯೇಂದ್ರ ಅವರು ಮುಡಾದಲ್ಲಿ ₹ 2ಸಾವಿರ ಕೋಟಿ ಮೊತ್ತದ ಹಗರಣ ನಡೆಸಿದ್ದಾರೆ. ಅಂಥವರೀಗ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಗಾಜಿನ ಮನೆಯಲ್ಲಿ ಕುಳಿತು ಬೇರೆಯವರತ್ತ ಕಲ್ಲು ಎಸೆಯುವುದನ್ನು ನಿಲ್ಲಿಸಬೇಕು’ ಎಂದರು.</p>.ಮುಡಾ: ನಿವೇಶನ ಖರೀದಿದಾರರಿಗೆ ಆತಂಕ.<p>‘ಪಾದಯಾತ್ರೆಯ ರೂಪರೇಷೆ ಸಿದ್ಧಪಡಿಸಲು ಜುಲೈ 28ರಂದು ಸಂಜೆ 4ಕ್ಕೆ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ’ ಎಂದು ತಿಳಿಸಿದರು.</p><p>‘ಜನಪರವಾದ ನಾಯಕ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನರು ಜಾತ್ಯತೀತವಾಗಿ ದಂಗೆ ಏಳುತ್ತಾರೆ’ ಎಂದು ಎಚ್ಚರಿಕೆ ನೀಡಿದರು.</p>.‘ಮುಡಾ’ ಅಧ್ಯಕ್ಷರಾಗಿ ಬಿ.ವೈ.ರಾಜೇಶ್ ಅಧಿಕಾರ ಸ್ವೀಕಾರ.<p>‘ಸರ್ಕಾರಿ ನೌಕರರು ಆರ್ಎಸ್ಎಸ್ ಸೇರಲು ಅವಕಾಶ ನೀಡುವ ಮೂಲಕ, ಕೇಂದ್ರ ಸರ್ಕಾರವು ಸಂವಿಧಾನವನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದೆ. ಬಿಜೆಪಿಯ ಅಂಗ ಸಂಸ್ಥೆಯಾದ ಆರ್ಎಸ್ಎಸ್ ಸೇರ್ಪಡೆಗೆ ಅನುವು ಮಾಡಿಕೊಟ್ಟು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅಂಬೇಡ್ಕರ್ ಅವರಿಗೆ ಅವಮಾನ ಮಾಡುತ್ತಿದೆ’ ಎಂದು ಆರೋಪಿಸಿದರು.</p><p>ವಿವಿಧ ಸಮಾಜಗಳ ಮುಖಂಡರಾದ ಯೋಗೀಶ್ ಉಪ್ಪಾರ, ಎಚ್.ಎಸ್. ಪ್ರಕಾಶ್, ಎಸ್. ರವಿನಂದನ್, ಲೋಕೇಶ್ಕುಮಾರ್ ಮಾದಾಪುರ, ಶಿವಶಂಕರ್ ಮೂರ್ತಿ ಹಾಗೂ ರಹೀಂ ಪಾಲ್ಗೊಂಡಿದ್ದರು.</p>.ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಆಗ್ರಹ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಬೇಕು ಎಂಬ ಪಿತೂರಿಯಿಂದ ಬಿಜೆಪಿ– ಜೆಡಿಎಸ್ನವರು ಹಮ್ಮಿಕೊಂಡಿರುವ ಪಾದಯಾತ್ರೆಗೆ ಪ್ರತಿಯಾಗಿ ಅಹಿಂದ, ಪ್ರಗತಿಪರ ಸಂಘಟನೆಗಳಿಂದಲೂ ಪಾದಯಾತ್ರೆ ನಡೆಸಲಾಗುವುದು’ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆಯ ಅಧ್ಯಕ್ಷ ಕೆ.ಎಸ್. ಶಿವರಾಮು ತಿಳಿಸಿದರು.</p>.ಮುಡಾ ಹಗರಣ: ಉಭಯ ಸದನಗಳಲ್ಲಿ ವಿರೋಧ ಪಕ್ಷಗಳ ಅಹೋರಾತ್ರಿ ಧರಣಿ .<p>‘ಬಿಜೆಪಿ ಸರ್ಕಾರದ ಕಾಲದ ಹಗರಣಗಳ ತನಿಖೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಮೈಸೂರಿನ ಮುಡಾ ಕಚೇರಿಯಿಂದ ಪಾದಯಾತ್ರೆ ಆರಂಭಿಸಿ, ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಬಿಜೆಪಿ–ಜೆಡಿಎಸ್ನವರು ಆರಂಭಿಸಿದ ದಿನವೇ ನಾವೂ ಪ್ರಾರಂಭಿಸುತ್ತೇವೆ. ಕಾಂಗ್ರೆಸ್ನವರ ಬೆಂಬಲವನ್ನೂ ಪಡೆಯುತ್ತೇವೆ. ಸಿದ್ದರಾಮಯ್ಯ ಅಭಿಮಾನಿಗಳೆಲ್ಲರೂ ದೊಡ್ಡ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ಶುಕ್ರವಾರ ಮಾಹಿತಿ ನೀಡಿದರು.