<p><strong>ಮೈಸೂರು:</strong> ಅಶೋಕಪುರಂ ನಿಲ್ದಾಣವು ಮೈಸೂರಿನ ಎರಡನೇ ದೊಡ್ಡ ರೈಲು ನಿಲ್ದಾಣವಾಗಿ ಹೊರಹೊಮ್ಮಿದ್ದು, ಇಲ್ಲಿಂದಲೇ ಆರು ಪ್ರಮುಖ ರೈಲುಗಳ ಸಂಚಾರ ಆರಂಭಕ್ಕೆ ಮನವಿ ಮಾಡಲಾಗಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.</p>.<p>ನಗರದ ಅಶೋಕಪುರಂ ರೈಲು ನಿಲ್ದಾಣದಲ್ಲಿ ₹37.5 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿಗಳು, ರೈಲ್ವೆ ಯಾರ್ಡ್, ಎರಡನೇ ಪ್ರವೇಶ ದ್ವಾರ ಹಾಗೂ ಹೊಸತಾಗಿ ನಿರ್ಮಿಸಲಾದ ಪಾದಚಾರಿ ಮೇಲ್ಸೆತುವೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ ಬೆಂಗಳೂರು–ಮೈಸೂರು ನಡುವೆ ಸಂಚರಿಸುವ ನಾಲ್ಕು ಮೆಮು ರೈಲುಗಳ ಜೊತೆಗೆ ಚೆನ್ನೈಗೆ ತೆರಳುವ ಕಾವೇರಿ ಎಕ್ಸ್ ಪ್ರೆಸ್ ಮತ್ತು ಮಾಲ್ಗುಡಿ ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಇಲ್ಲಿಂದಲೇ ಆರಂಭಿಸಲು ಪ್ರಸ್ತಾವ ಸಲ್ಲಿಸಲಾಗಿದೆ. ತಿರುಪತಿ ಎಕ್ಸ್ಪ್ರೆಸ್ ರೈಲು ಅಶೋಕಪುರಂನಲ್ಲಿ ನಿಲ್ಲುವಂತೆಯೂ ಕೋರಲಾಗಿದೆ’ ಎಂದರು.</p>.<p>ನವೀಕೃತ ನಿಲ್ದಾಣದಲ್ಲಿ ಐದು ಪ್ಲಾಟ್ಫಾರ್ಮ್ಗಳನ್ನು ಈಗಾಗಲೇ ನಿರ್ಮಿಸಿದ್ದು, ಶೀಘ್ರದಲ್ಲೇ ಆರನೇ ಪ್ಲಾಟ್ಫಾರ್ಮ್ ನಿರ್ಮಾಣ ಆಗಲಿದೆ. ಮೈಸೂರಿಗೆ ಬರುವ ರೈಲುಗಾಡಿಗಳನ್ನು ಚಾಮರಾಜನಗರ ಕಡೆಗೆ ವಿಸ್ತರಿಸಬಹುದಾಗಿದೆ. ಸ್ಟೇಬ್ಲಿಂಗ್ ಲೈನ್ ನಿರ್ಮಿಸಲಾಗಿದ್ದು , ಇದರಿಂದ ರೈಲುಗಳನ್ನು ಈ ಜಾಗದಲ್ಲಿ ನಿಲುಗಡೆ ಮಾಡಲು ಅವಕಾಶವಾಗುತ್ತದೆ. ಜನರ ಅನುಕೂಲಕ್ಕಾಗಿ ಎಕ್ಸಲೇಟರ್ ಮೊದಲಾದ ಸೌಲಭ್ಯಗಳನ್ನೂ ಹಂತಹಂತವಾಗಿ ಕಲ್ಪಿಸಲಾಗುವುದು ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಟಿ.ಎಸ್. ಶ್ರೀವತ್ಸ ‘ಅಶೋಕಪುರಂ ರೈಲ್ವೆ ನಿಲ್ದಾಣದ ಬಳಿ ಸಂಜೆಯಾದರೆ ಜನರು ಓಡಾಡಲು ಭಯಪಡುತ್ತಿದ್ದರು. ಕಸ ತೊಟ್ಟಿಯಾಗಿ ಮಾರ್ಪಟ್ಟಿತ್ತು. ಇದೀಗ ನಿಲ್ದಾಣಕ್ಕೆ ಕಾಯಕಲ್ಪ ಸಿಕ್ಕಿದೆ. ಮುಖ್ಯ ರೈಲ್ವೆ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಆಗಲಿದೆ’ ಎಂದರು.</p>.<p>ನೈರುತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕಿ ಶಿಲ್ಪಿ ಅಗರವಾಲ್, ಹೆಚ್ಚುವರಿ ವ್ಯವಸ್ಥಾಪಕ ವಿನಾಯಕ್ ನಾಯಕ್, ರೈಲ್ವೆ ಎಂಜಿನಿಯರ್ ರವಿಚಂದ್ರ, ವಿಭಾಗೀಯ ಎಂಜಿನಿಯರ್ ಕೇಶವಮೂರ್ತಿ, ಮಾಜಿ ಮೇಯರ್ ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಅಶೋಕಪುರಂ ನಿಲ್ದಾಣವು ಮೈಸೂರಿನ ಎರಡನೇ ದೊಡ್ಡ ರೈಲು ನಿಲ್ದಾಣವಾಗಿ ಹೊರಹೊಮ್ಮಿದ್ದು, ಇಲ್ಲಿಂದಲೇ ಆರು ಪ್ರಮುಖ ರೈಲುಗಳ ಸಂಚಾರ ಆರಂಭಕ್ಕೆ ಮನವಿ ಮಾಡಲಾಗಿದೆ ಎಂದು ಸಂಸದ ಪ್ರತಾಪ ಸಿಂಹ ತಿಳಿಸಿದರು.