<p><strong>ಮೈಸೂರು</strong>: ‘ಜೆಎಸ್ಎಸ್ ವೈದ್ಯಕೀಯ ಕಾಲೇಜಿನಲ್ಲಿ ‘ಅನ್ವಯಿಕ ಆರೋಗ್ಯ ವಿಜ್ಞಾನ’ ಕೋರ್ಸ್ ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಅ.29ರಂದು ಬೆಳಿಗ್ಗೆ 10.30ಕ್ಕೆ ಶಿವರಾತ್ರೀಶ್ವರ ನಗರದ ರಾಜೇಂದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಾಂಶುಪಾಲ ಡಾ.ಎಚ್. ಬಸವನಗೌಡಪ್ಪ ತಿಳಿಸಿದರು.</p>.<p>‘ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಧಾರವಾಡದ ಐಐಡಿಯ ಡೀನ್ ಪ್ರೊ.ಎಸ್.ಎಂ. ಶಿವಪ್ರಸಾದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಅಧ್ಯಕ್ಷತೆ ವಹಿಸುವರು. ಜೆಎಸ್ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಸಮಕುಲಾಧಿಪತಿ ಬಿ. ಸುರೇಶ್ ಹಾಗೂ ಉಪಕುಲಪತಿ ಡಾ.ಸುರೀಂದರ್ ಸಿಂಗ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ’ ಎಂದು ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘13 ಬಿಎಸ್ಸಿ ಕೋರ್ಸ್ಗಳಿಂದ 151 ಹಾಗೂ 9 ಎಂಎಸ್ಸಿ ಹಾಗೂ ಎಂಪಿಎಚ್ ಕೋರ್ಸ್ಗಳಿಂದ ಸ್ನಾತಕೋತ್ತರ ಕೋರ್ಸ್ಗಳ 170 ವಿದ್ಯಾರ್ಥಿಗಳು ಸೇರಿ 321 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ವಿವಿಧ ಕೋರ್ಸ್ಗಳ 23 ಮಂದಿಗೆ ಚಿನ್ನದ ಪದಕ ಹಾಗೂ ಮೆರಿಟೋರಿಯಸ್ ಪ್ರಮಾಣಪತ್ರಗಳನ್ನು ನೀಡಲಾಗುವುದು’ ಎಂದು ಹೇಳಿದರು.</p>.<p>‘ಕಾಲೇಜಿನಲ್ಲಿ 2010ರಿಂದ ‘ಅನ್ವಯಿಕ ಆರೋಗ್ಯ ವಿಜ್ಞಾನ’ ಕೋರ್ಸ್ ಪೂರೈಸಿದ ಒಟ್ಟು 1,737 ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಈ ಕೋರ್ಸ್ ಮುಗಿಸಿದವರಿಗೆ ಶ ಹಾಗೂ ವಿದೇಶಗಳಲ್ಲಿ ಉತ್ತಮ ಉದ್ಯೋಗದ ಅವಕಾಶಗಳಿವೆ’ ಎಂದರು.</p>.<p>ಕುಲಸಚಿವ ಡಾ.ಬಿ. ಮಂಜುನಾಥ್, ಬಯೋಮೆಡಿಕಲ್ ಸೈನ್ಸ್ ವಿಭಾಗದ ಡೀನ್ ಡಾ.ಎಂ.ಎನ್. ಸುಮಾ, ಆಡಳಿತಾಧಿಕಾರಿ ಸತೀಶ್ ಚಂದ್ರ, ಪರೀಕ್ಷಾ ನಿಯಂತ್ರಕ ಸುಧೀಂದ್ರ ಭಟ್ ಹಾಗೂ ಉಪ ಪ್ರಾಂಶುಪಾಲ ಡಾ.ಪ್ರವೀಣ್ ಕುಲಕರ್ಣಿ ಪಾಲ್ಗೊಂಡಿದ್ದರು.</p>.