</p>.ಮುಡಾ ಹಗರಣ | ನಿಲುವಳಿ ಮಂಡನೆಗೆ ಅವಕಾಶ ನೀಡದ ವಿಧಾನಸಭಾಧ್ಯಕ್ಷ: ಸದನದಲ್ಲಿ ಗದ್ದಲ.<p>‘ಸಿದ್ದರಾಮಯ್ಯ ಅವರನ್ನು ಕುರ್ಚಿಯಿಂದ ಇಳಿಸಲು ಹಾಗೂ ರಾಜಕೀಯವಾಗಿ ಮುಗಿಸಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸುಪಾರಿ ಕೊಟ್ಟಿದ್ದಾರೆ’ ಎಂದು ದೂರಿದರು.</p><p>‘ಮುಖ್ಯಮಂತ್ರಿ ಆಗಿದ್ದ ಬಿ.ಎಸ್. ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಬಿ.ವೈ. ವಿಜಯೇಂದ್ರ ಕಾರಣ. ಏಕೆಂದರೆ, ಅವರು ಭ್ರಷ್ಟಾಚಾರದ ಪಿತಾಮಹ. ಯಡಿಯೂರಪ್ಪ ಸರ್ಕಾರವಿದ್ದಾಗ ವಿಜಯೇಂದ್ರ ಅವರು ಮುಡಾದಲ್ಲಿ ₹ 2ಸಾವಿರ ಕೋಟಿ ಮೊತ್ತದ ಹಗರಣ ನಡೆಸಿದ್ದಾರೆ. ಅಂಥವರೀಗ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ. ಗಾಜಿನ ಮನೆಯಲ್ಲಿ ಕುಳಿತು ಬೇರೆಯವರತ್ತ ಕಲ್ಲು ಎಸೆಯುವುದನ್ನು ನಿಲ್ಲಿಸಬೇಕು’ ಎಂದರು.</p>.ಮುಡಾ: ನಿವೇಶನ ಖರೀದಿದಾರರಿಗೆ ಆತಂಕ.<p>‘ಪಾದಯಾತ್ರೆಯ ರೂಪರೇಷೆ ಸಿದ್ಧಪಡಿಸಲು ಜುಲೈ 28ರಂದು ಸಂಜೆ 4ಕ್ಕೆ ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ’ ಎಂದು ತಿಳಿಸಿದರು.</p><p>‘ಜನಪರವಾದ ನಾಯಕ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನರು ಜಾತ್ಯತೀತವಾಗಿ ದಂಗೆ ಏಳುತ್ತಾರೆ’ ಎಂದು ಎಚ್ಚರಿಕೆ ನೀಡಿದರು.</p>.‘ಮುಡಾ’ ಅಧ್ಯಕ್ಷರಾಗಿ ಬಿ.ವೈ.ರಾಜೇಶ್ ಅಧಿಕಾರ ಸ್ವೀಕಾರ.<p>‘ಸರ್ಕಾರಿ ನೌಕರರು ಆರ್ಎಸ್ಎಸ್ ಸೇರಲು ಅವಕಾಶ ನೀಡುವ ಮೂಲಕ, ಕೇಂದ್ರ ಸರ್ಕಾರವು ಸಂವಿಧಾನವನ್ನು ಬುಡಮೇಲು ಮಾಡಲು ಪ್ರಯತ್ನಿಸುತ್ತಿದೆ. ಬಿಜೆಪಿಯ ಅಂಗ ಸಂಸ್ಥೆಯಾದ ಆರ್ಎಸ್ಎಸ್ ಸೇರ್ಪಡೆಗೆ ಅನುವು ಮಾಡಿಕೊಟ್ಟು ಪ್ರಜಾಪ್ರಭುತ್ವ, ಸಂವಿಧಾನ ಹಾಗೂ ಅಂಬೇಡ್ಕರ್ ಅವರಿಗೆ ಅವಮಾನ ಮಾಡುತ್ತಿದೆ’ ಎಂದು ಆರೋಪಿಸಿದರು.</p><p>ವಿವಿಧ ಸಮಾಜಗಳ ಮುಖಂಡರಾದ ಯೋಗೀಶ್ ಉಪ್ಪಾರ, ಎಚ್.ಎಸ್. ಪ್ರಕಾಶ್, ಎಸ್. ರವಿನಂದನ್, ಲೋಕೇಶ್ಕುಮಾರ್ ಮಾದಾಪುರ, ಶಿವಶಂಕರ್ ಮೂರ್ತಿ ಹಾಗೂ ರಹೀಂ ಪಾಲ್ಗೊಂಡಿದ್ದರು.</p>.ಮುಡಾ ಹಗರಣ: ಸಿದ್ದರಾಮಯ್ಯ ರಾಜೀನಾಮೆಗೆ ಶೋಭಾ ಕರಂದ್ಲಾಜೆ ಆಗ್ರಹ .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>