</p>.<p>ನಗರದ ಅಶೋಕಪುರಂ ರೈಲು ನಿಲ್ದಾಣದಲ್ಲಿ ₹37.5 ಕೋಟಿ ವೆಚ್ಚದಲ್ಲಿ ನವೀಕರಣ ಕಾಮಗಾರಿಗಳು, ರೈಲ್ವೆ ಯಾರ್ಡ್, ಎರಡನೇ ಪ್ರವೇಶ ದ್ವಾರ ಹಾಗೂ ಹೊಸತಾಗಿ ನಿರ್ಮಿಸಲಾದ ಪಾದಚಾರಿ ಮೇಲ್ಸೆತುವೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ ಬೆಂಗಳೂರು–ಮೈಸೂರು ನಡುವೆ ಸಂಚರಿಸುವ ನಾಲ್ಕು ಮೆಮು ರೈಲುಗಳ ಜೊತೆಗೆ ಚೆನ್ನೈಗೆ ತೆರಳುವ ಕಾವೇರಿ ಎಕ್ಸ್ ಪ್ರೆಸ್ ಮತ್ತು ಮಾಲ್ಗುಡಿ ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಇಲ್ಲಿಂದಲೇ ಆರಂಭಿಸಲು ಪ್ರಸ್ತಾವ ಸಲ್ಲಿಸಲಾಗಿದೆ. ತಿರುಪತಿ ಎಕ್ಸ್ಪ್ರೆಸ್ ರೈಲು ಅಶೋಕಪುರಂನಲ್ಲಿ ನಿಲ್ಲುವಂತೆಯೂ ಕೋರಲಾಗಿದೆ’ ಎಂದರು.</p>.<p>ನವೀಕೃತ ನಿಲ್ದಾಣದಲ್ಲಿ ಐದು ಪ್ಲಾಟ್ಫಾರ್ಮ್ಗಳನ್ನು ಈಗಾಗಲೇ ನಿರ್ಮಿಸಿದ್ದು, ಶೀಘ್ರದಲ್ಲೇ ಆರನೇ ಪ್ಲಾಟ್ಫಾರ್ಮ್ ನಿರ್ಮಾಣ ಆಗಲಿದೆ. ಮೈಸೂರಿಗೆ ಬರುವ ರೈಲುಗಾಡಿಗಳನ್ನು ಚಾಮರಾಜನಗರ ಕಡೆಗೆ ವಿಸ್ತರಿಸಬಹುದಾಗಿದೆ. ಸ್ಟೇಬ್ಲಿಂಗ್ ಲೈನ್ ನಿರ್ಮಿಸಲಾಗಿದ್ದು , ಇದರಿಂದ ರೈಲುಗಳನ್ನು ಈ ಜಾಗದಲ್ಲಿ ನಿಲುಗಡೆ ಮಾಡಲು ಅವಕಾಶವಾಗುತ್ತದೆ. ಜನರ ಅನುಕೂಲಕ್ಕಾಗಿ ಎಕ್ಸಲೇಟರ್ ಮೊದಲಾದ ಸೌಲಭ್ಯಗಳನ್ನೂ ಹಂತಹಂತವಾಗಿ ಕಲ್ಪಿಸಲಾಗುವುದು ಎಂದರು.</p>.<p>ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಟಿ.ಎಸ್. ಶ್ರೀವತ್ಸ ‘ಅಶೋಕಪುರಂ ರೈಲ್ವೆ ನಿಲ್ದಾಣದ ಬಳಿ ಸಂಜೆಯಾದರೆ ಜನರು ಓಡಾಡಲು ಭಯಪಡುತ್ತಿದ್ದರು. ಕಸ ತೊಟ್ಟಿಯಾಗಿ ಮಾರ್ಪಟ್ಟಿತ್ತು. ಇದೀಗ ನಿಲ್ದಾಣಕ್ಕೆ ಕಾಯಕಲ್ಪ ಸಿಕ್ಕಿದೆ. ಮುಖ್ಯ ರೈಲ್ವೆ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಆಗಲಿದೆ’ ಎಂದರು.</p>.<p>ನೈರುತ್ಯ ರೈಲ್ವೆ ವಿಭಾಗೀಯ ವ್ಯವಸ್ಥಾಪಕಿ ಶಿಲ್ಪಿ ಅಗರವಾಲ್, ಹೆಚ್ಚುವರಿ ವ್ಯವಸ್ಥಾಪಕ ವಿನಾಯಕ್ ನಾಯಕ್, ರೈಲ್ವೆ ಎಂಜಿನಿಯರ್ ರವಿಚಂದ್ರ, ವಿಭಾಗೀಯ ಎಂಜಿನಿಯರ್ ಕೇಶವಮೂರ್ತಿ, ಮಾಜಿ ಮೇಯರ್ ಶಿವಕುಮಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>