<p>Cut-off box - ‘ತಾರೇ ಜಮೀನ್ ಪರ್’ ಕಾರ್ಯಕ್ರಮ 17ರಂದು ಮೈಸೂರು: ‘ರೋಟರಿ ಮೈಸೂರು ವತಿಯಿಂದ ನ.17ರಂದು ಬೆಳಿಗ್ಗೆ 9.30ರಿಂದ ಸಂಜೆ 6ರವರೆಗೆ ಹುಣಸೂರು ರಸ್ತೆಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ವಿಶೇಷ ಮಕ್ಕಳಿಗಾಗಿ ‘ತಾರೇ ಜಮೀನ್ ಪರ್’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಉದ್ಯಮಿ ಗುರು ತಿಳಿಸಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ವಿಶೇಷ ಮಕ್ಕಳು ವೈಯಕ್ತಿಕವಾಗಿ ಹಾಗೂ ತಂಡವಾಗಿ ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸಲಿದ್ದಾರೆ. ಅಭಿನಯ ನಾಟಕ ಛದ್ಮವೇಶ ಚಿತ್ರಕಲೆ ನೃತ್ಯ ಮೊದಲಾದವುಗಳನ್ನು ಪ್ರದರ್ಶಿಸಲು ಅವಕಾಶ ನೀಡಲಾಗುವುದು. 600 ಮಕ್ಕಳು ಪಾಲ್ಗೊಳ್ಳಲಿದ್ದಾರೆ’ ಎಂದರು. ಖಜಾಂಚಿ ಎಂ.ಸಿ.ಎಸ್. ಮನೋಹರ್ ಕಾರ್ಯದರ್ಶಿ ಕೆ.ಎನ್.ಸುಹಾಸ್ ಅಧ್ಯಕ್ಷ ಎನ್.ಪ್ರವೀಣ್ ಪೊನ್ನಣ್ಣ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಜೆಎಸ್ಎಸ್ ವೈದ್ಯಕೀಯ ಕಾಲೇಜಿನಲ್ಲಿ ‘ಅನ್ವಯಿಕ ಆರೋಗ್ಯ ವಿಜ್ಞಾನ’ ಕೋರ್ಸ್ ಪೂರೈಸಿದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಸಮಾರಂಭವನ್ನು ಅ.29ರಂದು ಬೆಳಿಗ್ಗೆ 10.30ಕ್ಕೆ ಶಿವರಾತ್ರೀಶ್ವರ ನಗರದ ರಾಜೇಂದ್ರ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ’ ಎಂದು ಪ್ರಾಂಶುಪಾಲ ಡಾ.ಎಚ್. ಬಸವನಗೌಡಪ್ಪ ತಿಳಿಸಿದರು.</p>.<p>‘ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಧಾರವಾಡದ ಐಐಡಿಯ ಡೀನ್ ಪ್ರೊ.ಎಸ್.ಎಂ. ಶಿವಪ್ರಸಾದ್ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳುವರು. ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಸಿ.ಜಿ. ಬೆಟಸೂರಮಠ ಅಧ್ಯಕ್ಷತೆ ವಹಿಸುವರು. ಜೆಎಸ್ಎಸ್ ಉನ್ನತ ಶಿಕ್ಷಣ ಹಾಗೂ ಸಂಶೋಧನಾ ಅಕಾಡೆಮಿಯ ಸಮಕುಲಾಧಿಪತಿ ಬಿ. ಸುರೇಶ್ ಹಾಗೂ ಉಪಕುಲಪತಿ ಡಾ.ಸುರೀಂದರ್ ಸಿಂಗ್ ಗೌರವ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ’ ಎಂದು ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘13 ಬಿಎಸ್ಸಿ ಕೋರ್ಸ್ಗಳಿಂದ 151 ಹಾಗೂ 9 ಎಂಎಸ್ಸಿ ಹಾಗೂ ಎಂಪಿಎಚ್ ಕೋರ್ಸ್ಗಳಿಂದ ಸ್ನಾತಕೋತ್ತರ ಕೋರ್ಸ್ಗಳ 170 ವಿದ್ಯಾರ್ಥಿಗಳು ಸೇರಿ 321 ಅಭ್ಯರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು. ವಿವಿಧ ಕೋರ್ಸ್ಗಳ 23 ಮಂದಿಗೆ ಚಿನ್ನದ ಪದಕ ಹಾಗೂ ಮೆರಿಟೋರಿಯಸ್ ಪ್ರಮಾಣಪತ್ರಗಳನ್ನು ನೀಡಲಾಗುವುದು’ ಎಂದು ಹೇಳಿದರು.</p>.<p>‘ಕಾಲೇಜಿನಲ್ಲಿ 2010ರಿಂದ ‘ಅನ್ವಯಿಕ ಆರೋಗ್ಯ ವಿಜ್ಞಾನ’ ಕೋರ್ಸ್ ಪೂರೈಸಿದ ಒಟ್ಟು 1,737 ವಿದ್ಯಾರ್ಥಿಗಳು ಪದವಿ ಪಡೆದಿದ್ದಾರೆ. ಈ ಕೋರ್ಸ್ ಮುಗಿಸಿದವರಿಗೆ ಶ ಹಾಗೂ ವಿದೇಶಗಳಲ್ಲಿ ಉತ್ತಮ ಉದ್ಯೋಗದ ಅವಕಾಶಗಳಿವೆ’ ಎಂದರು.</p>.<p>ಕುಲಸಚಿವ ಡಾ.ಬಿ. ಮಂಜುನಾಥ್, ಬಯೋಮೆಡಿಕಲ್ ಸೈನ್ಸ್ ವಿಭಾಗದ ಡೀನ್ ಡಾ.ಎಂ.ಎನ್. ಸುಮಾ, ಆಡಳಿತಾಧಿಕಾರಿ ಸತೀಶ್ ಚಂದ್ರ, ಪರೀಕ್ಷಾ ನಿಯಂತ್ರಕ ಸುಧೀಂದ್ರ ಭಟ್ ಹಾಗೂ ಉಪ ಪ್ರಾಂಶುಪಾಲ ಡಾ.ಪ್ರವೀಣ್ ಕುಲಕರ್ಣಿ ಪಾಲ್ಗೊಂಡಿದ್ದರು.</p>.<p>Cut-off box - ‘ತಾರೇ ಜಮೀನ್ ಪರ್’ ಕಾರ್ಯಕ್ರಮ 17ರಂದು ಮೈಸೂರು: ‘ರೋಟರಿ ಮೈಸೂರು ವತಿಯಿಂದ ನ.17ರಂದು ಬೆಳಿಗ್ಗೆ 9.30ರಿಂದ ಸಂಜೆ 6ರವರೆಗೆ ಹುಣಸೂರು ರಸ್ತೆಯ ಮುಕ್ತ ವಿವಿ ಘಟಿಕೋತ್ಸವ ಭವನದಲ್ಲಿ ವಿಶೇಷ ಮಕ್ಕಳಿಗಾಗಿ ‘ತಾರೇ ಜಮೀನ್ ಪರ್’ ಎಂಬ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ’ ಎಂದು ಉದ್ಯಮಿ ಗುರು ತಿಳಿಸಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ವಿಶೇಷ ಮಕ್ಕಳು ವೈಯಕ್ತಿಕವಾಗಿ ಹಾಗೂ ತಂಡವಾಗಿ ಪಾಲ್ಗೊಂಡು ಪ್ರತಿಭೆ ಪ್ರದರ್ಶಿಸಲಿದ್ದಾರೆ. ಅಭಿನಯ ನಾಟಕ ಛದ್ಮವೇಶ ಚಿತ್ರಕಲೆ ನೃತ್ಯ ಮೊದಲಾದವುಗಳನ್ನು ಪ್ರದರ್ಶಿಸಲು ಅವಕಾಶ ನೀಡಲಾಗುವುದು. 600 ಮಕ್ಕಳು ಪಾಲ್ಗೊಳ್ಳಲಿದ್ದಾರೆ’ ಎಂದರು. ಖಜಾಂಚಿ ಎಂ.ಸಿ.ಎಸ್. ಮನೋಹರ್ ಕಾರ್ಯದರ್ಶಿ ಕೆ.ಎನ್.ಸುಹಾಸ್ ಅಧ್ಯಕ್ಷ ಎನ್.ಪ್ರವೀಣ್ ಪೊನ್ನಣ್ಣ ಹಾಜರಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>